ಪುಟ:ಕವಿಯ ಸೋಲು.pdf/೪೨

ವಿಕಿಸೋರ್ಸ್ದಿಂದ
ಈ ಪುಟವನ್ನು ಪ್ರಕಟಿಸಲಾಗಿದೆ

ಕವಿಯ ಸೋಲು


ತನ್ನ ಹೃದಯ ಕರಗೆ ನೋಡಿ
ಮಗಳ ಮುಖದ ದೈನ್ಯವಂ
ಕಚನ ಕೈಯಲಿಟ್ಟ ಗುರುವು
ಮಗಳ ಕರಸರೋಜವಂ.

“ಮೆಲ್ಲನಿವಳ ಕರೆದುತಾರ
ಎನ್ನ ಮುದ್ದು ಮಗಳನು
ಇವಳ ಸುಖದಿ ಪೊರೆವ ಭಾರ
ನಿನಗೆ ವಹಿಸಿಕೊಟ್ಟೆನು.”

ಎಂದು ಗುರುವು ಮುಂದೆ ನಡೆಯೆ
ಕೋಕಿಲೊಂದು ಮಂತ್ರ ಪಾಡೆ
ತಾರೆ ಹೂವನೆರಚಿ ಚಂದ್ರ
ಅಮೃತವರ್ಷ ಕರೆದನು.

“ದೇವಯಾನಿ ಪುಣ್ಯಶಾಲಿ
ಬಹಳ ಕಾಲ ಸುಖದಿ ಇರಲಿ"
ಎಂದು ಹರಸಿ ಶುಕಮಹರ್ಷಿ
ನಗುತ ತಪಕೆ ನಡೆದನು.


೩೨