ಪುಟ:ಕವಿಯ ಸೋಲು.pdf/೨೭

ವಿಕಿಸೋರ್ಸ್ದಿಂದ
ಈ ಪುಟವನ್ನು ಪ್ರಕಟಿಸಲಾಗಿದೆ

ಬೂಟಾಟಿಕೆ

ನಾವು ಬಡಜೀವಿಗಳು ನೀವು ಮಾತಸಸಿಗಳು
ದೃಷ್ಟವನ್ನು ತೋರಿರಯ್ಯ ;
ಕಣ್ಕಟ್ಟು ಮಾಯೆಯೋ ಸೃಷ್ಟಿ ಸಾಮರ್ಥ್ಯವೋ
ಒಂದನ್ನು ತೋರಿರಯ್ಯ,

ಹಿರಿಯ ಮರಗಳನಾಳ್ಳ ಯತಿವರರು ಕೆಲರುಂಟು
ಡಂಬದಲಿ ಮೆರೆವರುಂಟು ;
ಉಪವಾಸ ನಿಯಮದಲ್ಲಿ ಜಗವ ಜಯಿಸುವರುಂಟು
ಒಳಬೆಳಗ ಕಾರುಂಟು,

ಗುಹೆಯಲ್ಲಿ ಅಡಗಿರ್ದು ವರ್ಷಗಳ ಕಳೆದಾಯ್ತು
ಹಿರಿಯ ರಿಸಿ ಎಂಬುದಾಯು;
ದಿಕ್ಕು ದಿಕ್ಕುಗಳಿಂದ ನೋಡಹೋಗುವರಾಯು
ಜಗವೆಲ್ಲ ಕೀರ್ತಿಯಾಯು,

ಏನು ಫಲವಾಯ್ಕೆಂದು ಪಾಮರರು ಕೇಳುವೆವು
ತಿಳಿವನ್ನು ನೀಡಿರಯ್ಯ ;
ಜ್ಞಾನ ಭಕ್ತಿಯುಮಿಲ್ಲ, ಮೂಢ ಭಕ್ತಿಯಲ್ಲ
ಸಿಕ್ಕವಯ್ಯ,

2

೧೭