ಪುಟ:ಕವಿಯ ಸೋಲು.pdf/೫೦

ವಿಕಿಸೋರ್ಸ್ದಿಂದ
ಈ ಪುಟವನ್ನು ಪ್ರಕಟಿಸಲಾಗಿದೆ

ಕವಿಯ ಸೋಲು

ದೊಡ್ಡ ನಾಮ ದೊಡ್ಡ ಮುದ್ರೆ
ಅಡ್ಡ ಬೂದಿ ನಡೆದುವೆಷೆ
ಗೊಡ್ಡು ತತ್ವ ಹೇಳಿಕೊಂಡು
ಜಡ್ಡು ಹಿಡಿದವು.

ಹಿರಿದು ಸರಿಗೆ ಹಿರಿದು ಸೇಟ
ಸರಿದು ನಡೆದ ಸಾಹುಕಾರ
ಕುರುಡನಾಲೂ ತಿಳಿದು ಹೇಳಿ
ಅರಿಯ ಬಲ್ಲಡೆ.

ಚಲನ ಚಿತ್ರ ನೋಡಲೆಂದು
ಕಲೆಯ ತಿರುಳ ನೋಡಲೆಂದು
ಮಲಿನಮನರು ಹೋದರೆಷ್ಟೋ
ನಲಿಯುತಲ್ಲಿಗೆ.

ಎನಿತು ಜನರು ಬಂದರೇನು
ಎನಿತು ಜನರು ಹೊದರೇನು
ನೆನೆದರಿಲ್ಲ ಕುರುಡನಿರವ
ಮನದ ರಂಗದಿ.

"ಇವನ ಕೂಗು ಕಿವಿಗೆ ಅಲಗು
ಇವನ ರೂಪು ಕಣ್ಗೆ ಘೋರ
ಜವನ ಪುರಕೆ ಹೋಗದೇಕೆ
ಇವನು ನಿಂತನು.

೪೦