ಈ ಪುಟವನ್ನು ಪ್ರಕಟಿಸಲಾಗಿದೆ
ಕವಿಯ ಸೋಲು
ಆಡಿ ತೋರದೊಡೇನು
ಮಾಡಿ ತೋರದೊಡೇನು
ಮಡುತಿರೆ ಮನದಲ್ಲಿ
ಪಾಪ ವಾಸನೆಯಾಯ್ತು
ವಿಷಯಗಳ ಸುಖಕಿಂತ
ಹಿರಿಯ ಸುಖವೊಂದುಂಟು
ಗುರು ಕರುಣ ಬಂದಲ್ಲಿ
ಆ ಸುಖದ ತಿಳಿವುಂಟು
ಹಿರಿಯ ಸುಖ ಕಂಡಾಗ
ಮುಮ್ಮ ಬಂದಡಸುವುದು
ನಾಯಿಗಳು ಸಾಯುವುವು
ಮನವು ಬಯಲಾಗುವುದು.
ಮನಕೆ ಮುಪ್ಪಾಗದೆಯೆ
ಹಿರಿಯ ಸುಖ ತಾನಿಲ್ಲ
ಮನವೆ ಕರ್ಮದ ಮಲ
ಮನವನ್ನೆ ಕೊಲ್ಲುವುದು.
ಈ ಮುಪ್ಪು ಬಂದವರ
ಕಣ್ಣಿಟ್ಟು ಹುಡುಕುತಿರು
ಅವರ ನೆಲೆ ಸಿಕ್ಕಾಗ
ಹಿಂದೆಯೇ ನಡೆಯುತಿರು.
೭೨