ಪುಟ:ಉತ್ತರ ಕರ್ನಾಟಕದ ಜಾನಪದ ಕಥೆಗಳು.pdf/೪

ವಿಕಿಸೋರ್ಸ್ದಿಂದ
ಈ ಪುಟವನ್ನು ಪರಿಶೀಲಿಸಲಾಗಿದೆ

iv

ಕರ್ನಾಟಕ ಸರ್ಕಾರ

ಗೋವಿಂದ ಎಂ. ಕಾರಜೋಳ
ಕನ್ನಡ ಮತ್ತು ಸಂಸ್ಕೃತಿ,
ಸಣ್ಣ ನೀರಾವರಿ ಹಾಗೂ ಜವಳಿ ಸಚಿವರು

ವಿಧಾನಸೌಧ
ಬೆಂಗಳೂರು - ೦೧

ಚೆನ್ನುಡಿ

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ವಿಶ್ವ ಕನ್ನಡ ಸಮ್ಮೇಳನದ ಅಂಗವಾಗಿ ಸುಮಾರು ೧೦೦ ಕನ್ನಡದ ಮೇರುಕೃತಿಗಳನ್ನು ಮರುಮುದ್ರಿಸಲು ಉದ್ದೇಶಿಸಿರುತ್ತದೆ.

ಈ ಯೋಜನೆಯಡಿ ಕನ್ನಡ ಸಾಹಿತ್ಯದ ಬೇರೆ ಬೇರೆ ಕಾಲಘಟ್ಟಗಳಲ್ಲಿ ರಚನೆಗೊಂಡ ಕಥೆ, ಕಾದಂಬರಿ, ವಿಚಾರ ಸಾಹಿತ್ಯ, ಪ್ರಬಂಧ, ವಿಮರ್ಶೆ, ನಾಟಕ, ಕವನ ಸಂಕಲನ- ಹೀಗೆ ಸಾಹಿತ್ಯದ ವಿವಿಧ ಪ್ರಕಾರಗಳ ಕೆಲವು ಪ್ರಾತಿನಿಧಿಕ ಕೃತಿಗಳನ್ನು ಪ್ರಕಟಿಸಲಾಗುತ್ತಿದೆ. ಈ ಪ್ರಾತಿನಿಧಿಕ ಕೃತಿಗಳನ್ನು ಸರ್ಕಾರದಿಂದ ರಚಿತವಾದ ಆಯ್ಕೆ ಸಮಿತಿಯು ಮುದ್ರಣಕ್ಕೆ ಆಯ್ಕೆ ಮಾಡಿರುತ್ತದೆ. ಈ ಕೃತಿಗಳನ್ನು ಮುದ್ರಣಕ್ಕೆ ಆಯ್ಕೆ ಮಾಡಿದ ಆಯ್ಕೆ ಸಮಿತಿಯ ಎಲ್ಲಾ ವಿದ್ವಾಂಸರಿಗೂ ನನ್ನ ಧನ್ಯವಾದಗಳು. ಈ ಮಹತ್ವದ ಕೃತಿಗಳನ್ನು ಸಹೃದಯ ಕನ್ನಡಿಗರಿಗೆ ಸುಲಭ ಬೆಲೆಯಲ್ಲಿ ತಲುಪಿಸಬೇಕೆಂಬುದು ನಮ್ಮ ಹೆಗ್ಗುರಿಯಾಗಿರುತ್ತದೆ. ಕನ್ನಡ ಸಾಹಿತ್ಯದ ಮೈಲಿಗಲ್ಲುಗಳಾಗಿರುವ ಈ ಪುಸ್ತಕಗಳು ಭಾವಿ ಪೀಳಿಗೆಯವರಿಗೆ ದಾರಿದೀಪಗಳಾಗಿವೆ. ಈ ಕೃತಿಗಳ ಪ್ರಯೋಜನವನ್ನು ಕನ್ನಡ ಜನತೆ ಹಾಗೂ ವಿದ್ಯಾರ್ಥಿಗಳು ಪಡೆದರೆ ನಮ್ಮ ಶ್ರಮ ಸಾರ್ಥಕವೆಂದು ಭಾವಿಸುತ್ತೇನೆ.

ದಿನಾಂಕ ೦೮.೦೧.೨೦೧೧

(ಗೋವಿಂದ ಎಂ. ಕಾರಜೋಳ)