ಪುಟ:ಕಂಬನಿ-ಗೌರಮ್ಮ.pdf/೧೧೯

ವಿಕಿಸೋರ್ಸ್ದಿಂದ
ಈ ಪುಟವನ್ನು ಪ್ರಕಟಿಸಲಾಗಿದೆ

'ಕೂಗುತ್ತಾರೆ, ಕೆಲಸವಿದೆ, ಹೋಗಬೇಕು.'

ನಳಿನಿ ನರ್ತಿ ಮರುಮಾತೆತ್ತುವುದರೊಳಗೆ ಓಡಿ ಬಿಟ್ಟಳು.

ನಳಿನಿ ಮಾಯವಾದೊಡನೆ ವರ್ತಿಸ, ಮುಖ ಮೋಡ ಮುಸುಕಿದ ಚಂದ್ರನಂತಾಯಿತು.

ಕೂಗುತ್ತಾರೆ! ಕೆಲಸವಿದೆ !! ಹೋಗಬೇಕು !!

ನಲಿನ-ತನ್ನ ನಲಿನ ಬೇರೆಯವರ ಒಂದು ಕೂಗಿಗೆ ಓಡಬೇಕು ! ಹೃದಯವು ಹಾತೊರೆಯುತ್ತಿದ್ದರೂ ತನಗವಳನ್ನು ಹತ್ತಿರ ನಿಲ್ಲಿಸಿ ಕೊಳ್ಳುವ ಅಧಿಕಾರವಿಲ್ಲ..

ತಂದೆಯೊಡನೆ ಮಾತಾಡಿ ಆ ಅಧಿಕಾರವನ್ನು ಪಡೆಯುವುದಕ್ಕೆ ಶಕ್ತನಾಗಲೇಬೇಕೆಂದು ನಿರ್ಧರಿಸಿ ಒಳಗೆ ಹೋದ. ತಾಯಿ, ಊಟಮಾಡುತಿದ್ದಳು. ಹತ್ತಿರವೇ ಪ್ರಭೆ ಕೂತ. ಏನೇನೋ ಮಾತಾಡುತ್ತಿದ್ದಳು. ಎಂದಿನಂತೆ ತಾಯ ಹತ್ತಿರ ಕೂತು ಮಾತಿಗಾರಂಭಿಸದೆ ನಡುಮನೆಗೆ ಹೋದೆ. ಅವನ ತಂದೆ ಪೇಪರ್ ಓದುತ್ತಾ ಕೂತಿದ್ದರು. ಮಗನನ್ನು ಕಂಡ ಪೇಪರ್ ಮೇಜಿನ ಮೇಲಿರಿಸಿ ಆಶ್ಚರ್ಯದಿಂದ ಅವನ ಮುಖ ನೀಡಿದರು. ಏಕೆಂದರೆ ಯಾವಾಗಲೂ ಮೂರ್ತಿ ತಂದೆಯನ್ನು ಹುಡುಕಿಕೊಂಡು ಹೋಗುವುದು ವಾಡಿಕೆಯಾಗಿರಲಿಲ್ಲ. ತಂದೆಯ ಇದಿರು ಧೈರ್ಯವಾಗಿ ನಿಂತು ಮಾತಾಡುವುದು ಮೂರ್ತಿಯ ಜೀವನದಲ್ಲಿ ಇದೇ ಮೊದಲನೆಯ ಸಲ ಮೂರ್ತಿಯ ಮಾತುಗಳನ್ನು ಕೇಳಿ ಮೊದಲವನ ತಂದೆ ವಿಸ್ಮಯದಿಂದ ಕಲ್ಲಿನ ಪ್ರತಿಮೆಯಂತೆ ಕುಳಿತಿದ್ದನು. ಕೊನೆಗೆ ಅವನ ಮಾತುಗಳ ಅರ್ಥವು ಸರಿಯಾಗಿ ತಿಳಿದ ಮೇಲೆ ಕಠಿಣ ಸ್ವರದಿಂದ ಒಂದೇ, ಒಂದು ಶಬ್ದದಲ್ಲಿ ಪ್ರತ್ಯುತ್ತರವಿತ್ತನು:--

'ಆಗದು'

ಮೂರ್ತಿ ಈ ಉತ್ತರವನ್ನು ಮೊದಲೇ ನಿರೀಕ್ಷಿಸುತ್ತಿದ್ದ. ಆದುದರಿಂದ ಅಪ್ರತಿಭನಾಗಲಿಲ್ಲ. ಧೈರ್ಯದಿಂದ ದೃಢವಾಗಿ ಹೇಳಿದ: “ ನಾನು

ಅವಳನ್ನೇ ಮದುವೆಯಾಗುತ್ತೇನೆ. ನಿಮ್ಮ ಇಚ್ಛೆಗೆ ವಿರೋಧವಾಗಿ ನಡೆಯುವುದಕ್ಕೆ ಕ್ಷಮಿಸಿ.'

೭೯