ಪುಟ:ಉತ್ತರ ಕರ್ನಾಟಕದ ಜಾನಪದ ಕಥೆಗಳು.pdf/೬

ವಿಕಿಸೋರ್ಸ್ದಿಂದ
ಈ ಪುಟವನ್ನು ಪರಿಶೀಲಿಸಲಾಗಿದೆ

vi



ಹೊನ್ನುಡಿ

ನಾಡಿನ ಭಾಷೆ, ಸಂಸ್ಕೃತಿ ಮತ್ತು ಜನಜೀವನದ ಪರಿಮಾಣವನ್ನುಅಳೆಯುವುದರಲ್ಲಿ ಅಲ್ಲಿನ ಸಾಹಿತ್ಯದ ಕೃತಿಗಳು ಮಹತ್ವದ ಪಾತ್ರವನ್ನು ವಹಿಸುತ್ತವೆ.ಸುಮಾರು ಎರಡು ಸಾವಿರದ ಐದನೂರು ವರ್ಷಗಳಿಗೂ ದೀರ್ಘವಾದ ಐತಿಹಾಸಿಕಪರಂಪರೆ ಚೆಲುವ ಕನ್ನಡ ನಾಡಿನದು. ಹಾಗೆಯೇ ಅದರ ಸಾಹಿತ್ಯ ಕೂಡ ಪಂಪ,ಕುಮಾರವ್ಯಾಸ, ಶರಣರು, ದಾಸರು ಮೊದಲಾವರಿಂದ ಸಮೃಧ್ಧವಾಗಿ ಬೆಳೆದಿದೆ.ಅದರ ಸಮೃಧ್ಧತೀಗೆ ಏಳು ಜ್ಞಾನಪೀಠಗಳ ಗರಿಮೆಯೇ ಸಾಕ್ಷಿ.

ಕರ್ನಾಟಕವು ಏಕೀಕರಣಗೊಂದು ೫೫ನೇ ವರ್ಷಕ್ಕೆ ಪಾದಾರ್ಪಣೆ ಮಾಡಿದೆ.ಈ ಸಂದರ್ಭದಲ್ಲಿ ಬೆಳೆಗಾವಿಯಲ್ಲಿ ವಿಶ್ವ ಕನ್ನಡ ಸಮ್ಮೇಳನವನ್ನು ಆಚರಿಸುತ್ತಿರುವುಒಂದು ಐತಿಹಾಸಿಕವೂ ಹಾಗು ಮಹತ್ವಪೂರ್ಣವೂ ಆದ ವಿಶಿಷ್ಟ ಘಟನೆ.

ವಿಶ್ವ ಕನ್ನಡ ಸಮ್ಮೇಳನದ ಸಂಭ್ರಮಾಚರಣೆಯ ಅಂಗವಾಗಿ ಹಲವಾರುಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಕನ್ನಡ ನಾಡಿನ ವಿವಿಧ ಕ್ಷೇತ್ರಗಳಲ್ಲಾಗಿರುವಪ್ರಗತಿಯ ಆತ್ಮಾವಲೋಕನದ ಜೊತೆಗೆ ಕನ್ನಡ ಸಾಹಿತ್ಯದ ಸೃಜನಶೀಲ ಹಾಗುಸೃಜನೇತರ ಪ್ರಕಾರದ ೧೦೧ ಕೃತಿಗಳನ್ನು, ಮೇರುಕೃತಿಗಳ ಮರುಮುದ್ರಣಯೋಜನೆಯಡಿ ಪ್ರಕಟಿಸಲಾಗುತ್ತಿದೆ.

ಈ ವಿಶಿಷ್ಟ ಕೃತಿಗಳನ್ನು ಆಯ್ಕೆ ಮಾಡಿದ ಆಯ್ಕೆ ಸಮಿತಿ ಅಧ್ಯಕ್ಷರಿಗೆಹಾಗು ಸದಸ್ಯರಿಗೆ ನನ್ನ ವಂದನೆಗಳು. ಈ ಸಾಹಿತ್ಯ ಮಾಲಿಕೆಯನ್ನುಸಾಹಿತ್ಯಾಭಿಮಾನಿಗಳು ಸ್ವಾಗತಿಸುವ ಮೂಲಕ ಈ ಕೃತಿಗಳ ಸದುಪಯೋಗಪಡೆದುಕೊಳ್ಳುತ್ತಾರೆಂದು ಭಾವಿಸಿದ್ದೇನೆ.

(ಐ.ಎಂ. ವಿಠ್ಹಲಮೂರ್ತಿ)
ವಿಶೇಷಾದಿಕಾರಿಗಳು
ವಿಶ್ವ ಕನ್ನಡ ಸಮ್ಮೇಳನ