ಪುಟ:ಕರ್ನಾಟಕ ಗತವೈಭವ.djvu/೧೮೯

ವಿಕಿಸೋರ್ಸ್ದಿಂದ
ಈ ಪುಟವನ್ನು ಪ್ರಕಟಿಸಲಾಗಿದೆ



೧೫೬

ಕರ್ನಾಟಕ-ಗತವೈಭವ.


೩ನೆಯ ರೀತಿ:- ಈ ರೀತಿಯು ಬಹಳ ಸುಲಭವಾಗಿರುತ್ತದೆ. ವಿಶೇಷ ಖರ್ಚೂ ಬೇಡ. ಇದು ಮೇಲಿನ ರೀತಿಯಂತೆಯೇ ಇರುತ್ತದೆ. ಲಿಪಿಗಳಿಗೆ ಒದ್ದೆಯ ಕಾಗದವನ್ನು ಅಂಟಿಸಿ ಬಿರುಸಾದ ಕುಂಚಿನಿಂದ ಮೆಲ್ಲಗೆ ಅಕ್ಷರಗಳ ಮೇಲೆ ಬಡಿಯಬೇಕು. ಅಂದರೆ ಅಕ್ಷರಗಳ ಸಂದಿಯಲ್ಲಿ ಆ ಒದ್ದೆಯ ಕಾಗದವು ಹೋಗಿ ಕೂಡುವುದು, ಕೂಡಲೇ ಚರ್ಮದ ಪ್ಯಾಡ್ ಒಂದನ್ನು ತೆಗೆದು ಕೊಂಡು ಅದಕ್ಕೆ ಎರಡನೆಯ ರೀತಿಯಲ್ಲಿ ಹೇಳಿದಂತೆ ತಯಾರ ಮಾಡಿದ ಕಾಡಿಗೆಯ ಮಸಿಯನ್ನು ಹಚ್ಚಿ, ಆ ಒದ್ದೆಯ ಕಾಗದದ ಮೇಲೆ ಬಡಿಯಬೇಕು, ಹಾಗೆ ಮಾಡಿದರೆ ಅಕ್ಷರಗಳ ಸಂದಿಯಲ್ಲಿ ಕುಳಿತ ಕಾಗದಕ್ಕೆ ಮಸಿಯು ಹತ್ತದೆ ಮಿಕ್ಕ ಕಡೆಗೆಲ್ಲ ಮಸಿ ಹತ್ತುವುದು, ಅಕ್ಷರಗಳು ಬೆಳ್ಳಗಾಗಿ ಕಾಣುವುವು, ಕಾಡಿಗೆಯಲ್ಲಿ ಅಂಟು ಬಹಳ ಹಾಕಬಾರದು. ಕಾಡಿಗೆಯು ಹಾರಿ ಹೋಗಬಾರದೆಂದು ಸ್ವಲ್ಪ ಅಂಟು ಹಾಕಬೇಕಾಗುತ್ತದೆ, ರಬ್ಬರ ಸ್ಟಾಂಪು ಒತ್ತುವಂತೆ ಆ ಒದ್ದೆಯ ಕಾಗದದಮೇಲೆ ಮಸಿಯನ್ನು ಮೆಲ್ಲಗೆ ಹಚ್ಚಬೇಕು.

ತಾಮ್ರಶಾಸನದ ಮುದ್ರಣ:- ಮೊದಲು ತಾಮ್ರಪಟವನ್ನು ಸಬಕಾರ ಹಚ್ಚಿ ಚನ್ನಾಗಿ ತೊಳೆಯಬೇಕು, ಅದರಿಂದ ಸ್ವಚ್ಛವಾಗದಿದ್ದರೆ, ನೈಟ್ರಿಕ ಆಸಿಡ್ ನ ನೀರನ್ನು ಸ್ವಲ್ಪ ಹಾಕಬೇಕು. ಈ ನೀರನ್ನು ಹೆಚ್ಚು ಹಾಕಿದರೆ ಶಾಸನವು ಕೆಡುವ ಸಂಭವವದೆ. ಆ ಶಾಸನವು ಒಣಗಿದನಂತರ ಮುದ್ರಿಸುವ ಮಸಿಯನ್ನು ಕುಂಚಿನಿಂದ ಮೆಲ್ಲಗೆ ಬಳಿಯಬೇಕು. ಇದಕ್ಕಾಗಿಯೇ ಒಂದು ದೊಡ್ಡ ಕುಂಚವನ್ನು ಮಾಡಿಸಿಡಬೇಕು. ಅಥವಾ ಒಂದು ಕಾಚಿನ ತುಣುಕನ್ನು ತೆಗೆದುಕೊಂಡು, ಅದರಮೇಲೆ ಮಸಿಯನ್ನು ಹಾಕಿ, ಅದನ್ನೆಲ್ಲ ಅದಕ್ಕೆ ಚನ್ನಾಗಿ ಒಂದೂ ಕಡೆಗೆ ಬಿಡದಂತೆ ಹಚ್ಚಬೇಕು. ಡ್ರಾಯಿಂಗ್‌ ಪೇಪರ್‌ ದಂಥ ದಪ್ಪಾದ ಮೆತ್ತಗಿನ ಕಾಗದವೇ ಒಳ್ಳೆಯದು. ಕಾಗದವನ್ನು ತಾಮ್ರ ಪಟಕ್ಕಿಂತ ಹೆಚ್ಚು ದೊಡ್ಡದಾಗಿ ಕತ್ತರಿಸಿ, ಸ್ವಲ್ಪ ನೀರು ಚಿಮ್ಮಡಿಸಿ, ಅದರ ಮೇಲ್ಬಾಗವನ್ನು ಶಾಸನದ ಮೇಲೆ ಹಾಕಿ, ಕಾಗದವನ್ನು ಹಿಗ್ಗಲಿಗೆ ಮಡಿಸಬೇಕು. ಹೀಗೆ ಮಾಡಿದರೆ, ಆ ಶಾಸನವು ಅತ್ತಿತ್ತ ಅಲುಗಾಡುವುದಿಲ್ಲ. ಶಾಸನಕ್ಕೆ ಬಳೆಯಿದ್ದರೆ, ಆ ಕಾಗದದೊಳಗೆ ಬಳೆ ಹಾಯುವಂಥದೊಂದು ರಂಧ್ರವನ್ನು ಮಾಡಬೇಕು. ಮೇಲ್ಬಾಗವನ್ನು ಬಿರುಸಾದ ಸ್ವಚ್ಛ ಕಾಗದದಿಂದ ಮೆಲ್ಲನೆ ಒತ್ತಬೇಕು. ಒತ್ತದೆ