ವಿಷಯಕ್ಕೆ ಹೋಗು

ಪುಟ:ಜಾಗರ.pdf/೧೩೮

ವಿಕಿಸೋರ್ಸ್ದಿಂದ
ಈ ಪುಟವನ್ನು ಪ್ರಕಟಿಸಲಾಗಿದೆ

೧೩೦ | ಜಾಗರ
ಕೃಷ್ಣನು ಸಾರಥಿಯಾಗಿರುತ್ತ ಈ ಸರ್ಪಾಸ್ತ್ರ ಫಲಕಾರಿಯಾಗಲಾರದು ಎಂಬುದು ಇನ್ನೊಂದು . ಈ ಪ್ರತಿಪಾದನೆಯ ಎರಡು ಅಂಶಗಳು ಒಂದಕ್ಕೊಂದು ವಿರುದ್ಧ ವಾಗಿವೆ. ಕರ್ಣನ ಗುರಿ ತಪ್ಪಬಹುದಾದ ಕಾರಣ ಅಸ್ತ್ರದ ನೆಲೆಯನ್ನು ತಿಳಿಯದೆ ಹೂಡಿದುದೆ? ಅಥವಾ ಕೃಷ್ಣನ ಸಾರಥ್ಯವೆ?
ಒಂದು ಕಾರ್ಯಕ್ಕೆ ಎರಡು ಕಾರಣಗಳಿರಬಾರದೆಂದಿಲ್ಲ. ಆದರೆ ಅವು ಪೂರ ಕವಾಗಿ ಇರಬೇಕು. ಸರ್ಪಾಸ್ತ್ರ ವಿಫಲವಾಗಲು ಕರ್ಣನ ಪ್ರಯೋಗ ದೋಷವು ಕಾರ ಣವಾದರೆ, ಕೃಷ್ಣನ ಸಾರಥ್ಯದ ಜಾಣ್ಮೆಗೆ ಅಲ್ಲಿ ಕೆಲಸವಿಲ್ಲ. ಅದು ತಾನಾಗಿಯೇ, ಅಂದರೆ ಕರ್ಣನ ಅಚಾತುರ್ಯದಿಂದಲೇ ತಪ್ಪಿ ಹೋಗಬೇಕು. ಅಲ್ಲ, ಕೃಷ್ಣನ ಸಾರಥ್ಯದ ಚಮತ್ಕೃತಿಯ ದೆಸೆಯಿಂದ ಗುರಿ ತಪ್ಪುವಂತಾಗುವುದಾದರೆ ಅಸ್ತ್ರದ ನೆಲೆಯನು ತಿಳಿಯದೆ ಹೂಡಿದೆ' ಎಂಬುದು ಅನಾವಶ್ಯಕವಾದ ಸಂಗತಿ.
ಮುಂದಿನ ಘಟನೆಯನ್ನು ನೋಡಿದರೆ, ಕೃಷ್ಣನು ರಥವನ್ನು ತಗ್ಗಿಸಲಾಗಿ, ಸರ್ಪಾಸ್ತ್ರವು ಅರ್ಜುನನ ಕೊರಳಿಗೆ ಬದಲಾಗಿ, ಕಿರೀಟಕ್ಕೆ ತಾಗಿತೆಂದು ಪ್ರಸಂಗ ಹೇಳುತ್ತದೆ. ಇದರಿಂದ ಊಹಿಸಬಹುದಾದ ವಿಚಾರವೆಂದರೆ ಶಲ್ಯನು ಓರ್ವ ನಿಷ್ಣಾತ ಸಾರಥಿಯಾಗಿ, ಮುಂದೆ ಕೃಷ್ಣನು ಹೂಡಬಹುದಾದ ಉಪಾಯವನ್ನು ಊಹಿಸಿ, ಅಸ್ತ್ರವನ್ನು ಅರ್ಜುನನ ಕೊರಳಿಗೆ ಗುರಿ ಹಿಡಿಯುವಂತೆ ಸೂಚಿಸಿದ್ದಾನೆ.
ಅರ್ಥಗಾರಿಕೆಯ ಸ೦ಪ್ರದಾಯದ೦ತೆ, ಇಲ್ಲಿ ಎರಡು ವಿಧಾನಗಳಿವೆ. ಒಂದು : ಸರ್ಪಾಸ್ತ್ರಕ್ಕೆ ವೇಗವಾಗಿ ಚಲಿಸುವ ಸ್ವಭಾವವುಂಟು, ಅದರ ನೆಲೆ ಯನ್ನು ತಿಳಿದು ಹೂಡಬೇಕು, ಆದುದರಿಂದ ಗುರಿಯನ್ನು ತಗ್ಗಿಸಬೇಕು ಎಂದು ಹೇಳುವ ಕ್ರಮ. ಇಲ್ಲಿ ಕೃಷ್ಣನ ಸಾರಥ್ಯದ ಚಮತ್ಕಾರವೆಂಬುದು, ಕರ್ಣನ ಪ್ರಯೋಗ ದೋಷಕ್ಕೆ ಪೂರಕ ಮಾತ್ರ.
"...ನಳಿನಾಕ್ಷನಾತನ ರಥದೊಳಗಿರೆ ನಿನ್ನ ಗೆಲುವರೆ ಬಿಡುವನೈ” - ಎಂಬ ಅಂಶಕ್ಕೆ ಪ್ರಾಧಾನ್ಯ ನೀಡುವ ಅರ್ಥಧಾರಿ, ಸಾರಥ್ಯದ ನೈಪುಣ್ಯದಿಂದ ಕೃಷ್ಣನು ರಥವನ್ನು ತಗ್ಗಿಸಲು ಸಾಧ್ಯವಿದೆಯೆಂದೂ ಆದುದರಿ೦ದ ಗುರಿಯನ್ನು ತಗ್ಗಿಸ ಬೇಕೆಂದೂ ಸೂಚಿಸುತ್ತಾನೆ. ಇಲ್ಲಿ ಕರ್ಣನು ಬಾಣವನ್ನು ಹೂಡುವಾಗ “ನೆಲೆಯರಿಯದೆ ಹೂಡಿದ ನೆಂಬ ಮೊದಲ ಅಂಶಕ್ಕೆ ಗೌಣಸ್ಥಾನವಿದೆ. ಪ್ರಸಂಗದ ಘಟನೆಗಳಿಗೆ ಇದು ಅನುಗುಣವಾಗಿದೆ. ಕೃಷ್ಣನು ರಥವನ್ನು ತಗ್ಗಿಸಬಹುದೆಂಬ ಸೂಚನೆ ಶಲ್ಯನ ಪದ್ಯಗಳಲ್ಲಿ ನೇರವಾಗಿ ಇಲ್ಲ. ನೇರವಾಗಿ ಇರುವ ಮಾತು “ಅಸ್ತ್ರದ ನೆಲೆಯರಿಯದೆ ಹೂಡಿದೆ' ಎಂಬುದೇ.
ಪ್ರಸಂಗಕ್ಕೆ ಆಕರವಾಗಿರುವ ಕುಮಾರವ್ಯಾಸ ಭಾರತದಲ್ಲಾಗಲಿ, ವ್ಯಾಸ ಭಾರತದಲ್ಲಾಗಲಿ ಸರ್ಪಾಸ್ತ್ರ ಪ್ರಕರಣದಲ್ಲಿ ಶಲ್ಯನು ಕೊಡುವ ಸೂಚನೆಯಲ್ಲಿ ಕೃಷ್ಣನ