ಪುಟ:ಕರ್ನಾಟಕ ಗತವೈಭವ.djvu/೧೧೦

ವಿಕಿಸೋರ್ಸ್ದಿಂದ
ಈ ಪುಟವನ್ನು ಪ್ರಕಟಿಸಲಾಗಿದೆ



೧೧ನೆಯ ಪ್ರಕರಣ - ವಿಜಯನಗರ ಅರಸರು

೮೩


ವಿಜಯನಗರದ ಅರಸರಿಗೂ ಕೃಷ್ಣಾ-ತುಂಗಭದ್ರಾ ನದಿಗಳ ನಡುವಿನ ಸೀಮೆಗಾಗಿ ಆಗಾಗ ಯುದ್ಧಗಳಾಗುತ್ತಿದ್ದುವು. ಈ ಯುದ್ಧಗಳಲ್ಲಿ ಸಾಳ್ವ ನರಸಿಂಹನು ಪರಾಕ್ರಮವನ್ನು ತೋರಿಸಿ ಅತ್ಯಂತ ಪ್ರಬಲನಾಗಿದ್ದನು. ಆದುದರಿಂದಲೇ ಇವನಿಗೆ ಸಿಂಹಾಸನವನ್ನು ಎತ್ತಿಹಾಕುವುದಕ್ಕೆ ಸಾಧ್ಯವಾಯಿತು. ಆದರೆ ಈತನ ವಂಶಜರು ಬಹಳ ದಿವಸ ಆಳಲಿಲ್ಲ. ಈತನ ಮಗನಾದ ಇಮ್ಮಡಿ ನರಸಿಂಹ ನನ್ನು ನರಸ ಅಥವಾ ನರಸಿಂಗನೆಂಬ ಅವನ ಸೇನಾಧಿಪತಿಯು ೧೪೯೬ನೆಯ ಇಸ್ವಿಯಲ್ಲಿ ಕೊಂದುಹಾಕಿದಂತೆ ತೋರುತ್ತದೆ.
ನರಸಮನೆತನ (೧೪೯೬-೧೫೬೭): ಈ ನರಸನು ತುಳವನು; ಬಲು ಶೂರನು, ಈತನು ಚೇರ-ಚೋಳ- ಪಾಂಡ್ಯ ದೇಶಗಳನ್ನು ಗೆದ್ದನು. ಈತನ ತರುವಾಯ ಈತನ ಮೂರು ಮಂದಿ ಮಕ್ಕಳು ಒಬ್ಬರ ಹಿಂದೊಬ್ಬರು ಪಟ್ಟವೇರಿದರು. ಆದರೆ ಅವರಲ್ಲಿ ೨ನೆಯವನಾದ ಕೃಷ್ಣ ದೇವರಾಯನೇ ಅತ್ಯಂತ ಪ್ರತಾಪಶಾಲಿಯು, ಈತನು ಪಟ್ಟವೇರಿದಕೂಡಲೇ ಮುಸಲ್ಮಾನರೊಡನೆ ಕಾಳಗಕ್ಕೆ ನಿಂತನು. ಈತನ ಆಳಿಕೆಯಲ್ಲಿ ಮುಸಲ್ಮಾನರು ಇವನೊಡನೆ ಅನೇಕ ಕಾಳಗ ಗಳನ್ನು ಮಾಡಿದರೂ, ಅವರಿಗೆ ಒಂದರಲ್ಲಿಯೂ ಜಯವು ಸಿಕ್ಕಲಿಲ್ಲ. ಕೃಷ್ಣರಾಯನು ಮಹಾ ಪರಾಕ್ರಮಿಯಾಗಿದ್ದು ದಲ್ಲದೆ, ವಿದ್ಯೆ- ಕಲಾಕೌಶಲ್ಯ-ಔದಾರ್ಯ ಗಳಲ್ಲಿಯೂ ಬಹು ವಿಖ್ಯಾತನಾಗಿದ್ದನು. ಈತನು ಸ್ವತಃ ತೆಲುಗು ಭಾಷೆಯಲ್ಲಿ ಗ್ರಂಥವನ್ನು ಬರೆದಿರುವನು. ಇವನಿಗೆ ಆಂಧ್ರಭೋಜನೆಂದು ಕರೆಯುತ್ತಿದ್ದರು. ಇವನು ತೆಲುಗು ಮನುಷ್ಯನೆಂದು ಕೆಲವರ ಕಲ್ಪನೆ. ಆದರೆ, ಇದು ತಪ್ಪೆಂದು ತೋರುತ್ತದೆ. ಇವನು ತೆಲುಗು ಭಾಷೆಯಲ್ಲಿ 'ಅಮುಕ್ತ ಮಾಲ್ಯದ' ಅಥವಾ 'ವಿಷ್ಣು ಚಿತ್ತೀಯ' ಎಂಬ ಗ್ರಂಥವನ್ನು ರಚಿಸಿರುವನೆಂಬುದರಿಂದ ಇವನು ತೆಲುಗುಮನುಷ್ಯನೆಂದು ಜನರು ಊಹಿಸುವಂತೆ ತೋರುತ್ತದೆ. ಆದರೆ ಆ ಪುಸ್ತಕವು ಏಕೆ ಬರೆಯಲ್ಪಟಿತೆಂಬುದಕ್ಕೆ ಅದರ ಪ್ರಾರಂಭದಲ್ಲಿ ಕೊಟ್ಟ ಕಥೆಯನ್ನು ಓದಿದರೆ ಅವನು ನಿಜವಾಗಿಯೇ ಕನ್ನಡ ಮನುಷ್ಯನೆಂದು ಹೇಳಲಿಕ್ಕೆ ಆಸ್ಪದವಿದೆ.
ಕೃಷ್ಣರಾಯನು ಶ್ರೀಕುಲವೆಂಬ ಗ್ರಾಮಕ್ಕೆ ಹೋದಾಗ ಅಲ್ಲಿಯ ಆಂಧ್ರ ವಿಷ್ಣು ದೇವರು ಏಕಾದಶಿಯ ದಿವಸ ಆ ರಾಜನ ಕನಸಿನಲ್ಲಿ ಬಂದು, ಆತನಿಗೆ ತೆಲುಗು ಭಾಷೆಯಲ್ಲಿ ಒಂದು ಕಾವ್ಯವನ್ನು ಬರೆದು ಅದನ್ನು ತಿರುಪತಿಯ ಶ್ರೀ