ಪುಟ:ಉತ್ತರ ಕರ್ನಾಟಕದ ಜಾನಪದ ಕಥೆಗಳು.pdf/೧೯೭

ವಿಕಿಸೋರ್ಸ್ದಿಂದ
ಈ ಪುಟವನ್ನು ಪ್ರಕಟಿಸಲಾಗಿದೆ

೧೭೦

ಜನಪದ ಕಥೆಗಳು

ಗಾಬರಿಗೊಂಡು ಹೇಳಿದಳು.

ಹಾವು ಸಿಟ್ಟಿನಿಂದ ಕಾವರ್‌ ಬಾವರ್‌ ಎಂದು ಮೈಯೆಲ್ಲ ಪರಚಿಕೊಂಡಿತು. "ನಿನ್ನ ತಮ್ಮನನ್ನು ನಾನು ಕೊಲ್ಲುತ್ತೇನೆ" ಎಂದು ಚೀರಾಡಿತು.

"ನನ್ನ ತಮ್ಮನನ್ನು ನಾನೇ ಕೊಂದುಬಿಡುತ್ತೇನೆ. ನೀನೇನೂ ಕಾಳಜಿ ಮಾಡುವುದು ಬೇಡ" ಎಂದು ಸಮಾಧಾನ ಮಾಡಿ ನಾಗೇಂದ್ರನನ್ನು ಹೊರಗೆ ಕಳಿಸುತ್ತಾಳೆ.

ಆಕೆ ಒಂದು ಹಲ್ಲಿಯನ್ನು ಕೊಂದು ಅದರ ರಕ್ತವನ್ನು ಗೋಡೆಗೆ ಸವರಿದಳು ಹಾಗೂ ತಮ್ಮನನ್ನು ಮುಚ್ಚಿಟ್ಟಳು. ನಾಗೇಂದ್ರನು ಮೇದು ತಿರುಗಿ ಬಂದಾಗ, ಗೋಡೆಯ ಮೇಲಿನ ರಕ್ತ ತೋರಿಸಿ ಸಮಾಧಾನ ಮಾಡಿದಳು.

ಅಕ್ಕನಿಗೆ ಕೇಳುತ್ತಾನೆ ತಮ್ಮ—"ನಾಗೇಂದ್ರನ ಜೀವ ಏತರಲ್ಲಿದೆ ತಿಳಿಸು ಕೊಲ್ಲುತ್ತೇನೆ?

"ಆಗಲಿ" ಅನ್ನುತ್ತಾಳೆ ಅಕ್ಕ.

ವಾಡಿಕೆಯಂತೆ ನಾಗೇಂದ್ರ ಮನೆಗೆ ಬರಲು ಗಂಟಿ ಗಣ್‌ ಅಂದಿತು. ಮೆಟ್ಟು ಗಟ್ಟೆಯಿಂದ ನೀರು ಕೆಳಗಿಳಿಯಿತು. ಅವನು ಒಳಗೆ ಹೋದನು. ಸಮಯವರಿತು ಆ ಹೆಣ್ಣುಮಗಳು ಕೇಳಿದಳು "ನಾಗೇಂದ್ರ ನಾಗೇಂದ್ರ ನಿನ್ನ ಜೀವ ಯಾತರಲ್ಲಿದೆ ಹೇಳು."

"ನನಗಾರು ಹೊಡೆಯುತ್ತಾರೆ? ಆದರೂ ಹೇಳುತ್ತೇನೆ ಕೇಳು. ಬಿಸಿ ಬಿಸಿ ಹಾಲು ಗಟಗಟ ಕುಡಿಯುವುದರಲ್ಲಿ ನನ್ನ ಜೀವವಿದೆ" ಎಂದನು ನಾಗೇಂದ್ರ.

ಮರುದಿನ ಹಾಲನ್ನು ಸಳಮಳನೆ ಕುದಿಸಿದಳು. ಆರಿಸಲಾರದೆ ಇದ್ದಕ್ಕಿದ್ದ ಹಾಗೆಯೇ ಕಬ್ಬಿಣ ಬುಟ್ಟಿಯಲ್ಲಿ ಸುರುವಿದಳು. ನಾಗೇಂದ್ರನು ಸಳಮಳಿಸುವ ಹಾಲು ಕುಡಿಯುತ್ತಲೇ ಸತ್ತುಬಿದ್ದನು. ಆದರೆ ಅವನ ಹೊಟ್ಟೆಯಲ್ಲಿ ಸಾವಿರಾರು ತತ್ತಿಗಳಿದ್ದವು. ತಗ್ಗಿನಲ್ಲಿ ಒಯ್ದು ಸುಟ್ಟರೂ ಅವು ಬೆನ್ನು ಹತ್ತುವುದು ನಿಶ್ಚಯ.

ದುಗ್ಗ ಕೂಡಿಹಾಕಿ ಉರಿ ಹಚ್ಚಿದರು. ತಕ್ತಿಗಳೆಲ್ಲ ಸುಟ್ಟು ಭಸ್ಮವಾದವು. ಆದರೆ ಒಂದೇ ಒಂದು ತತ್ತಿ ಹೊಲದ ಎರೆಬೀಡಿನಲ್ಲಿ ಬಿತ್ತು.

ಒಂದಾದರೂ ತತ್ತಿ ಉಳಿಯಿತಲ್ಲ ಎಂಬ ಚಿಂತೆಯಾಯಿತು.
ಅದೆಷ್ಟು ನೆಲ ಅಗಿದರೂ ತತ್ತಿ ಸಿಗಲಿಲ್ಲ.
ಕೊನೆಗೂ ಸಿಗದಂತಾಗಲು ನಿರಾಶರಾಗಿ ಕುಳಿತರು.

"ಮನೆಗೆ ಹೋಗೋಣ" ಎಂದು ತಮ್ಮನು ಹೇಳಿದರೂ, ಆಗಲಿ ಎನ್ನುತ್ತ ಅಕ್ಕನು ನೆಲ ಕೆದರುತ್ತಲೇ ಕುಳಿತಳು.