ನೋಡಿಹೆನೆಂದರೆ ನೋಟ ಸಮರಸವಾಯಿತ್ತು.
ಗೋಚರ
ಲೇಖಕರು: ತೊಂಟದ ಸಿದ್ಧಲಿಂಗೇಶ್ವರ ಶಿವಯೋಗಿಗಳು
ಶೀರ್ಷಿಕೆ: vachana saahitya
ವರ್ಷ: 1550-1600 AD
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ನೋಡಿಹೆನೆಂದರೆ ನೋಟ ಸಮರಸವಾಯಿತ್ತು. ಕೂಡಿಹೆನೆಂದರೆ ಕೂಟ ನಿಬ್ಬೆರಗಾಯಿತ್ತಯ್ಯ. ನೋಟ ಕೂಟಗಳೆಂಬುಭಯವಳಿದು
ನಿಜದಲ್ಲಿ ನಿರ್ವಯಲಾಯಿತ್ತಯ್ಯ. ನೋಡಲಿಲ್ಲದ ನುಡಿಸಲಿಲ್ಲದ ಕೂಡಿಲಿಲ್ಲದಪ್ರತಿಮ ತಾನು ತಾನಾದ ಪರಮಾನಂದ ಸುಖದಲ್ಲಿ ಓಲಾಡುತ್ತಿರ್ದೆನಯ್ಯಾ
ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.