ವಿಷಯಕ್ಕೆ ಹೋಗು

ಪುಟ:ಜಾಗರ.pdf/೧೩೦

ವಿಕಿಸೋರ್ಸ್ದಿಂದ
ಈ ಪುಟವನ್ನು ಪ್ರಕಟಿಸಲಾಗಿದೆ

೧೨೨ | ಜಾಗರ
ಕೆರೆಮನೆ ಮಹಾಬಲ ಹೆಗ್ಡೆ (ಕಂಸ, ದುಷ್ಟಬುದ್ಧಿ, ಕೌರವ, ಬಲರಾಮ, ಶಂಭುಹೆಗ್ಡೆ (ಸಂಧಾನದ ಕೃಷ್ಣ, ಹರಿಶ್ಚಂದ್ರ) ಕುಂಬ್ಳೆ ಸುಂದರ ರಾವ್ (ತ್ರಿಶಂಕು, ಕರ್ಣ, ಪರೀಕ್ಷಿತ) - ಇವರೆಲ್ಲ ತಮ್ಮ ಪಾತ್ರಗಳಿಗೆ ಹೊಸ ಚಿಂತನದ ಜೀವ ತುಂಬಿಸಿ ಯಶಸ್ಸು ಗಳಿಸಿದ್ದಾರೆ. ಪಾತ್ರಸೃಷ್ಟಿಯ ವೈಚಾರಿಕತೆ ಮತ್ತು ಭಾವಾತ್ಮಕತೆ ಎಂದು ಎರಡಾಗಿ ವಿಂಗಡಿಸುವಾಗ ಅವರು ಶೇಣಿ ಅವರ ವೈಚಾರಿಕತೆ ಮತ್ತು ದೇರಾಜೆ ಅವರ ಭಾವು ಕತಾದಾತ್ಮ್ಯಾ ದೃಷ್ಟಿ ಎಂದುದು, ಒಂದು ತೋರ ಮಟ್ಟಿನ ಸರಳ ವರ್ಗಿಕರಣ ಎಂದೇ ನನ್ನೆಣಿಕೆ. ಬಹುಶಃ ಅದರ ಉದ್ದೇಶವೂ ಅಲ್ಲಿ ಅಷ್ಟೆ.
ಪ್ರಾಚೀನ ಸಂಸ್ಕೃತ ಕಾವ್ಯಗಳ ಜೀವನ ದೃಷ್ಟಿಯ ವೈಶಾಲ್ಯ, ಸಂಕೀರ್ಣ ತೆಗಳು ಮನುಷ್ಯ ಪ್ರಪಂಚದ ಬಗೆಗೆ ಅವಕ್ಕಿರುವ ಹೆಚ್ಚಿನ ನಿಷ್ಠೆ ವಾಸ್ತವ ದೃಷ್ಟಿಗಳ ಬಗ್ಗೆ ಪ್ರಸ್ತಾಪಿಸಿದ ತೋಳ್ಪಾಡಿ , ಪರ್ಯಾಯವಾಗಿ, ಪ್ರಬಂಧಕಾರರ ಮೌಲ್ಯ ವ್ಯವಸ್ಥೆಯ ಚರ್ಚೆಯ ಒಂದು ಮಗ್ಗುಲನ್ನು ಪೂರೈಸಿ ಕೊಟ್ಟಿದ್ದಾರೆ. ಒಟ್ಟಿನಲ್ಲಿ ತೋಳ್ಪಾಡಿ ಅವರದು ದಿಟ್ಟ ಸಾರ್ಥಕ ಯತ್ನ, ಅರ್ಥಗಾರಿಕೆಗೆ ಹೊಸ ಬೆಳಕು.
