ನಿಃಕಲ ಶಿವತತ್ವದಲ್ಲಿ ಜ್ಞಾನಚಿತ್ತು

ವಿಕಿಸೋರ್ಸ್ದಿಂದ



Pages   (key to Page Status)   


ನಿಃಕಲ ಶಿವತತ್ವದಲ್ಲಿ ಜ್ಞಾನಚಿತ್ತು ಉದಯವಾಯಿತ್ತು. ಆ ಚಿತ್ತಿನಿಂದ ಆಕಾರ ಉಕಾರ ಮಕಾರಗಳೆಂಬ ಅಕ್ಷರತ್ರಯಂಗಳಾದವು. ಅಕಾರವೇ ನಾದ
ಉಕಾರವೇ ಬಿಂದು
ಮಕಾರವೇ ಕಳೆ. ಇಂತೀ ತ್ರಿವಿಧಕಕ್ಕೆ ತಾಯಿ ಚಿತ್ತು. ಇಂತೀ ನಾಲ್ಕು ಒಂದಾದಲ್ಲಿ ಓಂಕಾರವೆಂಬ ಪ್ರಣವದುತ್ಪತ್ತಿಯಾಯಿತ್ತು. ಆ ಓಂಕಾರವೆಂಬ ಪ್ರಣವವೇ
ಅಖಂಡ ಪರಿಪೂರ್ಣ ಗೋಳಕಾಕಾರ ತೇಜೋಮೂರ್ತಿಯಪ್ಪ ಮಹಾಲಿಂಗನೋಡಾ
ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.