ವಿಷಯಕ್ಕೆ ಹೋಗು

ಪುಟ:ಜಾಗರ.pdf/೧೨೦

ವಿಕಿಸೋರ್ಸ್ದಿಂದ
ಈ ಪುಟವನ್ನು ಪ್ರಕಟಿಸಲಾಗಿದೆ



ಅರ್ಥಗಾರಿಕೆ – ೧
ಅರ್ಥಗಾರಿಕೆಯ ಬಗೆಗಿನ ಒಂದು ವ್ಯವಸ್ಥಿತವಾದ, ಚರ್ಚೆಗೆ ಸೂಕ್ತವಾದ, ಸಂಯೋಜಿತವಾದ ತಳಹದಿಯನ್ನು ಒದಗಿಸುವಲ್ಲಿ ಶ್ರೀ ನಂಬಿಯಾರರ ಪ್ರಬಂಧ ಯಶಸ್ವಿಯಾಗಿದೆ. ಅರ್ಥಗಾರಿಕೆ, ಅದರ ಕಲಾತ್ಮಕತೆ, ಅಪೇಕ್ಷೆಗಳು, ಉದ್ಧರಣಗಳು, ಆಕರ-ಆಧಾರಗಳ ಪ್ರಶ್ನೆ, ಸಂವಾದ-ವಿವಾದಗಳು ಮಾತು-ಹಾಡು ಗಳ ಸಂಬಂಧ, ಪ್ರಸಂಗಗಳು ಪ್ರತಿಪಾದಿಸುವ ಮೌಲ್ಯ, ಪದಯೋಗ ಮತ್ತು ಪೌರಾಣಿಕ ಚಿತ್ರಣ -ಮುಂತಾದ ವಿಚಾರಗಳನ್ನೆಲ್ಲ ಸಮರ್ಥವಾಗಿ, ವಿಶ್ಲೇಷಿಸಿದ್ದಾರೆ ಪ್ರಬಂಧಕಾರರು.
'ಬಯಲಾಟದಲ್ಲಿ ಮಾತುಗಾರಿಕೆಯ ಕೆಲಸ ಅಭಿವ್ಯಕ್ತಿಯ ನಾಲ್ಕನೆ ಒಂದಂಶ ಮಾತ್ರ (ನೃತ್ಯ, ವೇಷ, ಅಭಿನಯಗಳು ಇರುವುದರಿಂದ) ಆದರೆ, ತಾಳ ಮದ್ದಳೆ ಯಲ್ಲಿ ಹಾಗಲ್ಲ' - ಎಂಬರ್ಥದ ನಂಬಿಯಾರರ ವಾದಕ್ಕೆ, ಕೇಶವ ಉಚ್ಚಿಲ್, ಪೆರ್ಲ, ಶಂಭು ಹೆಗ್ಡೆ ಈ ಮೂವರೂ ಆಕ್ಷೇಪ ಎತ್ತಿದ್ದಾರೆ. ಅವೆರಡೂ ಬೇರೆ ಬೇರೆ ಮಾಧ್ಯಮಗಳಾದುದರಿಂದ ಇಂತಹ ಸರಳೀಕೃತ ಸಿದ್ದಾಂತ ಸರಿಯಲ್ಲ ಎಂಬುದು ಅವರೆಲ್ಲರ ಆಕ್ಷೇಪ, ಈ ಆಕ್ಷೇಪ ಅರ್ಥಪೂರ್ಣವಾದುದು, ತನ್ನ ಅಭಿಪ್ರಾಯ ವನ್ನು ಇಲ್ಲಿ ಪ್ರಬಂಧಕಾರರು ಹೆಚ್ಚು ಸ್ಪಷ್ಟ ಪಡಿಸಬಹುದಿತ್ತು. ಸನ್ನಿವೇಶ, ಚಿತ್ರಣ. ಪ್ರವೇಶ, ನಿರ್ಗಮನ, ಯುದ್ದ - ಇತ್ಯಾದಿಗಳ ಚಿತ್ರಣಕ್ಕೆ ಇಲ್ಲಿ ಮಾತು ಮಾಧ್ಯಮ ರಂಗ ಪರಿಕರಗಳ ನೆರವಿಲ್ಲ ಎಂಬುದನ್ನು, ಅವರು ಬೇರೆಡೆ ಹೇಳಿದ್ದರಾದರೂ, ಇದು, 'ನಾಲ್ಕನೇ ಒಂದಂಶ' - ಎಂಬ ಮಾತಿಗೆ ಪೂರಕವಾಗಿ ಅಲ್ಲ, ಆಟದಲ್ಲಿರುವ ಬಹು ಮಾಧ್ಯಮಗಳ ಕೆಲಸವನ್ನು ತಾಳಮದ್ದಳೆಯಲ್ಲಿ ಮಾತೊಂದೇ ಪೂರೈಸುತ್ತದೆ, ಎಂಬುದು ಸರಳವಾದ ಒಂದು ಅರ್ಥದಲ್ಲಿ ಸರಿಯಾದರೂ, ಆ ಎರಡು ನಾಟಕ ಪ್ರಕಾರಗಳ ಸಮಗ್ರ ತುಲನೆಯ ಮಟ್ಟದಲ್ಲಿ ಪರಮ ಸತ್ಯವಾಗಲಾರದು.ಈ ಒಂದು ವಿಷಯವೇ ಆಳವಾದ ವಿವೇಚನೆಗೆ ಅರ್ಹವಾದದ್ದು.
ಭಾಗವತನ ಹಾಡು - ಮತ್ತು ಮಾತಿನ ಸರಣಿ, ವೇಗ, ಲಯಗಳಲ್ಲಿ ಒಂದು