ವಿಷಯಕ್ಕೆ ಹೋಗು

ಪುಟ:ಜಾಗರ.pdf/೧೦೦

ವಿಕಿಸೋರ್ಸ್ದಿಂದ
ಈ ಪುಟವನ್ನು ಪ್ರಕಟಿಸಲಾಗಿದೆ

೯೨ | ಜಾಗರ

ಅರ್ಥಗಾರಿಕೆಯೂ ಪಾತ್ರನಿರ್ವಹಣೆಯಲ್ಲಿ ಪೀಠಿಕೆ ಅಥವಾ ಪಾತ್ರಪ್ರವೇಶ ಸ್ವಗತವೆಂಬುದು ಒಂದು ಅಂಶ, ಆ ಸನ್ನಿವೇಶದಲ್ಲಿ ಒಂದು ಪಾತ್ರದ ಮಾನಸಿಕ ಸ್ಥಿತಿ, ಸಂಘರ್ಷಗಳನ್ನು ಚಿತ್ರಿಸುವುದು, ಪಾತ್ರದ ಜೀವನದೃಷ್ಟಿ, ಧೋರಣೆಗಳನ್ನು ಮುಂದುವರಿಸುವುದು, ಹಿಂದಿನ ಕತೆಯನ್ನು ಹೇಳಿ ಸಂದರ್ಭವನ್ನು ಸೂಚಿಸುವುದು ಇವೆಲ್ಲ ಪೀಠಿಕೆಯ ಉದ್ದೇಶಗಳು. ಕೆಲವರು ಬರಿಯ ಪೂರ್ವಕತೆಯನ್ನು ಪೀಠಿಕೆ ಯಾಗಿ ಹೇಳುತ್ತಾರೆ. ಹೀಗೆ ಹೇಳುವಾಗ ಒಂದು ಪಾತ್ರದ ದೃಷ್ಟಿ ಯಿಂದ ಘಟನೆಗಳ ವಿಶ್ಲೇಷಣೆ ಇದ್ದರೇನೇ ಸೊಗಸು. ಉದಾ : ಕೌರವನ ಪೀಠಿಕೆಯಲ್ಲಿ ಹಿಂದಿನ ಘಟನೆಗಳ ಕುರಿತು ತನ್ನ ಪರವಾದ ವಿವೇಚನೆ ಬರಬೇಕು. ಅದು ಅವನ Version. ಹರಿಕಥೆಯಂತಹ ತತ್ವ ವಿವೇಚನಾತ್ಮಕವಾದ ಪೀಠಿಕೆ ಹೇಳುವವರುಂಟು. (ಸಾಮಗ ಸೋದರರು) ಇದು 'ಮುಂದಿನ ಕತೆ ಗೊತ್ತಿದ್ದವನ ಮಾತು' ಆಗುತ್ತದೆ.
ತತ್ವವಾಗಲಿ, ಕತೆಯಾಗಲಿ ಅದಕ್ಕಾಗಿ ಬಂದರೆ ಫಲವಿಲ್ಲ. ಅವು ಕಲಾ ಶಿಲ್ಪದಲ್ಲಿ ಎರಕವಾಗಿ, ಅಭಿವ್ಯಕ್ತಿಯ ಅನಿವಾರ್ಯ ಅಂಗಗಳಾಗಿ ಬಂದರೇ ಚೆನ್ನ. (ಶೇಣಿಯವರ, ದೇರಾಜೆಯವರ ಪೀಠಿಕೆಗಳು ಈ ಕ್ರಮದವು) ಪೀಠಿಕೆಯೆಂಬುದು ಕೇವಲ ಸ್ವಪಾತ್ರ ಸಮರ್ಥನೆಗಾಗಿಯೇ ಉಪಯೋಗವಾದರೆ ಸರಿಯಾಗದು. ವಾಸ್ತವಿಕ ಮನಃ ಸ್ಥಿತಿ ಅದರ ಹಿನ್ನೆಲೆಗಳನ್ನು ಮಾನಸಿಕ ಘರ್ಷಣೆ ಸಮಸ್ಯೆಗಳನ್ನು ಅದು ಚಿತ್ರಿಸಬೇಕು. (ದಿ| ಪೊಳಲಿ ಶಾಸ್ತ್ರಿಗಳು ಭೀಷ್ಮನಾಗಿ ಸಂಸಾರದ ಮೋಹ ಹೇಗೆ ತನ್ನನ್ನು ದುರ್ಬಲನನ್ನಾಗಿಸಿತು ಎಂಬುದನ್ನು ಪೀಠಿಕೆಯಲ್ಲಿ ಹೇಳುತ್ತಿದ್ದರು) ಕತೆಯ ಸಿಂಹಾವಲೋಕನವಾದ (Flash back) ಬರಬೇಕು. ಪಾತ್ರವು ತನ್ನ (ಅಂತರಂಗ ಶೋಧನೆ' ಮಾಡಲು ಪೀಠಿಕೆ ಉತ್ತಮ ಅವಕಾಶ, ಪಾತ್ರದ ಕಲ್ಪನೆ ಸ್ಪಷ್ಟವಾಗಿದ್ದಾಗ ಚುಟುಕಾದ ಪೀಠಿಕೆ ಕೂಡಾ ಸ್ಪಷ್ಟ ಚಿತ್ರ ನೀಡಬಲ್ಲದು. (ಉದಾ : ಮಹಾಬಲ ಹೆಗ್ಡೆ ಅವರ ಪೀಠಿಕೆ ಕ್ರಮ ಒಂದೇ ಕತೆಯಲ್ಲಿ ಬರುವ ವಿವಿಧ ಪಾತ್ರಗಳು ಪೀಠಿಕೆ ಹೇಳುವಾಗ ಹಿಂದಿನ ಕತೆ ಪುನರಾವರ್ತನೆ ಆಗುವುದನ್ನೂ ತಪ್ಪಿಸಲು ಎಚ್ಚರ ವಹಿಸಬೇಕು. ವಾಲಿವಧೆ, ಸುಧನ್ವ ಕಾಳಗಗಳಲ್ಲಿ 'ಮಾಮೂಲು ಪೀಠಿಕೆ'ಗಳಿಂದ ಇಂತಹ ಪುನರಾವರ್ತನೆಯಾಗಿ ಬೋರು ಹೊಡೆಯುತ್ತದೆ. ಪೀಠಿಕೆ ಯ ಕೂಡಾ ಪಾತ್ರ ಪ್ರವೇಶದ ಹಾಡಿನ ಸೀಮೆಗೆ ಹೊಂದಿಬರಬೇಕು. ಪದ್ಯ ಒಂದು ಕಡೆ, ಪೀಠಿಕೆ ಒಂದು ಕಡೆ ಆಗಬಾರದು.
ಆ ಮುಖ್ಯವಾದ ಪಾತ್ರಗಳಿಗೆ ಪೀಠಿಕೆ ಹೇಳಬೇಕಿಲ್ಲ. ಪ್ರತಿಯೊಂದು ಪಾತ್ರವೂ ಪೀಠಿಕೆ ಹೇಳಲೇಬೇಕೆಂಬ ಹಟ ತಾಳಮದ್ದಳೆಯನ್ನು ಕೆಡಿಸುತ್ತದೆ. ಪಂಚವಟಿಯ ಲಕ್ಷ್ಮಣ, ಮಂಡೋದರಿ, ವಾಲಿವಧೆಯ ತಾರೆ, ಕೃಷ್ಣ ಸಂಧಾನದ ಕರ್ಣ