ವಿಷಯಕ್ಕೆ ಹೋಗು

ಪುಟ:ಜಾಗರ.pdf/೧೫೩

ವಿಕಿಸೋರ್ಸ್ದಿಂದ
ಈ ಪುಟವನ್ನು ಪ್ರಕಟಿಸಲಾಗಿದೆ
ಹಾಸ್ಯ ಮತ್ತು ಔಚಿತ್ಯ

ದ್ದಾರೆಯೆ? ನಮ್ಮ ರಂಗಸ್ಥಳಗಳಲ್ಲಿ ಹಾಸ್ಯದ ಹೆಸರಲ್ಲಿ ಬರುವ ಅಭಿನಯ, ಹಾಗೂ ಮಾತುಗಳು ಅನೌಚಿತ್ಯ ಮತ್ತು ಅಸಭ್ಯತೆಗಳ ಧಾರಾಳ ಮಿಶ್ರಣಗಳಾಗಿರುವುದೇ ಹೆಚ್ಚು.
ಹಾಸ್ಯಪಾತ್ರಗಳು ಅಥವಾ ಹಾಸ್ಯ ಗಾರರ ಪಾತ್ರಗಳ ( ಹಾಗನ್ನುವುದೇ ಸೂಕ್ತ) ವೇಷಭೂಷಣಗಳ ಗೊಂದಲವಂತೂ ವಿಪರೀತ. ಯಾವುದೋ ಬಣ್ಣದ ಚಡ್ಡಿ, ಪಾಯಜಾಮಾ, ಪ್ಯಾಂಟು, ಹ್ಯಾಟು, ಅಂಗಿ, ಟೊಪ್ಪಿಗಳು, ಎಲ್ಲವೂ ಹಾಸ್ಯ ಗಾರರ ಮೂಲಕ ರಂಗವನ್ನು ಪವಿತ್ರಗೊಳಿಸಿ, ತಾವೂ ಪಾವನವಾಗಿವೆ.
ಸ್ವರ್ಗಲೋಕದ ಬಾಗಿಲಭಟನು ಸರ್ಕಸ್ ಬಪೂನನ ಟೊಪ್ಪಿ, ಚಲ್ಲಣ ತೊಡುತ್ತಾನೆ. ರಾಜನ ಆಪ್ತನೋ, ಕಿರಾತರ ಪೈಕಿಯ ವಿದೂಷಕನೋ ಇಸ್ಪೀಟ್ ಜೋಕರನ ಡೊಂಬರಾಟದ ವೇಷಗಳನ್ನೂ ತೊಟ್ಟು ರಂಗಕ್ಕೆ ಬರುತ್ತಾರೆ. ಕೃಷ್ಣನ ಜೊತೆಗೆ ಬರುವ ವಿಜಯನ ವೇಷವಂತೂ ಭಯಂಕರ. ಹರಕು ಕೋಟು, ಮೋಟು ಜಡೆ, ಬಾಯಲ್ಲಿ ಚಕ್ಕುಲಿ, ಕೈಯಲ್ಲಿ ಕೋಲು - ಇವು ಹಾಸ್ಯ ವಲ್ಲ, ಹೇಸಿಗೆ.
ವಿಜಯ ಮತ್ತು ಮಕರಂದರೆಂಬ ಕೃಷ್ಣನ ಗೆಳೆಯರು ವಿನೋದಪ್ರಿಯ ರೇನೋ ಹೌದು. ಇರಲಿ. ಅವರು ಕೃಷ್ಣನಂತಹ ವಿದ್ವಾಂಸರೋ', ಶ್ರೀಮಂತರೋ ಅಲ್ಲವೆಂದು ಒಪ್ಪಿಕೊಳ್ಳೋಣ. ಆದರೆ ಕೃಷ್ಣನ ಜೊತೆಗೆ ಬರುವ ವೇಷಗಳು ಅವನ ಮಿತ್ರರಂತೆ ಕಾಣಿಸಬೇಡವೆ? ಅವರ ವೇಷಕ್ಕೂ ರಂಗದ ಸಭ್ಯತೆ ಇರಬೇಡವೆ? ಅವರು ರಂಗದಲ್ಲಿ ಹುಚ್ಚರಂತೆ ಕಾಣಿಸಬೇಕೆ? ಯಕ್ಷಗಾನ ರಂಗಕ್ಕೆ ಬರುವ ವೇಷ ಕುಣಿತಕ್ಕೂ ಅನುಕೂಲ ಹಾಗೂ ಪೋಷಕವಾಗಿರಬೇಡವೆ?
ನಮ್ಮಲ್ಲಿ ಹಾಸ್ಯ ಗಾರರು ಬಳಸುವ ಕೆಲವು ವೇಷಭೂಷಣಗಳು ಕಥೆಯ ಸ್ವರೂಪಕ್ಕೆ ತಕ್ಕವಾಗಿಲ್ಲ. ಕಥೆಯ ಇತರ ಪಾತ್ರಗಳೊ೦ದಿಗೆ ಅವು ಮೇಳವಿಸಿ ಕಾಣುವುದಿಲ್ಲ.
ಯಕ್ಷಗಾನದಲ್ಲಿ ಹಾಸ್ಯವೂ ಪಾತ್ರವಾಗಿ ಬರುತ್ತದೆ. ಸರ್ಕಸ್ಸಿನ ಬಫೂನು ಪಾತ್ರದಲ್ಲಿ, ಅವನು ಏನು ಮಾಡಿದರೂ ಸರಿ. ಆದರೆ ಇಲ್ಲಿ ಹಾಗಲ್ಲ.
ಇವೆಲ್ಲದರ ಅರ್ಥ, ನಾನು ನಮ್ಮ ಸಮರ್ಥ ಹಾಸ್ಯಗಾರರನ್ನು ಮರೆತಿ ದೇನೆ ಎಂದಲ್ಲ. ವಿಟ್ಲ ಗೋಪಾಲಕೃಷ್ಣ ಜೋಶಿ. ಮಿಜಾರು ಅಣ್ಣಪ್ಪ, ಕುಂಜಾಲು ರಾಮಕೃಷ್ಣ, ಬಾಳಪ್ಪ ಶೆಟ್ಟಿ ಮುಂತಾದ ಅತ್ಯಂತ ಪ್ರತಿಭಾನ್ವಿತ ಹಾಸ್ಯ ನಟರು