ವಿಷಯಕ್ಕೆ ಹೋಗು

ಪುಟ:ಜಾಗರ.pdf/೧೨೫

ವಿಕಿಸೋರ್ಸ್ದಿಂದ
ಈ ಪುಟವನ್ನು ಪ್ರಕಟಿಸಲಾಗಿದೆ
ಅರ್ಥಗಾರಿಕೆ

ಬೇಕೇ ಬೇಕು. ಪೆರ್ಲರು ನಿರ್ಮಿಸಿದ 'ಅಷ್ಟಾಂಗವ್ಯೂಹ' ವಿವೇಚನೆಯಲ್ಲಿ ನಿರೀಕ್ಷಿತ ಮಟ್ಟಕ್ಕೆ ಬೆಳೆದಿಲ್ಲ. (ಬಹುಶಃ ವಿಸ್ತಾರ ಭಯವೂ ಒಂದು ಕಾರಣವಿರಬೇಕು. ಅರ್ಥ ಗಾರಿಕೆಯಲ್ಲಿರುವ, ಹಲವು ಅಸಂಬದ್ಧತೆಗಳನ್ನೂ, ದುಷ್ಕೃವೃತ್ತಿಗಳನ್ನೂ ಪೆರ್ಲರು ಬಲವಾಗಿ ಖಂಡಿಸಿದ್ದಾರೆ - ರಂಗದ ಹಿರಿಯ ಕಲಾವಿದರಾಗಿ ಅವರು ಮಾಡಿದ ಈ ಖಂಡನೆಮಹತ್ವದ್ದೆನಿಸುತ್ತದೆ. )
ಅರ್ಥಗಾರಿಕೆಯ ಭಾಷೆ - ಮತ್ತು ಅದರಲ್ಲಿನ ಆಡುಮಾತಿನ ಸ್ಥಾನದ ಬಗ್ಗೆ ವಿವೇಚಿಸುವಾಗ - ಯಕ್ಷಗಾನವು ಪೌರಾಣಿಕ ರಂಗವಾದುದರಿಂದ ಗ್ರಾಂಥಿಕವಾದ ಭಾಷೆ ಅವಶ್ಯ, ಆಡುಮಾತು ಸಲ್ಲ - ಎಂಬ ಧೋರಣೆ ತೀರ ಸರಳವಾದ ದೃಷ್ಟಿ ಎಂದು ನನಗನಿಸುತ್ತದೆ. ಭಾಷೆ ಪ್ರೌಢವೂ ಒಂದಷ್ಟು ಹಳತೂ' ಇರಬೇಕಾದುದು ಅವಶ್ಯ ನಿಜ, ಆದರೆ ಯಕ್ಷಗಾನದ ಮಾತಿನ ಲಯ, ಕ್ರಿಯಾಪದಗಳ ರೂಪಗಳು, ಪ್ರತ್ಯಯಗಳು, ಆಡುಮಾತಿನವು ಎಂಬುದು ಗಮನಾರ್ಹ, ಅಲ್ಲದೆ ಸಮರ್ಥನಾದ ಕಲಾವಿದ 'ದೇಸಿಯ ಬಳಕೆಯಿಂದ ಅಭಿವ್ಯಕ್ತಿಗೆ ಶಕ್ತಿ, ಸೊಗಸು ತರಬಲ್ಲ ಎಂಬು ದಕ್ಕೆ ದಿ| ಪೊಳಲಿ ಶಾಸ್ತ್ರಿಗಳ ಹಾಗೂ ಶೇಣಿಯವರ ಕೆಲವು ಆಡುಮಾತಿನ ಪ್ರಯೋಗ ಗಳು ಸಾಕ್ಷಿ. ಕೆಲವೊಮ್ಮೆ ಮಾತು. ಅದರ ಸಾಹಿತ್ಯಾಂಶವನ್ನು ಆಧರಿಸದೆ, ಕೇವಲ ಅಭಿವ್ಯಕ್ತಿ ವಿಧಾನದಿಂದಲೇ ಸಫಲವಾಗುತ್ತದೆ. (ತೋಳ್ಪಾಡಿಯವರು ಪ್ರಸ್ತಾವಿ ಸಿದ ಮಾತಿನ ವಿಶಿಷ್ಟತೆಯನ್ನು ಇಲ್ಲಿ ನೆನಪಿಸಬಹುದು) ಆಡುಮಾತನ್ನು ಹೊಂದಿ ಸುವ ರೀತಿಯ ಕಲಾತ್ಮಕತೆಯೇ ಇಲ್ಲಿನ ಮಾನದಂಡ.
ವಾದದ ಮಿತಿ, ಆಕರ, ಆಧಾರಗಳ ಬಗೆಗೆ ಕೃಷ್ಣ ಭಟ್ಟರು ಇನ್ನಷ್ಟು ಆಳವಾಗಿ ವಿವೇಚಿಸಬಹುದಾಗಿತ್ತು ಅನಿಸುತ್ತದೆ. ವೈಚಾರಿಕವಾದ ಅರ್ಥಗಾರಿಕೆ, ಆಟಕ್ಕೆ ಅವಶ್ಯವಲ್ಲ. ತಾಳಮದ್ದಳೆಗೆ ಬೇಕು ಎಂಬರ್ಥದ ಮಾತುಒಪ್ಪಬಹುದಾದು ದಲ್ಲ, ಬೇಕಾದರೆ, ಅದು ಎರಡೂ ಪ್ರಕಾರಗಳಲ್ಲಿ ಬೇಕು.
ಆಗಲೇ ಪ್ರಸ್ತಾವಿಸಿದಂತೆ, ಶ್ರೀ ನಂಬಿಯಾರರ ಪ್ರಬಂಧಕ್ಕೆ ನೇರ ಪ್ರತಿ ಕ್ರಿಯೆ ಕೇಶವ ಉಚ್ಚಿಲರದು. ಅರ್ಥಗಾರಿಕೆಯ ಸ್ವರೂಪ ಸಮೀಕ್ಷೆಯೇ ತೊಡಕಿನ ದೆಂದು ಉಚ್ಚಿಲರು ಹೇಳಿದ್ದಾರೆ. ಆದರೆ ಅಂತಹ ಭಯಕ್ಕೇನೂ ಆಸ್ಪದವಿಲ್ಲ, ಸಾಕಷ್ಟು ಪ್ರಮಾಣದಲ್ಲಿ ವಿಮರ್ಶೆ ಬೆಳೆದಾಗ, ಈ ತೊಡತು ಪರಿಹಾರವಾಗುತ್ತದೆ.
ಆಟದಲ್ಲಿ ಮಾತು ನಾಲ್ಕನೇ ಒಂದಂಶ. ತಾಳಮದ್ದಳೆಯಲ್ಲಿ ವೇಷ ನೃತ್ಯಾಭಿನಯಗಳ ಜಾಗದಲ್ಲಿ ಮಾತೇ ಇರುತ್ತದೆ ಎಂಬುದನ್ನು ಆಕ್ಷೇಪಿಸಿ ಅಂಕ ಗಣಿತದ ಸರಳ ಸೂತ್ರ ಸರಿಯಿಲ್ಲ ಎಂದು ಹೇಳಿ ಉಚ್ಚಿಲ್ ಮುಖ್ಯ ಅಂಶ ಒಂದನ್ನು ತೋರಿಸಿದ್ದಾರೆ. ಆದರೂ, ನಂಬಿಯಾರರ ಮುಖ್ಯ ನಿಲುವಿಗೆ ಇದರಿಂದ ಬಾಧಕ ವಿಲ್ಲ ಎಂದೆನಿಸುತ್ತದೆ. ಏಕೆಂದರೆ ಆಟದ ಅಭಿವ್ಯಕ್ತಿ ಹೆಚ್ಚು ನಾಟಕೀಯ