ಪುಟ:ಉತ್ತರ ಕರ್ನಾಟಕದ ಜಾನಪದ ಕಥೆಗಳು.pdf/೧೦೦

ವಿಕಿಸೋರ್ಸ್ದಿಂದ
ಈ ಪುಟವನ್ನು ಪರಿಶೀಲಿಸಲಾಗಿದೆ

ಅತಿಮಾನುಷ ಕಥೆಗಳು

೭೩

ಕಳಿಸಿದರು. ಆತನು ಜಿಗಿದಾಡುತ್ತ ತನ್ನೂರಿಗೆ ತೆರಳಿದನು.

ಕೆಲವು ದಿನ ಕಳೆಯುವಷ್ಟರಲ್ಲಿ, ಸಾಹುಕಾರನ ಹೆಂಡತಿಯನ್ನು ಬಡಕೊಂಡು ಸವಿಗೊಂಡ ದೆವ್ವ ಮತ್ತೆ ಬಂದು ಸೇರಿಕೊಂಡಿತ್ತು. ಗುಮಾಸ್ತರೆಲ್ಲರೂ ಪುನಃ ಮಾಂತ್ರಿಕರನ್ನು ಕರೆತರಹತ್ತಿದರು. ಲಾವಣಿಕಾರನಿಗೂ ಆ ಸುದ್ದಿ ತಿಳಿಯಿತು. ಸೊಲ್ಲಾಪುರದ ಸಾಹುಕಾರನ ಮನೆಗೆ ಹೋಗಿ, ನೇರವಾಗಿ ದೆವ್ವಿನ ಮುಂದೆ ಕುಳಿತು ತನ್ನ ಮಂತ್ರ ಪಠಿಸತೊಡಗಿದನು ದೆವ್ವ "ಮತ್ತೇಕೆ ಬಂದೆಯೋ ನೀನು? ನಿನ್ನ ವಚನದಿಂದ ಪಾರಾಗಿದ್ದೇನೆ. ಇನ್ನು ನಿನ್ನ ಮಂತ್ರಕ್ಕೆ ನಾನು ಬೆಚ್ಚುವುದಿಲ್ಲ. ಒಳ್ಳೆಯ ಮಾತಿನಲ್ಲಿ ಇಲ್ಲಿಂದ ಹೊರಟುಹೋಗು? ಎಂದಿತು.

ಲಾವಣಿಕಾರನು ಬಹಳಹೊತ್ತು ಮಂತ್ರ ಮಣಮಣಿಸಿದರೂ ಉಪಯೋಗವಾಗಲಿಲ್ಲ. ಜೇಸರಿಯುವ ಹೊತ್ತಿಗೆ ಯುಕ್ತಿ ನೆನಪಾಯಿತು. ಸಾಹುಕಾರನ ಗುಮಾಸ್ತರಿಗೆ ಹೇಳಿ ಒಂದು ತುಂತೂನಿ ಸ್ವರಕಟ್ಟೆ ತನ್ನ ಲಾವಣಿ ಹಾಡಲು ಆರಂಭಿಸುತ್ತಲೇ ದೆವ್ವ ಎದ್ದು ಕುಣಿದಾಡತೊಡಗಿತು "ಹಾಡಬೇಡವೋ ಮಹಾರಾಯಾ, ನಿನ್ನ ಅಪಸ್ಥರದ ಗಾಯನ ಕೇಳಿ ತಲೆ ಸೀಳತೊಡಗಿತು. ಹೋಗುತ್ತೇನಪ್ಪಾ ಈ ಸಾರೆ ಹೋದರೆ ಮತ್ತೆಂದೂ ಮರಳಿ ಬರುವದಿಲ್ಲ. ನಿಜವಾಗಿಯೂ ಹೋಗಿಬಿಡುತ್ತೇನೆ" ಎನ್ನುತ್ತ ಆ ದೆವ್ಹವು ಶ್ರೀಮಂತನ ಹೆಂಡತಿಯನ್ನು ಬಿಟ್ಟು ಹೋದದ್ದು ಹೋಗಿಯೇ ಬಿಟ್ಟಿತು. ಮತ್ತೆ ಮುಖ ತೋರಲಿಲ್ಲ.

ಲಾವಣಿಕಾರನ ಪ್ರಯತ್ನಕ್ಕೆ ಆ ಶ್ರೀಮ೦ತನು ಬೊಗಸೆ ಬೊಗಸೆ ಸಂಭಾವನೆ ಕೊಟ್ಟು ಕಳಿಸಿದನು. ಆದರೆ ದೆವ್ವ ಕಲಿಸಿದ ಮಂತ್ರ ದೆವ್ವಿಗೇ ಮುಳುವಾಯಿತು. ಅದರ ಮಂತ್ರಕ್ಕೆ ತಿರುಮಂತ್ರವಾಯಿತು.

 •