ಶ್ರೀ ಶಂಭುಹೆಗ್ಡೆ ಅವರ ಅಧ್ಯಕ್ಷ ಭಾಷಣವು, ಸಾಂದರ್ಭಿಕವಾದದ್ದು, ಪೂರ್ವಸಿದ್ಧತೆಯಿಂದ ಬರೆದು ತಂದುದಲ್ಲ. ಹಾಗಾಗಿ ಪ್ರಬಂಧವೊಂದರ ಮಾನ ದಿಂದ ಅದನ್ನು ವಿಶ್ಲೇಷಿಸುವುದು ಉಚಿತವಾಗಲಾರದು. ಅದರ ಕೆಲವು ಮುಖ್ಯಾಂಶ ಗಳನ್ನು ಗಮನಿಸುವುದಷ್ಟೇ ಇಲ್ಲಿ ಪ್ರಕೃತ, ರಂಗದ ಪರಿಕರಗಳು ಮಾಡುವ ಕೆಲಸ ವನ್ನು ಮಾತು ಮಾಡಲಾರದೆಂದು ಹೇಳಿ, ಆಟ - ಕೂಟಗಳ ಅರ್ಥಗಾರಿಕೆ ಬಗೆಗೆ ಮೌಲಿಕ ವ್ಯತ್ಯಾಸವನ್ನು ತೋರಿಸಿಯೇ ಶ್ರೀ ಹೆಗ್ಡೆ ತಮ್ಮ ವಿವೇಚನೆ ಆರಂಭಿಸಿ ದ್ದಾರೆ. ಗೋಷ್ಠಿಯನ್ನು ಸಮಗ್ರವಾಗಿ ಅವಲೋಕಿಸಲು ಯತ್ನಿಸಿದ್ದಾರೆ.
ಅರ್ಥಗಾರಿಕೆಗೆ ಪಾಂಡಿತ್ಯ, ಶಾಸ್ತ್ರಾಜ್ಞಾನಗಳು ಗೊಬ್ಬರವಾಗಿ ಒದಗಬೇಕು, ಅದು ಫಲವಾದಾಗ ಗೊಬ್ಬರ ಕಾಣಿಸಲಾರದು - ಎಂಬ ನಿರೂಪಣೆಯಿಂದ, ಶ್ರೀ ಹೆಗ್ಡೆ ಒಂದು ಒಳ್ಳೆಯ ವಿಮರ್ಶೆಯ ಕಲ್ಪನೆ ಒದಗಿಸಿದ್ದಾರೆ. ಹಿಮ್ಮೇಳ ಮತ್ತು ಅರ್ಥ ಗಳ ಪರಸ್ಪರ ಸಂಬಂಧವನ್ನು ಬಹಳ ಚೆನ್ನಾಗಿ ಪ್ರಸ್ತಾಪಿಸಿದ್ದಾರೆ. ತಮ್ಮ ತಾಳ ಮದ್ದಳೆಗಳಲ್ಲ, ಆಟಗಳಲ್ಲೂ ಹಿಮ್ಮೇಳ ಹೆಚ್ಚು ಸಕ್ರಿಯ, ಸಶಕ್ತವಾಗಬೇಕು, ಯಾಂತ್ರಿಕವಾಗಬಾರದು (ಉ ಕನ್ನಡದ ಹಿಮ್ಮೇಳದ ಸಕ್ರಿಯತೆಗೂ, ಅಲ್ಲಿಯ ರಂಗ ಜೀವಂತಿಗೆಗೂ ಸಂಬಂಧವಿದೆ.) ತಾಳಮದ್ದಳೆಯಲ್ಲಿ ಯುದ್ಧ ಏಳುಬೀಳು ಗಳಿಗೆ ಹಿಮ್ಮೇಳದ ಬಳಕೆ ಪರಿಣಾಮಕ್ಕೆ ತುಂಬ ಸಹಾಯಕ. ಸಮರ್ಥ ಭಾಗವತ ನೊಬ್ಬನಿದ್ದಾಗ ಅರ್ಥಕ್ಕೆ ಎಂತಹ ಸ್ಫೂರ್ತಿ, ಸೊಗಸುಗಳು, ಪದ್ಯಗಳಿಗೆ ಹೊಸ ಅರ್ಥವೂ ಸ್ಪುರಿಸಬಹುದೆಂಬುದು, ಅನುಭವಸಿದ್ದ - ಶ್ರೀ ಮಂಡೆಚ್ಚರು, ಕಡತೋಕ ಮಂಜುನಾಥ, ಬಲಿಪ ಭಾಗವತರಂತಹವರಿದ್ದಾಗ - ತಾಳಮದ್ದಳೆಯ ಅರ್ಥಗಾರಿಕೆ ಆಯಾಮ, ಚೇತನ ಪಡೆಯುತ್ತದೆ.