ವಿಷಯಕ್ಕೆ ಹೋಗು

ಪುಟ:ಜಾಗರ.pdf/೧೦೩

ವಿಕಿಸೋರ್ಸ್ದಿಂದ
ಈ ಪುಟವನ್ನು ಪ್ರಕಟಿಸಲಾಗಿದೆ
ತಾಳಮದ್ದಳೆ / ೯೫

ಇಲ್ಲಿ ಅವಶ್ಯ. ಸಂಸ್ಕೃತ ಭೂ ಯಿ ಷ್ಠತೆ ಇದರ ಒಂದು ಮುಖ್ಯ ಲಕ್ಷಣ. ಆಶು ಭಾಷಣದಿಂದಲೇ ಮಾತುಗಾರಿಕೆ ಸಾಗುವುದರಿ೦ದ ದೇಸಿಯ ಬಳಕೆ ಇರುತ್ತದೆ' ಸಮರ್ಥ ಅರ್ಥಧಾರಿ ದೇಸಿಯನ್ನು ಹದವರಿತು ಬಳಸಿ, ಪರಿಣಾಮ ಬೀರಬಲ್ಲ ಕ್ರಿಯಾಪದ ಇತ್ಯಾದಿಗಳು ಆಡು ಭಾಷೆಯಂತೆಯೇ ಇರುವುದು, ತಾಳಮದ್ದಳೆಯ ಅಂಗೀಕೃತ ತತ್ವ. ಉದಾ : 'ಹೋಗೋನೆ, ಬರಿಕ್ಕೆ' ಇತ್ಯಾದಿ. ದಕ್ಷಿಣೋತ್ತರ ಕನ್ನಡಗಳ ವ್ಯಾವಹಾರಿಕ ಕನ್ನಡವೂ ಗ್ರಂಥ ಭಾಷೆಯ ಜಾತಿಯದು. ತಾಳಮದ್ದಳೆಯ ಮಾತುಗಾರನಿಗೆ, ನೆರವಾಗಿ ಬಂದಿರುವ ಒಂದು ಅಪೂರ್ವ ಸುಯೋಗ, ಕರಾವಳಿಯಲ್ಲಿನ ಜನರ ವಾಚಾಳಿತನ, ತರ್ಕ, 'ಸಪಾಯಿ' ಮಾತಿಗೂ ಯಕ್ಷಗಾನದ ಮಾತುಗಾರಿಕೆಗೂ ಸಂಬಂಧ ಇದೆ.
ಅರ್ಥದ ಔಚಿತ್ಯ ವಿಚಾರವನ್ನೂ, ವಾಸ್ತವಿಕ ನಾಟಕದಂತೆ ಗಣಿಸಲಾಗು ವುದಿಲ್ಲ. ಅದರ ಔಚಿತ್ಯದ ಸೀಮೆ ಭಿನ್ನ ಮತ್ತು ವಿಸ್ತ್ರತ. ಅದು ಪೌರಾಣಿಕ ಅವಾ ಸ್ತವ ಲೋಕವಾದುದರಿಂದ. ಯುದ್ಧರಂಗದಲ್ಲಿ ವಾದ ಯಾಕೆ?” ಕರ್ಣ-ಶಲ್ಯರು ಅಷ್ಟು ಹೊತ್ತು ಚರ್ಚಿಸಿದರೆ, ಅರ್ಜುನ ನೋಡುತ್ತ ಸುಮ್ಮನಿರುತ್ತಾನೆಯೆ?” “ಹೀಗೆ ಕೃತಕವಾಗಿ ಮಾತಾಡುವುದು ಅಸಂಭವ ವಲ್ಲವೆ?” ಎಂಬಂತಹ ಪ್ರಶ್ನೆ ಗಳು ಈ ನಾಟಕ ಮಾಧ್ಯಮಕ್ಕೆ ಅಸಂಗತ. ಅದೊಂದು ಜಾತಿಯ ರಂಗಭೂಮಿ, ಅದರ ಕ್ರಮ ಹಾಗೇ ಎಂದು ಒಪ್ಪಬೇಕು. ಪ್ರಸಂಗವೆಂಬ ರೂಪಕದ ಚೌಕಟ್ಟಿನಲ್ಲಿ ಪೌರಾಣಿಕ ಸನ್ನಿವೇಶದ ಸೃಷ್ಟಾತ್ಮಕ ಪುನರ್‌ನಿರ್ಮಾಣ, ತಾಳಮದ್ದಳೆ ಎಂಬ ಅರಿವು ಮುಖ್ಯ. ಉಳಿದಂತೆ, ಔಚಿತ್ಯದ ಬಂಧನಗಳು ಅರ್ಥಗಾರಿಕೆಗೆ ಇದ್ದೇ ಇವೆ.
ತಾಳಮದ್ದಳೆ ಎಂಬುದು ತರ್ಕದ ಕ್ಷೇತ್ರ, ವಾದ ಭೂ ಮಿ ಎಂಬ ಕಲ್ಪನೆ, ನಮ್ಮ ಪ್ರೌಢರೆನಿಸಿದ ಕಲಾವಿದರಲ್ಲೂ ಪ್ರೇಕ್ಷಕರಲ್ಲೂ ಇರುವುದು ಒಂದು ಶೋಚ ನೀಯ ಸಂಗತಿ, ಅರ್ಥಧಾರಿಗಳ ಕಾಳಗ' ನೋಡಲೆಂದೇ ಬರುವ ಮಂದಿಗೆ ಕಡಿಮೆ ಇದು ಅರ್ಥಧಾರಿಗಳನ್ನು ದಾರಿ ತಪ್ಪಿಸುತ್ತದೆ. ಅರ್ಥಧಾರನ ಯೋಗ್ಯತೆ ಯನ್ನು ಕೇವಲ ಚರ್ಚಾಪ್ರಾವೀಣ್ಯದಿಂದ, ತರ್ಕದ ಮಾನದಿಂದ ಅಳೆಯುವ ಮಾನ ದಂಡ ಈ ರಂಗದ ಒಂದು ಅಪಾಯಕಾರಿ ಮೌಲ್ಯ, ತಾಳಮದ್ದಳೆ ಒಂದು ನಾಟಕ, ಭಾವ, ರಸ, ಚಿತ್ರಣಗಳ ಕಲಾತ್ಮಕ ಅಭಿವ್ಯಕ್ತಿಯ ಲೋಕ, ತರ್ಕ ಇವಕ್ಕೆ ಅನು ವರ್ತಿ. ಪ್ರಬಲವಾದ ತರ್ಕ, ವಾತಿನ ಕಸರತ್ತು ಚುರುಕು ಮಾತು, ಎಲ್ಲ ಬೇಕು ನಿಜ, ಆದರೆ ವಾದಕ್ಕೂ ಮಿತಿ ಇದೆ. ಕಥೆ ಇದಿರಿನ ಪಾತ್ರ, ಸಹ ಕಲಾವಿದನ ಮಾರ್ಗ ಇವುಗಳನ್ನೆಲ್ಲ ಹೊಂದಿ ಅದು ನಡೆಯಬೇಕು. ಯಾವ ಪ್ರಶ್ನೆ, ಯಾವಾಗ