ಪುಟ:ಉತ್ತರ ಕರ್ನಾಟಕದ ಜಾನಪದ ಕಥೆಗಳು.pdf/೫

ವಿಕಿಸೋರ್ಸ್ದಿಂದ
ಈ ಪುಟವನ್ನು ಪರಿಶೀಲಿಸಲಾಗಿದೆ

ಅಧ್ಯಕ್ಷರ ಮಾತು

ಕರ್ನಾಟಕ ಸರ್ಕಾರದ ಕನ್ನಡ ಮತ್ತು ಸಂಸ್ಕ್ರತಿ ಇಲಾಖೆಯು ಕನ್ನಡದ ಮೇರುಕೃತಿಗಳನ್ನು ಪುನರ್ ಮುದ್ರಣ ಮಾಡಲು ಒಂದು ಯೋಜನೆಯನ್ನುಕೈಗೊಂಡಿತು. ಕೃತಿಗಳ ಆಯ್ಕೆಗಾಗಿ ಸರ್ಕಾರವು ಒಂದು ಸಮಿತಿಯನ್ನು ರಚಿಸಿತು.ಈ ಮಹತ್ವದ ಯೋಜನೆಯ ಸಮಿತಿಯ ಅಧ್ಯಕ್ಷನಾಗಿ ಕಾರ್ಯನಿರ್ವಹಿಸುವಸುಯೋಗ ನನ್ನದಾಯಿತು.

ಈ ಯೋಜನೆಯ ಮಹತ್ವವನ್ನು ನಾನು ವಿವರಿಸುವ ಅಗತ್ಯವಿಲ್ಲ. ಕನ್ನಡದಶ್ರೇಷ್ಠ ಕೃತಿಗಳನ್ನು ಸುಲಭ ಬೆಲೆಗೆ ಕನ್ನಡಿಗರ ಕೈಗಳಲ್ಲಿರಿಸಲು ಕನ್ನಡ ಮತ್ತುಸಂಸ್ಕೃತಿ ಇಲಾಖೆಯು ಹಲವು ಯೋಜನೆಗಳನ್ನು ಕೈಗೊಂಡಿರುವುದಕ್ಕಾಗಿಸರ್ಕಾರವನ್ನೂ ಇಲಾಖೆಯನ್ನೂ ಹೃತ್ಪೂರ್ವಕವಾಗಿ ಅಭಿನಂದಿಸುತ್ತೇನೆ. ಕನ್ನಡಸಂಸ್ಕೃತಿಗೆ ಈ ಯೋಜನೆಗಳನ್ನು ಮಹತ್ವದ ಕೊಡುಗೆಯನ್ನು ನೀಡುತ್ತವೆ.

ಕನ್ನಡದ ಮೇರುಕೃತಿಗಳನ್ನು ಆರಿಸುವುದು ಸುಲಭದ ಕೆಲಸವಲ್ಲ. ಇಂತಹಆಯ್ಕೆಯಲ್ಲಿ ಬೇರೆ ಅಭಿಪ್ರಾಯಗಳಿಗೆ ಸಾಧಾರವಾಗಿಯೇ ಅವಕಾಶವಿರುತ್ತದೆ.ಕನ್ನಡ ನಾಡಿನ ಶ್ರೇಷ್ಠ ಸಾಹಿತಿಗಳು ಈ ಸಮಿತಿಯ ಸದಸ್ಯರಾಗಿದ್ದದ್ದು ಸುದೈವದಸಂಗತಿ. ಕೃತಿಗಳನ್ನು ಚರ್ಚಿಸಿ ಮಹತ್ವದ ನಿರ್ದಾರಕ್ಕೆ ಬಂದ ಸಮಿತಿಯುಕಷ್ಟಸಾಧ್ಯವಾದ ಕಾರ್ಯವನ್ನು ಸಾಧಿಸಿದೆ. ಇದಕ್ಕಾಗಿ ನಾನು ಸಮಿತಿಯ ಎಲ್ಲಸದಸ್ಯರಿಗೂ ಕೃತಜ್ಞನಾಗಿದ್ದೇನೆ.

ಈ ಕರ್ಯದ ನಿರ್ವಹಣೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯನಿರ್ದೇಶಕರಾದ ಶ್ರೀ ಮನು ಬಳಿಗಾರ್ ಅವರು ನೆರವಾಗಿದ್ದಾರೆ. ಅವರ ಮತ್ತುಅವರ ಸಿಬ್ಬಂದಿಯವರ ಅಮೂಲ್ಯ ಸಹಕಾರಕ್ಕೆ ನಾನು ಕೃತಜ್ಞ.

ಕನ್ನಡ ನಾಡಿನ ಮನೆಮನೆಗಳಲ್ಲಿ ಸಾಹಿತ್ಯದ ಮಂಗಳ ದೀಪದ ಬೆಳಕನ್ನುಹರಡುವ ಈ ಯೋಜನೆಯನ್ನು ಪೂರ್ಣಪ್ರಯೋಜವನ್ನು ಕನ್ನಡಿಗರು ಪಡೆದುಕೊಳ್ಳಲಿಎಂದು ಹಾರೈಸುತ್ತೇನೆ.

ಸಿರಿಗನ್ನಡಂ ಗೆಲ್ಗೆ!

ಎಲ್.ಎಸ್.ಶೇಷಗಿರಿ ರಾವ್
ಅಧ್ಯಕ್ಷ

ಕನ್ನಡದ ಮೇರುಕೃತಿಗಳ ಆಯ್ಕೆ ಸಮಿತಿ