ವಿಷಯಕ್ಕೆ ಹೋಗು

ಪುಟ:ಕನ್ನಡದ ಬಾವುಟ.djvu/೧೮೪

ವಿಕಿಸೋರ್ಸ್ದಿಂದ
ಈ ಪುಟವನ್ನು ಪ್ರಕಟಿಸಲಾಗಿದೆ

೧೫೧

ಹೊಸತ ಹಳದನು ಮಾಡಿ, ಹಳದ ಹೊಸತನು ಮಾಡಿ, ನಾಡೊಂದು ಮೂಡಿ,
 ಧರ ಸತ್ಯಗಳಿಂದ, ಪ್ರೇಮ ಶಾಂತಿಗಳಿಂದ, ಸ್ವಾತಂತ್ರದಿಂದ,
 ಸುಖದಿಂದ, ಸೌ೦ದಯ್ಯದಾನಂದದಿಂದೆಲ್ಲ ಸಮದೃಷ್ಟಿಯಿಂದ
 ಬಾಳರೇ ನೀ ಬಂದು ನಲಿಸಿದೊಡೆ, ಹರಸಿದೊಡೆ– ಬಾ ತಾಯಿ, ಹರಸು.
 ತೇರೇರು, ಬಾ ತಾಯಿ, ನಿನ್ನ ಸಿಂಹಾಸನವನೇರು ಮತ್ತೊಮ್ಮೆ,
 ಪಳಮೆದಲಿ ಪೇರಾಲವನು ನೀನು ಬಿತ್ತಲದು ಮೊಳೆತು, ಮರವಾಗಿ,
 ಪಡುವ ಮೂಡಲು ತೆಂಕ ಬಡಗಲೆಡೆ ಕೊಂಬೆಗಳನೆಸೆದೆಸೆದು ಬೀಗಿ,
 ಈ ಕೊಂಬೆ ಕರಗಿದೊಡೆ ಆ ಕೊಂಬೆ ಬಿಳಿಲಿಳಿದು ಬೇರೂರಿ ತಾಗಿ
 ಒಂದೆ ಮರವಮರವಾಗಿರ್ಪಂತೆ, ಅಮರವಾಗಿನ್ನುಮದೆ ಇಹುದು
 ನಿನ್ನೊಂದು ಕರ್ನಾಟರತ್ನ ಸಿಂಹಾಸನಂ- ಬಾಳೆ, ಅದು ಬೆಳೆಗೆ
 ಕನ್ನಡದ ಮುಡಿಯಾಗಿ, ಕನ್ನಡದ ನುಡಿಯಾಗಿ, ಕನ್ನಡದ ಬಾಳ ಕುಡಿಯಾಗಿ!
- ಬಾರಮ್ಮ, ಹರಸು."

ನಕ್ಕಳಾ ತಾಯಿ.
ಮುದುಕಿ ಎಳೆಯವಳಾಗಿ, ಮಾಸು ಮಿಂಚೆಳೆಯಾಗಿ, ಸವೆದ ಮೈ ತುಂಬಿ,
 ಕಡಲ ತೆರೆಗಳನುಟ್ಟು, ಬೆಟ್ಟ ಬಯಲನು ತೊಟ್ಟು, ಅರಿಲ ಮುಡಿಗಿಟ್ಟು,
 ಮುಗುಳ್-ನಗೆಯ ನಸುನಕ್ಕಳಾ ತಾಯಿ, ನನ್ನ ತಲೆಯಲಿ ಕಯ್ಯ ತಾವರೆಯ

ನಿಟ್ಟು;


ಸುತ್ತಲುಂ ಕಾಣಿಸಿದರೊಡನೆ
ಕನ್ನಡದ ಪೊನ್ನಾ ಡ ಪೆರ್ಮನಡಿಗಳ್!
ಸಾವನೊವೆನಾ ಪಾಲ ಸೂಸು ಕಿಡಿಗಳ್!
 ಹಿಂದೆ ನೀಡಿದ ಸಾಲು, ಮುಂದೆ ನೀಡಿದ ಸಾಲು, ಕನ್ನಡದ ಕರುಳುಗಳು

- ನಡುವೆ, ಸಿರಿ ತಾಯ್


ಭುವನೇಶ್ವರೀ ದೇವಿ ರಥವನೇರಿದಳು.
ಕೂಗಿದರು ಎಲ್ಲರೂ ಒಕ್ಕೊರಲ್!-
 "ತಾಯ್ ಬಿಜಯಮಾಡುವಳು, ದಾರಿ ಬಿಡಿ, ದಾರಿ ಬಿಡಿ, ಅಡ್ಡ ಬಾರದಿರಿ.
 ಭಾರತಾಂಬೆಯ ಹಿರಿಯ ಹೆಣ್‌ಮಗಳೆ, ದಾರಿ ತೋರುವ ಹಿರಿಯ ಸೊಡರೆ
ಬಾಳಮ್ಮ, ಬಾಳು!
 ನೀನ್ ಬಾಳೆ, ಏನ್ ಬಾಳು ನಿನ್ನ ಮಕ್ಕಳದು!– ಬಾನ್‌ಬಾಳು, ತಾಯೆ
ಬಾಳಮ್ಮ, ಬಾಳು!??