ಪುಟ:ಉತ್ತರ ಕರ್ನಾಟಕದ ಜಾನಪದ ಕಥೆಗಳು.pdf/೧೬೫

ವಿಕಿಸೋರ್ಸ್ದಿಂದ
ಈ ಪುಟವನ್ನು ಪರಿಶೀಲಿಸಲಾಗಿದೆ

೧೩೮

ಜನಪದ ಕಥೆಗಳು

ಅವರ ಔದಾರ್ಯವನ್ನು ಹೊಗಳ ತೊಡಗಿದರು.

ಗಂಡಹೆಂಡಿರು ಕೈಮುಗಿದು - "ಅದೆಲ್ಲ ತಮ್ಮ ಪಾದರಕ್ಷೆಯ ಪುಣ್ಯ" ಎಂದು ವಿನಯಿಸಿದರು.

ಸೇವಕನನ್ನು ಕರೆದು ಗುರುಗಳು ಮುಂದಿನ ಪಂಯಣದ ಸಿದ್ಧ ತೆ ನಡೆಸಿದರು. ಗಂಡಹೆಂಡಿರನ್ನು ಕರೆದು ಅವರ ಭಕ್ತಿಯನ್ನೂ ಔದಾರ್ಯವನ್ನೂ ಕೊಂಡಾಡಿದರು. ದಂಪತಿಗಳಿಬ್ಬರೂ ಗುರುಗಳ ಕಾಲಿಗೆರಗಿ - "ತಮ್ಮ ಪಾದರಕ್ಷೆಯ ಪುಣ್ಯ' ಎನ್ನುತ್ತ ಆಶೀರ್ವಾದ ಪಡೆದರು.

ಮುಂದಿನೂರು ತಲುಪಿ ಬೀಡು ಬಿಟ್ಟಾಗ ಗುರುಗಳು ತಮ್ಮ ಚಮ್ಮಳಿಗೆಗಳನ್ನು ಹುಡುಕಾಡಿದರೆ ಸಿಗಲೇ ಇಲ್ಲ. ಸೇವಕನನ್ನು ಕೇಳಿದರು - "ಎಲ್ಲಿ ಮಾಯವಾದವು?"

ಗುರುಗಳಿಗಂತೂ ಏನೂ ತಿಳಿಯಲಿಲ್ಲ. ಕೊನೆಗೆ ಸೇವಕನೇ ಅನುಮಾನಿಸುತ್ತ ನುಡಿದನು "ಹಿಂದಿನೂರಿನ ಶಿಷ್ಯಮಕ್ಕಳು ಮಾತುಮಾತಿಗೆ "ತಮ್ಮ ಪಾದರಕ್ಷೆಯ ಪುಣ್ಯ'ವೆನ್ನುತ್ತಿದ್ದರು. ಅವರೇ ಪುಣ್ಯಕಟ್ಟಿಕೊಂಡಂತೆ ಕಾಣುತ್ತದೆ."

"ಗುರುದಕ್ಷಿಣೆ ಈ ಬಗೆಯಾಗಿ ಸಿಕ್ಕಿತೆನ್ನೋಣ - ಗುರುವಿನಿಂದ ದಕ್ಷಿಣೆ" ಎಂದರು ಗುರುಗಳು.

 •