ಪುಟ:ಕಂಬನಿ-ಗೌರಮ್ಮ.pdf/೧೫೧

ವಿಕಿಸೋರ್ಸ್ದಿಂದ
ಈ ಪುಟವನ್ನು ಪ್ರಕಟಿಸಲಾಗಿದೆ

'ವಸಂತ,

ನಿನ್ನ ಬೆಳಗಿನ ಕಾಗದ ಬಂದಿದೆ. ನೀನೂ ಎಂದಾದರೊಮ್ಮೆ ಈ ಮಾತುಗಳನ್ನು ಹೇಳಬಹುದು ಎಂದು ನಾನೆಣಿಸಿರಲಿಲ್ಲ. ಆದುದರಿಂದಲೇ ನಿನ್ನ ಕೌಗದ ನೋಡಿ ಸ್ತಬ್ಧನಾಗಿ ಹೋದೆ. ಮತ್ತೆ ನೀನು ಸಾಮಾನು ಸಾಗಿಸುವುದನ್ನು ನೋಡುತ್ತಿದ್ದರೆ ಏನನ್ನೂ ಹೇಳಲಾರದೆ ಹೋದೆ. ನನ್ನ ಮೌನವನ್ನು ನೋಡಿ ನೀನೇನು ತಿಳಿದುಕೊಂಡೆಯೋ ತಿಳಿಯದು. ಬಹುಶಃ ನಿನ್ನ ಸಂಶಯವು ಇನ್ನಷ್ಟು ದೃಢವಾಗಿರಬಹುದು.

"ಅಷ್ಟು ಹೊತ್ತಿನಿಂದಲೂ ಯೋಚಿಸುತ್ತಿದ್ದೇನೆ. ನಿನ್ನಲ್ಲಿ ಹೇಳಬಾರದ ವಿಷಯ ಎಂದು ನನಗೆ ತೋರುವುದಿಲ್ಲ. ಹಾಗೆ ನೋಡುವುದಾದರೆ ಯಾರಲ್ಲ ಹೇಳಬಾರದಂತಹ ವಿಷಯವೇನೂ ಅಲ್ಲ ಅದು. ಆದರೂ ನೋಡು ವಸಂತ, ನಾನು ಯಾವುದನ್ನು ಹೆಚ್ಚಿನದೆಂದು ತಿಳಿದಿರುತ್ತೇನೋ ಅಂತಹುದನ್ನು ಬೇರೆಯವರು ಇಷ್ಟೇ' ಎಂದು ನಕ್ಕರೆ ನನಗೆ ಬಲು ದುಃಖವಾಗುವುದು. ಅದರಿಂದ ನಾನು ನನ್ನ ಭಾವವನ್ನು ತಿಳಿಯು ಲಾರದವರೆದುರು ಮನಬಿಚ್ಚಿ ಮಾತಾಡಲು ಹಿಂಜರಿಯುತ್ತೇನೆ. ಈ ಕೆಲವು ತಿಂಗಳುಗಳ ಸಹವಾಸದಿಂದ ಸ್ವಲ್ಪಮಟ್ಟಿಗಾದರೂ ನೀನು ನನ್ನನ್ನು ಬಲ್ಲೆ. ಆದರೆ ಅದಕ್ಕಿಂತಲೂ ಹೆಚ್ಚಾಗಿ ನಾನು ನಿನ್ನನ್ನು ಬಲ್ಲೆ. ನಿನ್ನ ಒಳ್ಳೆಯ ಅಭಿಪ್ರಾಯಕ್ಕೆ ನಾನೆಷ್ಟು ಬೆಲೆ ಕೊಡುವೆನೆಂಬುದಕ್ಕೆ ನಾನೀಗ ಯಾರಿಗೂ ಇಂದಿನವರೆಗೂ ಹೇಳದಿದ್ದ ವಿಷಯಗಳನ್ನು ನಿನಗೆ ಬರೆಯುತ್ತಿರುವುದೇ ಸಾಕ್ಷಿಯಾಗಿದೆ.

“ನನಗೊಬ್ಬಳು ತಂಗಿ ಇರುವಳು ವಸಂತ-ನನ್ನ ತಾಯಿ ಸಾಯುವ ದಿನ ಹುಟ್ಟಿದ ಮಗು. ಆಗ ನಾನು ಮರು ನಾಲ್ಕು ವರ್ಷದವನಾಗಿದ್ದರೂ ನನಗಿನ್ನೂ ಚನ್ನಾಗಿ ನೆನಪಿದೆ-ಮೃತ್ಯುವಿನ ಮಡಲಲ್ಲಿ ಮಲಗಿದ್ದ ನನ್ನ ಅಮ್ಮ-ಅವಳ ಹತ್ತಿರವೇ ಚೀರಿ ಚೀರಿ ಅಳುತ್ತ ಮಲಗಿದ್ದ ನನ್ನ ಪುಟ್ಟ ತಂಗಿ, ಮೌನವಾಗಿ ಕಣ್ಣೀರು ಸುರಿಸದಿದ್ದರೂ ಅಳುತ್ತಿದ್ದ ನನ್ನ ತಂದೆಯ ಮುಖ.....

“ವಸಂತ, ಈಗ ಇದೆಲ್ಲಾ ಏಕೆ ಎಂದು ನೀನು ಕೇಳಬಹುದು.

೧೧೧