ವಿಷಯಕ್ಕೆ ಹೋಗು

ಪುಟ:ಜಾಗರ.pdf/೧೩೪

ವಿಕಿಸೋರ್ಸ್ದಿಂದ
ಈ ಪುಟವನ್ನು ಪ್ರಕಟಿಸಲಾಗಿದೆ

ಅರ್ಥಗಾರಿಕೆ - ೨

ಭಾಗವತಿಕೆ, ಚೆಂಡೆಮದ್ದಳೆ ವಾದನ, ವೇಷಭೂಷಣಗಳಿಗೆ ಒಂದು ಪರಂ ಪರೆ ಇರುವ ಹಾಗೆ, ಅರ್ಥ ಹೇಳುವಿಕೆಗೂ ಒಂದು ಪರಂಪರೆ ಇದೆಯಷ್ಟೆ. ಯಕ್ಷ ಗಾನ ಅರ್ಥಗಾರಿಕೆಯ ಭಾಷೆ, ಗತ್ತು, ಪದ್ಯಕ್ಕೆ ಸಂದರ್ಭ ಕೊಡುವ ಎತ್ತುಗಡೆ, ಪ್ರಶೋತ್ತರ ಮುಂತಾದುವಕ್ಕೆ ಕೆಲವು ಪೂರ್ವ ಪದ್ಧತಿಗಳಿವೆ. ಅರ್ಥಗಾರಿಕೆಯಲ್ಲಿ ಹೊಸ ಹೊಸ ಆವಿಷ್ಕಾರಗಳನ್ನು ಮಾಡುವ ಕಲಾವಿದನೂ ಕೂಡ ಇಂತಹ ಕೆಲವು ಸಂಪ್ರದಾಯಗಳನ್ನು ಪಾಲಿಸಲೇಬೇಕು. ಇಲ್ಲವಾದರೆ ಮಾತು ಎಷ್ಟೇ ಸುಂದರ ವಾಗಿ, ವಿಚಾರಪೂರ್ಣವಾಗಿದ್ದರೂ ಅದು ಯಕ್ಷಗಾನದ ಅರ್ಥಗಾರಿಕೆಯಾಗಲಾರದು. ಸಂಪ್ರದಾಯದ ಸೊಗಸನ್ನು ಅಳವಡಿಸದಿರುವ ಅರ್ಥಗಾರಿಕೆಯನ್ನು ಕುರಿತು, “ಮಾತುಗಾರಿಕೆ ಚೆನ್ನಾಗಿದೆ ನಿಜ, ಆದರೆ ಇದು ಯಕ್ಷಗಾನದ ಅರ್ಥಗಾರಿಕೆ ಅಲ್ಲ” ಎಂಬಂತಹ ಅನುಭವಿಗಳ ವಿಮರ್ಶೆ ನಾವು ಕೇಳುತ್ತಿರುತ್ತೇವೆ.
ನೂರಾರು ವರ್ಷಗಳಿಂದ ಬೆಳೆದು ಬಂದಿರುವ ಈ ಕಲೆಯಲ್ಲಿ ಪರಂಪರೆಯ ಪಾತ್ರ ಮಹತ್ವದ್ದು. ಅದು ಅವಶ್ಯವೂ ಹೌದು. ಅದು ಅವಶ್ಯವೂ ಹೌದು. ಆದರೆ ಕೆಲವೊಮ್ಮೆ ಸಂಪ್ರ ದಾಯಗಳ ಹಿಡಿತ ಎಷ್ಟು ಬಲವಾಗುತ್ತದೆಂದರೆ, ಪ್ರತಿಭಾಶಾಲಿಗಳೂ ಕೂಡ ಅದರ ಲ್ಲಿರುವ ಅನೌಚಿತ್ಯವನ್ನು ಗುರುತಿಸದೆ ಹೋಗುತ್ತಾರೆ. ನಾವು ಪರಂಪರೆ (Tradi- tion ) ಯನ್ನು ಪಾಲಿಸಬೇಕು. ಆದರೆ ಕೆಲವೊಂದು ಸಂಪ್ರದಾಯಗಳನ್ನು (Conventions) ಬಿಡಬಾರದೆಂದಿಲ್ಲ. ಔಚಿತ್ಯಪೂರ್ಣವಾದ ಹೊಸ ಸಂಪ್ರದಾಯ ವನ್ನು ಸೃಷ್ಟಿಸಿ ಪರಂಪರೆಯನ್ನು ಶ್ರೀಮಂತಗೊಳಿಸಬೇಕು. ಈ ವಿಚಾರವನ್ನು ದೃಷ್ಟಿ ಪಥದಲ್ಲಿರಿಸಿ, ಅರ್ಥಗಾರಿಕೆಯ ಮೂರು ಸಂದರ್ಭಗಳನ್ನು ಇಲ್ಲಿ ಪರಿಶೀಲಿಸಿ ದೇನೆ. ಸಂಪ್ರದಾಯದಂತೆ ಆಟ ಕೂಟಗಳಲ್ಲಿ ಆರ್ಥಹೇಳುವ ಕ್ರಮವು ಮರು ವಿಚಾರಕ್ಕೂ ಒಳಗಾಗಬೇಕೆಂದು ನನ್ನೆಣಿಕೆ.
ಪಂಚವಟಿ ವಾಲಿವಧೆ ಪ್ರಸಂಗದ ಒಂದು ಸಂದರ್ಭವನ್ನು ನೋಡೋಣ. ರಾಮ - ಸುಗ್ರೀವರ ಭೇಟಿ ನಡೆದು, ಸುಗ್ರೀವನು ತನ್ನ ಕಷ್ಟಗಳನ್ನು ರಾಮನಲ್ಲಿ