ಪುಟ:ಉತ್ತರ ಕರ್ನಾಟಕದ ಜಾನಪದ ಕಥೆಗಳು.pdf/೧೧೫

ವಿಕಿಸೋರ್ಸ್ದಿಂದ
ಈ ಪುಟವನ್ನು ಪರಿಶೀಲಿಸಲಾಗಿದೆ

ಲೆಕ್ಕಾಚಾರದ ಅತ್ತೆ

ಒಂದೂರಲ್ಲಿ ತಾಯಿ ಮಗ ಇದ್ದರು. ಮಗನ ಹೆಂಡತಿಯೂ ಬಂದಿದ್ದಳು.

ಸೊಸೆಯ ಕೈಯಿಂದ ಅಡಿಗೆ ಮಾಡಿಸುವಾಗ ಅತ್ತೆಯು ಹಿಟ್ಟು ಬೇಳೆ, ಸೊಪ್ಪು, ಖಾರಗಳನ್ನೆಲ್ಲ ಲೆಕ್ಕಾಚಾರದಿಂದ ತೆಗೆದುಕೊಡುವಳು. ಅದರಿಂದ ಅಡಿಗೆ ಹಾಳಾಗುವದಕ್ಕೆ ಅವಕಾಶವೇ ಇಲ್ಲವೆಂದು ಅತ್ತೆ ಬಗೆದಿದ್ದಳು.

ಮಕರಸಂಕ್ರಮಣದ ಕಾಲಕ್ಕೆ ಅತ್ತೆ ಸೊಸೆಂಯನ್ನು ಕರೆದು, ಮೂರೆಂದರೆ ಮೂರೇ ರೊಟ್ಟಿಯಾಗುವಷ್ಟು ಸಜ್ಜೆಹಿಟ್ಟು ಮೂರು ಬದನೆಕಾಯಿ ಕೊಟ್ಟಳು. "ಇದರಿಂದ ತಲೆಗೊಂದು ರೊಟ್ಟಿ, ಮೇಲೆ ಇಡಿಗಾಯಿ ಬದನೆಕಾಯಿ ಪಲ್ಲೆ ಆಗುತ್ತದೆ. ಜೋಕೆಯಿಂದ ಮಾಡು" ಎಂದು ಸೂಚಿಸಿದಳು.

ಎಳ್ಳುಹಚ್ಚಿದ ಮೂರುರೊಟ್ಟಿ, ಬದನೆಕಾಯಿಪಲ್ಲೆ ಸಿದ್ಧಪಡಿಸಿದ ಸೊಸೆಗೆ ಬದನೆಕಾಯಿಪಲ್ಲೆಂಯ ವಾಸನೆಯು ಆಕೆಯ ಬಾಂಹಲ್ಲಿ ನೀರೂರಿಸಿತು. ಅದರ ತುಸು ಎಸರು ಕೈಯಲ್ಲಿ ಹಾಕಿಕೊಂಡು ನೆಕ್ಕಿದಳು. ಸೊಗಸಾಗಿತ್ತು. ತನ್ನ ಪಾಲಿನ ಒಂದು ರೊಟ್ಟಿ, ಒಂದು ಬದನೇಕಾಯಿ ತಿಂದೇಬಿಟ್ಟರಾಯಿತೆಂದು ಅದನ್ನೂ ಮುಗಿಸಿದಳು. ಸಾಕೆನಿಸಲಿಲ್ಲ. ಇನ್ನು, ಗಂಡನ ಪಾಲಿನ ರೊಟ್ಟಿ ಪಲ್ಲೆ ತಿನ್ನಬಹುದು. ಅವನಿಗೇನಾದರೂ ನೆವ ಹೇಳಿದರಾಗುವದು—ಎಂದು ಎರಡನೇ ರೊಟ್ಟಿಯನ್ನೂ ಆಗು ಮಾಡಿದಳು. ಇನ್ನುಳಿದದ್ದು ಅತ್ತೆಯ ಪಾಲಿನ ರೊಟ್ಟಿ. "ಜೀವ ಕೇಳಲೊಲ್ಲದು. ತಿಂದೇಬಿಡುವೆ. ಬಯ್ದಷ್ಟು ಬಯ್ಯಲಿ" ಎಂದು ಅದನ್ನೂ ಬಕ್ಕರಿಸಿಬಿಟ್ಟಳು.

ಉಣ್ಣುವ ಹೊತ್ತಿಗೆ ಗಂಡ ಬಂದನು. ಅತ್ತೆ ಬಂದಳು. ಅವರಿಗೆ ಊಟಕ್ಕೇನೂ ಇರಲಿಲ್ಲ. ಮಾಡಿದ ರೊಟ್ಟಿ ಪಲ್ಲೆ ಎಲ್ಲಿ—ಎಂದು ಅತ್ತೆ ಕೇಳಿದರೆ ಸೊಸೆ ಇದ್ದ ಸಂಗತಿಯನ್ನೆಲ್ಲ ಹೇಳಿಬಿಟ್ಟಳು.

"ನೋಡಿದೆಯಾ ? ಇಂಥಾಕೆಯನ್ನು ಏನು ಮಾಡಬೇಕೋ ತಮ್ಮ ?" ಎಂದು ಮಗನಿಗೆ ಕೇಳಿದಳು.

"ನಿನಗೆ ತಿಳಿದಂತೆ ಮಾಡವ್ಟ" ಎಂದನು ಮಗ.