ಪುಟ:ಕವಿಯ ಸೋಲು.pdf/೨೯

ವಿಕಿಸೋರ್ಸ್ದಿಂದ
ಈ ಪುಟವನ್ನು ಪ್ರಕಟಿಸಲಾಗಿದೆ

ಕವಿಯ ಸೋಲು

ನಮ್ಮಂತೆ ನೀವಿರಲು ನಿಸ್ಸತ್ವರಾಗಿರಲು
ಸೆರೆಯಲ್ಲಿ ಕೊಳೆಯುತಿರಲು
ನ್ಯಾಯದಲಿ ಧರ್ಮದಲಿ ದೈವದಲಿ ಯೋಗದಲ್ಲಿ
ನಂಬುಗೆಯು ಬಾರದಯ್ಯ.

ಶುಷ್ಕ ವೇದಾಂತಕ್ಕೆ ಮಾತಿನಾ ಜಗಳಕ್ಕೆ
ಜೀವಗಳ ತೆತ್ತರೇಕೋ ?
ಯುಗಪುರುಷರವತಾರ ಬರಿಹೊಟ್ಟೆ ನಾಡಿನಲಿ
ಅಡಿಗಡಿಗೆ ಮಾಡಲೇಕೋ ?

ರಾಮಕೃಷ್ಣರು ಬೇಡ ಘೋಷ ಗೀಷರು ಬೇಡ
ಬಂದ ಫಲ ಕಂಡೆವಯ್ಯ
ಇಂದ್ರಜಾಲಿಗನೊಬ್ಬ ನಮಗಿಂದು ಬೇಕಯ್ಯ
ಅವನೆನಗೆ ದೇವರಯ್ಯ,


೧೯