ವಿಷಯಕ್ಕೆ ಹೋಗು

ಪುಟ:ಜಾಗರ.pdf/೧೨೭

ವಿಕಿಸೋರ್ಸ್ದಿಂದ
ಈ ಪುಟವನ್ನು ಪ್ರಕಟಿಸಲಾಗಿದೆ
ಅರ್ಥಗಾರಿಕೆ

ಗೋಷ್ಠಿಯಲ್ಲಿ ಸಾಕಷ್ಟು ಚರ್ಚೆ ಆಗಿದೆ (ಚರ್ಚೆಯ ಬಹುತೇಕ ಅ೦ಶ ಶೇಣಿ- ಸಾಮಗರ ಅರ್ಥಗಾರಿಕೆಯನ್ನೆ ಲಕ್ಷಿಸುವುದು ಸ್ವಾಭಾವಿಕ.) ಸಮಕಾಲೀನ ಪ್ರಜ್ಞೆ, ಚಿಂತನಗಳ ಅಳವಡಿಕೆಗೆ ಬಹುಶಃ ಆಕ್ಷೇಪ ಇರುವುದಿಲ್ಲ. ಆಕ್ಷೇಪ ಇರುವುದು ಪದ ಪ್ರಯೋಗ, ಅಭಿವ್ಯಕ್ತಿ ವಿಧಾನದ ಬಗೆಗೆ, ಹಿ೦ದಣ 'ಸಾಂಸ್ಕೃತಿಕ ಕಲೆ'ಯೊಂದರ ಆವರಣದೊಳಗೆ ಸಮಕಾಲೀನ ಪ್ರಜ್ಞೆಯನ್ನು ತರುವ ವಿಧಾನ ಯಾವುದು ಎಂಬುದು ಪ್ರಶ್ನೆ, ಈ ರಂಗದ ಆಯಾಮ ವಿಸ್ತರಣೆಗೆ ಅತ್ಯಂತ ಅವಶ್ಯವಾದ ಒಂದು ಮುಖ್ಯ ವಿಷಯ ಇದು. ಈ ಪ್ರಶ್ನೆಯಲ್ಲಿ ಪ್ರಬ೦ಧಕಾರರಿಗೂ - ಶ್ರೀ ಉಚ್ಚಿಲರಿಗೂ, ಸ್ಪಷ್ಟ ಭಿನ್ನಮತ ಇದೆ. ಏಕೆಂದರೆ, ವರ್ತಮಾನವನ್ನು ನೆನಪಿಸುವ ಪದ ಪ್ರಯೋಗ ಗಳ ಬಗ್ಗೆಯೂ ಉಚ್ಚಿಲರ ಒಪ್ಪಿಗೆ, ಸಮರ್ಥನೆ ಇದೆ. ಚಿಂತನದ ಮಟ್ಟದಲ್ಲಿ, ಪೌರಾಣಿಕ ಚಿತ್ರವನ್ನು ಭ೦ಗ ಗೊಳಿಸದೆ, ಸಮಕಾಲೀನ ವಿಚಾರ ತರಲು ಸಾಧ್ಯ ಎಂಬುದು ನ೦ಬಿಯಾರರ ನಿಲುವು.

