ಪುಟ:ಉತ್ತರ ಕರ್ನಾಟಕದ ಜಾನಪದ ಕಥೆಗಳು.pdf/೨೨೦

ವಿಕಿಸೋರ್ಸ್ದಿಂದ
ಈ ಪುಟವನ್ನು ಪ್ರಕಟಿಸಲಾಗಿದೆ

ವಿನೋದ ಕಥೆಗಳು

೧೯೩

"ಭಜನೆ ನನಗೇನು ತಿಳಿಯುವದೇ - ಹೊಳೆಯುವದೇ? ಆದ್ದರಿಂದ ಬೇಸರವೆನಿಸಿತು. ಓಡಿ ಮನೆಗೆ ಬಂದೆ."

"ಒಳ್ಳೆಯದೇ ಆಯಿತು. ಮಲಗಿಕೊಂಡುಬಿಡೋಣ ಹಾಗಾದರೆ" ಎಂದು ಗಂಡನು ಮಲಗುವದಕ್ಕೆ ಅಣಿಯಾದನು.

"ಅನಕಾ ಒಂದು ಕಥೆಯನ್ನಾದರೂ ಹೇಳಿರಿ" ಎಂದಳು ಹೆಂಡತಿ.

"ನಿದ್ದೆಯ ಹೊತ್ತಿನಲ್ಲಿ ಕಥೆ ಕೇಳಬೇಕನ್ನುವಳಲ್ಲ" ಎಂದು, ಬೇಸರದಿಂದ ಎಂಥದೋ ಕತೆಯನ್ನು ಹೇಳಲು ಆರಂಭಿಸಿದನು ಗಂಡ.

"ಕತ್ತಲದಾಗ ಕಡೋಡಿ, ಕೊಣಮಗ್ಕಾಗ ತೊಡೋಡಿ, ಸುಮ್ಮನೆ ಮನಗ ಬಿದ್ದೋಡಿ" ಎಂದು ಚೇಷ್ಟೆಯಿಂದಾಡಿದ ಲಲ್ಲೆಯನ್ನು ಕೇಳಿ ಹೆಂಡತಿ ಕಕ್ಕಾ ವಿಕ್ಕಿಯಾದಳು. "ಇವನಿಗೆ ಗೊತ್ತಾಗದಂತೆ ಮಾಡಿದ್ದೆಲ್ಲ ತಿಳಿದೇ ಬಿಟ್ಟಿದೆಯಲ್ಲ? ಎನ್ನುತ್ತ ತಾನು ಮಾಡಿದ್ದನ್ನೆಲ್ಲ ವಿವರಿಸಿದಳು.

"ಸುಳ್ಳೇಕೆ ಹೇಳಲಿ? ಭಜನೆ ಕೇಳಬೇಕೆ೦ದರೆ ಹಸಿವೆ ಮನೆಯತ್ತ ಎಳೆದುತಂದು ಸಜ್ಜಿಗೆ ಮಾಡಿಸಿತು. ನೀವು ಬರುವಷ್ಟರಲ್ಲಿ ತಿ೦ದುಮುಗಿಸಿ, ಉಪವಾಸ ಮಾಡಿದವರಂತೆಂಹೀ ಮಲಗಿಬಿಟ್ಟು, ನೀವು ಬಂದಾಗ ಬಾಗಿಲು ತೆರೆಯಬೇಕೆಂದು ಯೋಚಿಸಿದ್ದೆ. ಆದರೆ ನಾನು ತಾಬಾಣ ಸಾವರಿಸುವಷ್ಟರಲ್ಲಿ ನೀವು ಬಂದೇ ಬಿಟ್ಟಿದ್ದರಿಂದ, ಮಾಡಿದ್ದನ್ನೆಲ್ಲ ಮುಚ್ಚಿಟ್ಟು ಓಡಿಬಂದು ಬಾಗಿಲು ತೆರೆದೆ, ನನ್ನದೇನಿದೆ ತಪ್ಪು? ಹಸಿವೆ ತಾಳದೆ ಹೀಗೆ ಮಾಡಿದೆ. ನಿಮಗೆಲ್ಲ ತಿಳಿದೇ ಬಿಟ್ಟಿದೆಯಲ್ಲ? ಹೊಟ್ಟೆಂಯಲ್ಲಿ ಹಾಕಿಕೊಳ್ಳಿರಿ" ಎಂದು ವಿನಯದಿಂದ ಕೇಳಿಕೊಂಡಳು.

ಗಂಡನು, ಅಂದು ರಾತ್ರಿ ಹೆಂಡತಿಯು ಮಾಡಿದ ಅಚಾತುರ್ಯವನ್ನೂ, ಮರುದಿನ ಬೆಳಗಾದ ಬಳಿಕ ಆಕೆ ಮಾಡಿದ ಸಜ್ಜಿಗೆಯನ್ನೂ ಆಕೆಯ ವಿನಂತಿಯನ್ನು ಮನ್ನಿಸಿ ಹೊಟ್ಟೆಯಲ್ಲಿ ಹಾಕಿಕೊಂಡನು.

 •