ಈ ಪುಟವನ್ನು ಪ್ರಕಟಿಸಲಾಗಿದೆ
ಕವಿಯ ಸೋಲು
"ಲೋಕದ ತೊಡಕನು ಬಿಡಿಸದೆ ದೇವರ
ಪಾಪದ ಭೀತಿಯ ತೊಲಗಿಸದೆ !
ಏಕಿಂತೆಲ್ಲರ ದುಃಖಕೆ ಸಿಕ್ಕಿಸಿ
ತಾಪಕೆ ನೀಗುರಿ ಮಾಡಿಸುವೆ ?
ಲೋಕದ ದುಃಖವ ನೋಡುತ ನೋಡುತ
ಭರವಸೆ ಜೀವನವೆನಿಸುವುದು |
ಸಾಕೈ ದೇವರ ಭರವಸೆ ಕೊಡುವೆನು
ಪೊರೆಯುವ ಶಕ್ತಿಯ ಕರುಣಿಪುದು.
ನಿನ್ನಯ ಹೆಸರಲಿ ನಿನ್ನಯ ಮರೆಯಲಿ
ನೋವನ್ನು ಕಳೆಯಲು ಆಡುವೆನು |
ನಿನ್ನೀ ಮೂರ್ತಿಯನೊಡೆದದ್ದಾದರೆ
ಆವನ ಮರೆಯಲಿ ನಿಲ್ಲುವೆನು.”
ಆಯಿತು ಅಲ್ಲಿಯೆ ಕಾಂತಿಯ ವಿಗ್ರಹ
ಒಡನೆಯೆ ಬೆಳಗಿತು ಮಂದಿರವು |
ಭಯದಿಂದರ್ಚಕ ಕೈಗಳ ಮುಗಿದನು
ಹಿಡಿದನು ದೇವರ ಪದಗಳನು.
ಮಂದಸ್ಮೇರವ ದೇವರು ಬೀರುತ
ಮುಂದಿನ ಮಾತನು ಆಡಿದನು |
"ಮಂದಿಯ ಸಲಹಿದೆ ನೀನೇ ದೇವರು
ಕುಂದದೆ ನೀಡಿದೆ ಅಭಯವನು.
೫೮