ಪುಟ:ಉತ್ತರ ಕರ್ನಾಟಕದ ಜಾನಪದ ಕಥೆಗಳು.pdf/೪೦

ವಿಕಿಸೋರ್ಸ್ದಿಂದ
ಈ ಪುಟವನ್ನು ಪ್ರಕಟಿಸಲಾಗಿದೆ

ರಮ್ಯಕಥೆಗಳು

೧೩

ಮಾಡಿದ ಎಲೆ ಅಡಿಕೆ ಉಡಿಯಲ್ಲಿ ಬೀಳದೆ ಕಡೆಗೆ ಬಿದ್ದವು.

"ಅತ್ತ ಇತ್ತ ನೋಡುತ್ತೀಯಲ್ಲ! ಚಿತ್ತ ಎರಡು ಮಾಡುತ್ತಿಯಲ್ಲ!! ಮನಸ್ಸಿಲ್ಲದಿದ್ದರೆ ಮಾತನ್ನೇಕೆ ಕೊಟ್ಟೆ?"ಎಂದು ಕೇಳಿದನು ಶೆಟ್ಟಿ

"ಅತ್ತ ಇತ್ತ ನೋಡಿಯೇ ಇಲ್ಲ. ಚಿತ್ತ ಎರಡು ಮಾಡಿಯೇ ಇಲ್ಲ.ಮಲವೈನ ಆಣೆಮಾಡಿ ಹೇಳುತ್ತೆನೆ. ನನ್ನ ಮನಸ್ಸು ಎರಡಿಲ್ಲ" ಎಂದಳಾಕೆ.

"ಮಲವೈನ ಹೆಸರುಗೊಂಡಿ. ಆತನ ಆಣೆ ಮಾದಡಿದಿ. ಮಲವೈಶೆಟ್ಟಿ ನಿನಗೇನಾಗಬೇಕು? ನಿನ್ನ ಹುಟ್ಟಿದೂರು ಯಾವುದು? ಯಾವ ಊರಿಗೆ ನಿನ್ನನ್ನು ಕೊಟ್ಟಿದ್ದು? ಎಲ್ಲವನ್ನೂ ಸರಿಯಾಗಿ ಹೇಳು. ತಂದೆಯ ಹೆಸರೇನು, ತಾಯಿಯ ಹೆಸರೇನು? ಒಡಹುಟ್ಟಿದ ಅಣ್ಣನ ಹೆಸರೇನು?" ಎಂದು ಕೇಳಿದ ಶೆಟ್ಟಿಗೆ ಬಸವಿ ಈ ರೀತಿಯಾಗಿ ಮರುನುಡಿಯುತ್ತಾಳೆ-

"ತಂದೆ ಸುಂಕುಬಾಳ, ತಾಯಿ ಗಂಗಾಬಾಳ. ಒಡಹುಟ್ಟಿದ ತಂಗಿಯ ಹೆಸರು ಮಾಸುಂದರಿ. ಅಣ್ಣ ಮಲವೈಯ ಶೆಟ್ಟಿ". ಬಸವಿ ಮರುನುಡಿಯುವಾಗ ಶೆಟ್ಟಿಯು ಆಕೆಯ ಮುಖನೋಡಿ, ಹಣೆಯ ಮೇಲಿರುವ ಕಲೆ ಕಂಡು ದಿಗ್ಬ್ರಮೆಗೊಂಡನು. ತೊಟ್ಟಿಲಲ್ಲಿ ಆಡುವಾಗ ಬಟ್ಟಲಲ್ಲಿ ಕುಡಿಯುವಾಗ ಕಟ್ಟೆಯ ಕೆಳಗೆ ಬಿದ್ದ ಕಚ್ಚು ಕಂಡನು ಆ ಶೆಟ್ಟಿ ಬಿಟ್ಟು. "ಹುಟ್ಟುದಟ್ಟಿಯುಟ್ಟು ಬಟ್ಟಲದನ್ನ ಉಣ್ಣುವಾಗ ನನ್ನ ಮಲವಯ್ಯ ಶೆಟ್ಟಿ ಬಿಟ್ಟು ಹೋಗಿದ್ದಾನೆ. ದುರ್ದೈವದಿಂದ ದಿಕ್ಕುಗೇಡಿಯಾದೆ. ಬಾಳಾಸಾನಿ ಎತ್ತಿಕೊಂಡಳು. ಬಾದಾಮಿ ಪೇಟೆಗೆ ನನ್ನನ್ನು ಬಸವಿ ಬಿಟ್ಟಳು."

"ನನ್ನನ್ನು ನಾನು ಕಡಿದುಕೊಳ್ಳಲಾ, ತಂಗೀ, ಇರಿದು ಕೊಳ್ಳಲಾ? ಅಲಗು ಕಟ್ಟಿ ಅದಕ್ಕೆ ಹಾಯಲೇನೇ ತಂಗೀ"ಎಂದು ಹಲ್ಲುಬಿದನು ಶೆಟ್ಟಿ.

"ಕಡಿದುಕೊಳ್ಳುವುದೂ ಬೇಡ; ಅಣ್ಣಯ್ಯ, ಇರಿದು ಕೊಳ್ಳವುದೂ ಬೇಡ. ಅಲಗು ಕಟ್ಟಿ ಅದನ್ನು ಹಾಯುವುದೂ ಬೇಡ. ಅಣ್ಣಯ್ಯ. ಅಣ್ಣಯ್ಯ.ಊರ ಕೋಟೆಯನ್ನು ದಾಟಿದರೆ ಮೂಡಣದ ಕೊಳ್ಳದಲ್ಲಿ ಕೋಟಿಲಿಂಗಗಳು ನೆನೆದಿವೆ. ಅಂಗವನ್ನೇ ವಸ್ತ್ರಮಾಡಿ ಲಿಂಗವನ್ನು ಪೂಜಿಸಿ ನಿನಗೆ ತಟ್ಟಿದ ಇಂದಿನ ಪಾಪವನ್ನು ಹಿಂಗಿಸಣ್ಣ. ಗೋಕಾವಿ ನಾಡಿಗೆ ಹೋಗಿ ಒಂದು ಹಿಂಡು ಆಕಳು ತೆಗೆದುಕೊಂಡು ಬಂದು, ಕೊಳಗೆ ಮೆಟ್ಟಿ ಕೊಂಬ ನೀ ದಾನ ಮಾಡಣ್ಣ. ಆವಾಗ ನಿನ್ನ ಪಾಪ ಪರಿಹಾರ ಅಣ್ಣಯ್ಯ" ಎಂದು ಉಸುರಿದಳು ಆ ತಂಗಿ.

 •