ಪುಟ:ಕಂಬನಿ-ಗೌರಮ್ಮ.pdf/೧೨೮

ವಿಕಿಸೋರ್ಸ್ದಿಂದ
ಈ ಪುಟವನ್ನು ಪ್ರಕಟಿಸಲಾಗಿದೆ

೮೮

ಯಾರಾದರೇನು ? ಆದುದಾಗಿಬಿಟ್ಟಿತು. ಪಾರ್ವತಿಯಾಗಿ ಅವಳು ಸುಖದಲ್ಲಿರಲಿಲ್ಲ. ರಜಿಯಾ ಆಗಿಯಾದರೂ ಕವಳ ಜೀವನವು ಸುಖಮಯವಾಗಲೆಂದು ದೇವರಲ್ಲಿ ನನ್ನ ಬೇಡಿಕೆ.

ಸಾಕು; ಇನ್ನೇನು ಬರೆಯಲಿ

ನಿನ್ನ,
ಲಕ್ಷ್ಮಿ

ತಾರೀಖು ೮ರ ಸ್ಥಳಿಕ ಪತ್ರಿಕೆಯೊಂದರಲ್ಲಿ ಹೀಗಿತ್ತು:-

ಮೊನ್ನೆ ದಿನ ಹಿಂದೂ-ರಮಣಿಯೊಬ್ಬಳು ಮುಸಲ್ಮಾನ ಧರ್ಮ ಸ್ವೀಕರಿಸಿದುದು ಊರಿನ ಹಿಂದೂಗಳಿಗೆಲ್ಲಾ ಬಹಳ ವಿಷಾದವನ್ನುಂಟು ಮಾಡಿದೆ. ಇನ್ನು ಮುಂದೆ ಈ ರೀತಿ ಸಂಭವಿಸದಂತೆ ನೋಡಿಕೊಳ್ಳುವದಕ್ಕಾಗಿ ಊರಿನ ಪ್ರಮುಖ ಹಿಂದೂಗಳ ಸಭೆಯೊಂದು ಶ್ರೀಮಾನ್ ನಾಗೇಶರಾಯರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಸರ್ವಾನು ಮತದಿಂದ ಹಿಂದೂ ಧರ್ಮರಕ್ಷಣೆ ಮಾಡಬೇಕೆಂದು ತೀರ್ಮಾನವಾಯಿತು.

ನವಂಬರ ೧೯೩೪