ಈ ಪುಟವನ್ನು ಪ್ರಕಟಿಸಲಾಗಿದೆ
ಪೂಜಾರಿ
ದೇವರ ಸತ್ಯವು ಊರಲಿ ಹರಡಿತು
ಬಂದರು ಭಕ್ತರು ತಮತಮಗೆ |
ಹೂವನು ಕಾಯನು ಹಣ್ಣನು ಜೋಡಿಸಿ
ತಂದರು ಹರಕೆಯ ಬೇಡಲಿಕೆ.
ದೇವರ ಮಹಿಮೆಯು ಹೆಚ್ಚಾಗಿರುವುದು
ಕರುಗುಡಿ ಬಾಗಿಲು ಬಿಗಿದಿಹುದು
ದೇವರ ನೆಡಲು ಕಂಡಿಗಳಿರುವುವು
ಕಿರುಬಾಗಿಲ ಬೆಳಕಂಡಿಗಳು.
ಬಂದವರೆಲ್ಲರು ಕಾಯಿಗಳೊಡೆವರು
ಹೊರಗಡೆ ಕರ್ಪುರ ಹಚ್ಚುವರು |
ತಂದಿಹ ಮುಡುಪನು ದೇವರು ಕೊಳ್ಳಲು
ಹೊರಗಡೆ ತಪ್ಪದೆ ಬಿಟ್ಟಿಹರು.
ಸಂಕಟಪಟ್ಟವರೊಬ್ಬರೆ ಬಂದರೆ
ಸಂಜೆಯಲೇಕಾಂತದಲಿ |
ಬಿಂಕವ ಬಿಟ್ಟಾ ದೇವರು ನುಡಿವನು
ಅಂಜಿಕೆ ಕಳೆವನು ನಲ್ಮೆಯಲಿ.
೪೭