ಶ್ರೀ ನಂಬಿಯಾರರು ನೀಡಿದ ಕಾಳಿದಾಸನ ಕಾವ್ಯದ ಉದಾಹರಣೆಗೆ, ಶ್ರೀ ಉಚ್ಚಿಲರ ಆಕ್ಷೇಪ ಜಾಣತನದಿಂದ ಕೂಡಿದ್ದರೂ, ಇಲ್ಲಿನ ಮುಖ್ಯ ತಾತ್ಪರ್ಯಕ್ಕೆ ಅದು ಉತ್ತರವಾಗಲಾರದು. ಕಾಳಿದಾಸನದು ತನ್ನ ಕಾಲದ ಸಮಕಾಲೀನತೆ. ನಮ್ಮ ಕಾಲದ್ದನ್ನು ನಾವು ಚಿತ್ರಿಸಿದರೆ ತಪ್ಪೇನು ಎಂಬುದು ಉಚ್ಚಿಲರ ವಾದ. ಇಲ್ಲಿ ಆವರಣ ಪ್ರಶ್ನೆ' ಬಹಳ ಮುಖ್ಯ - ಪಂಪ, ರನ್ನರು ಸಮಕಾಲೀನ ದೃಷ್ಟಿ ಯಿಂದ ಕಾವ್ಯ ರಚನೆ ಮಾಡಿದ್ದಾರೆ - ಎಂಬುದನ್ನು ಸಮರ್ಥನೆಗಾಗಿ ಅವರು ಹೇಳಿ ಪಂಪ, ರನ್ನರು ಬರಿಯ ಶಾಬ್ದಿಕ ಮಟ್ಟದಲ್ಲಿ ಸಮಕಾಲೀನತೆ ತಂದಾಗ ಆಭಾಸವಾದದ್ದನ್ನು ನಾವು ಗಮನಿಸಬೇಕು (ತಾತ್ವಿಕವಾಗಿಯೂ ಅವರು ಸಮಕಾಲೀ ನತೆ ತಂದಿದ್ದಾರೆ. )ಇಂತಹ ಯತ್ನದಿಂದ ಪಂಪರನ್ನರ ಕಾವ್ಯದ ಮೌಲ್ಯ ಇಳಿದಿದೆ, ಹೊರತು ಹೆಚ್ಚಿಲ್ಲ. (ಇದನ್ನೂ ಉಚ್ಚಿಲರು ಗಮನಿಸಿ, ವಾಚ್ಯವಾಗಿ ಸಮಕಾಲೀನತೆ ಬೇಡ ಎಂದೂ ಹೇಳಿದ್ದಾರೆ.) ಇಲ್ಲಿ ಉಚ್ಚಿಲರ ವಾದದಲ್ಲಿ, ಅಸ್ಪಷ್ಟತೆ, ಗೊಂದಲ ಗಳಿವೆ.

ಸಮಕಾಲೀನತೆಯನ್ನು ತರುವಲ್ಲಿ ಎರಡು ದಾರಿಗಳಿವೆ. ಒಂದು ಆಧುನಿಕ ಸಾಹಿತ್ಯ, ಚಿಂತನ, ಜೀವನ ದರ್ಶನ, ಪೌರಾಣಿಕ ವಿಮರ್ಶಾಸಾಹಿತ್ಯ ಮತ್ತು ಸಾಂಸ್ಕೃತಿಕ ವಿಚಾರ ಪ್ರವಾಹಗಳನ್ನು ಪೌರಾಣಿಕ ಆವರಣದಲ್ಲಿ ಎರಕವಾಗಿ ತರುವ ರೀತಿ, (ವಿ. ಸ. ಖಾಂಡೇಕರರ “ಯಯಾತಿ' ಗಿರೀಶ ಕಾರ್ನಾಡರ “ಹಯವದನ” ದ ರೀತಿ) ಇನ್ನೊಂದು ವಾರ್ತಾಪತ್ರಿಕೆಯ ಪದಗಳನ್ನೂ ರಾಜಕೀಯ ಘಟನೆಗಳನ್ನೊ ಹಸಿಹಸಿಯಾಗಿ ತುರುಕಿಸುವ ರೀತಿ, ಇದು ಅಗ್ಗದ ದಾರಿ, ಜನರ ನಗೆ, ಚಪ್ಪಾಳೆ ಗಳಿಗಾಗಿ ಬಳಸುವ ಒಂದು cheap gimmick ( ಈ ಎರಡೂ ದಾರಿಗಳನ್ನು ಅತ್ಯಂತ ಸಮರ್ಥವಾಗಿ ಬಳಸಿದವರು ಶೇಣಿ ಅವರು. ಶ್ರೀ ಶಂಕರನಾರಾಯಣ ಸಾಮಗರ, ದೇರಾಜೆ ಅವರೂ ತಮ್ಮದಾದ ರೀತಿಯಿಂದ ಸಮಕಾಲೀನ ಚಿಂತನ