ಪುಟ:ಉತ್ತರ ಕರ್ನಾಟಕದ ಜಾನಪದ ಕಥೆಗಳು.pdf/೨೦೫

ವಿಕಿಸೋರ್ಸ್ದಿಂದ
ಈ ಪುಟವನ್ನು ಪರಿಶೀಲಿಸಲಾಗಿದೆ

೧೭೮

ಜನಪದ ಕಥೆಗಳು

ಆ ಮಾತು ಕೇಳಿ ಮೀನಪ್ಪ ಬಳೆಗಾರನಿಗೆ ಕೇಳಿದನು - “ನನಗೆ ಭಾರಂಗ ಭಾವಿ ತೋರಿಸು.”

ಮೀನಪ್ಪ ಬಳೆಗಾರನ ಜೆನ್ನು ಹತ್ತಿ ಬಾವಿಯಲ್ಲಿ ಇಳಿದನು. ಒಳಗೆ ಹೋದಂತೆ ನೀರು ಮೆಟ್ಟಿಲು ಮೆಟ್ಟಿಲು ಇಳಿಯುತ್ತ ಹೋಯಿತು. ಏಳು ಹೆಡೆಯ ನಾಗೇಂದ್ರ ಮೀನಪ್ಪನಿಗೆ ಎಲ್ಲ ಸತ್ಕಾರ ಮಾಡಿ ತನ್ನಲಿಲ್ಹ್ದ ಸಂಪತ್ತು ಕೊಟ್ಟನು. ಹೆಣ್ಣು ಮಗಳೂ ಬೆಳ್ಳಿ ಬಂಗಾರ ತುಂಬಿಕೊಂಡು ನಾಗೇಂದ್ರನ ಅಪ್ಪಣೆ ಪಡೆದು ತನ್ನ ಗಂಡನ ಮನೆಗೆ ತಿರುಗಿ ಬಂದಳು.

ಆ ಸಂದರ್ಭದಲ್ಲಿ ತಿರುಗಾಡಲಿಕ್ಕೆ ಹೋದ ಮಿಡಿನಾಗೇಂದ್ರ ತಿರುಗಿ ಬಂತು. “ನಾನು ಮನೆಯಲ್ಲಿ ಇಲ್ಲದಾಗ ಅಕ್ಕ ಹೇಗೆ ಹೋದಳು. ನಾ ಹೋಗಿ ಅವಳ ಮಗನಿಗೆ ಕಚ್ಚತೀನಿ. ಬಚ್ಚಲ ಮನೀಲಿಂದ ಹೋಗಿ ಆ ಕೂಸಿಗೆ ಕಚ್ಚಿ ಬರ್ತಿನಿ” ಎಂದು ಹೊರಟಿತು.

ರಾತ್ರಿ ಆಗಿತ್ತು. ಕೂಸು ಅಳುತ್ತಿತ್ತು. ಸೀರೆಯ ಸೆರಗಿನಿಂದ ದೀಪ ತೆಗೆಯಲು ಹೋದಳು. ಮೀನಪ್ಪ ಹೆಂಡತಿಗೆ ಕೇಳುತ್ತಾನೆ - “ಹೀಂಗ ದೀಪ ಆರಿಸಿದರೆ ಸೀರೆ ಸುಟ್ಟು ಹೋಗುತ್ತವಲ್ಲ?" ಆ ಮಾತಿಗೆ ಹೆಣ್ಣು ಮಗಳು ಅನ್ನುತ್ತಾಳೆ ಹು “ನನ್ನ ತಮ್ಮ ಮಿಡಿನಾಗೇಂದ್ರ ಮನಸ್ಸು ಮಾಡಿದರೆ ನನಗೆ ಬೇಕಾದಷ್ಟು ಸೀರೆ ಸಿಗುತಾವ?”

ಮಿಡಿನಾಗೇಂದ್ರ ಅಕ್ಕನಾಡಿದ ಮಾತು ಕೇಳಿತು. ಕೂಸಿಗೆ ಕಚ್ಚಲಾರದೆ ಮೂಕಾಟದಲ್ಲಿ ತಿರುಗಿ ಹೋಗಿಬಿಟ್ಟಿತು.

ಮರುದಿನವೇ ಆ ಕುರುಡಿಯನ್ನು ಅಗಸೆಯ ಬಂಡೆಗಲ್ಲಿನಲ್ಲಿ ಹೂಳಿಬಿಟ್ಟರು. ಅವಳ ತಲಿ ಮಾತ್ರ ಕಾಣುವಂತೆ. ಎಲ್ಲರೂ ಹೋಗುತ್ತಾ ಒಮ್ಮೆ ಬರುತ್ತಾ ಒಮ್ಮೆ ತಂಬಿಗೆ ಒರೆಸಹತ್ತಿದರು. ಒಂದು ದಿನ ಕುರುಡಿಯ ತಾಯಿಂಹೀ ತನ್ನ ತಂಬಿಗೆ ಒರೆಸಹೋದಳು. “ಎಲ್ಲರೂ ಒರೆಸುತ್ತಾರೆಂದು ನೀನೂ ಒರೆಸುತ್ತೀಯಾ ಅವ್ಜ?” ಎಂದು ಕುರುಡಿ ಚೀರಿದಳು. ತನ್ನ ಮಗಳಿಗೆ ಇದೆಂತ ಗತಿ ಬಂತಲ್ಲ ಎಂದು ತಿಳಿದು, ಅವ್ವನು ಮಗಳನ್ನು ಹೆಗಲಮೇಲೆ ಹೊತ್ತುಕೊಂಡು ಹೋಗುವಾಗ ಕುರುಡಿಯ ತಲೆ ಬಂಡೆಗಲ್ಲಿಗೆ ಬಡಿದು, ಅಲ್ಲಿಯೇ ಸತ್ತುಚಿದ್ದಳು.

 •