ವಿಷಯಕ್ಕೆ ಹೋಗು

ಪುಟ:ಜಾಗರ.pdf/೧೭

ವಿಕಿಸೋರ್ಸ್ದಿಂದ
ಈ ಪುಟವನ್ನು ಪ್ರಕಟಿಸಲಾಗಿದೆ
ಸಂಪ್ರದಾಯ ಮತ್ತು ಸುಧಾರಣೆ

ಪ್ರಕಾರ. ಇಲ್ಲಿ ವಾಸ್ತವ ದೃಷ್ಟಿಯಿಂದ ಮಾತಾಡುವುದು ಕಲ್ಪನಾ ದಾರಿದ್ರ್ಯದ ಸಂಕೇತ. ಅವಾಸ್ತವ, ಅತಿ ಭಾವ, ಕಾಲ್ಪನಿಕತೆಗಳೇ ಈ ಪದ್ಧತಿಯ ಮುಖ್ಯ ಲಕ್ಷಣಗಳು. ಹಾಗಾಗಿ ರಾಮಲಕ್ಷ್ಮಣರಿಗೆ ವನವಾಸದಲ್ಲಿ ಕಿರೀಟವೇಕೆ? ಎಂಬ ಪ್ರಶ್ನೆ ಅಸಂಬದ್ಧ, ಹಾಗಾದರೆ, ಶ್ರೀರಾಮನ ಒಟ್ಟಿಗೆ ಭಾಗವತ, ಚೆಂಡೆ, ಮದ್ದಲೆಗಳು ಇದ್ದವೆ? ಎಂದೂ ಕೇಳಬೇಕಾದೀತು. ಇದೊಂದು ಸ್ವತಂತ್ರ ರಂಗಭೂಮಿ. ಇಲ್ಲಿನ ರಾಮ, ಹನುಮಂತ, ರಾವಣರು ಇಲ್ಲಿನದೇ ವಿಶಿಷ್ಟ ನೃತ್ಯ ಪ್ರಭಾವ'ವಾದ ಸೃಷ್ಟಿ ಗಳು. ಈ ಮೂಲಭೂತ ಪ್ರಜ್ಞೆ ಯಕ್ಷಗಾನದ ಸುಧಾರಕನಿಗಿರಬೇಕು.

ಈ ಪ್ರಜ್ಞೆಯಿಂದ ಮಾಡಿದ ಸುಧಾರಣೆ ಯಕ್ಷಗಾನದಲ್ಲಿ ಆಗಲಿ. ಯಕ್ಷಗಾನಕ್ಕೆ ಸೂಕ್ತವಾದ ನಿರ್ದೆಶನ ವ್ಯವಸ್ಥೆ, ರಂಗಲೇಖನ, ವಿಚಾರ ವಿನಿಮಯ ಬೆಳೆದು ಬರಬೇಕು. ಸ್ವಚ್ಛ ದೃಷ್ಟಿಯ ವಿಮರ್ಶೆ ಬೆಳೆಯಬೇಕು. ವಿಮರ್ಶೆಯ ಅಭಾವ ನಮ್ಮ ರಂಗಭೂಮಿಯ ಹಲವು ದೋಷಗಳಿಗೆ ಕಾರಣ.

'ತಾಯಿನುಡಿ' ಮುಂಬಯಿ ಆಗೋಸ್ತು 1978