ವಿಷಯಕ್ಕೆ ಹೋಗು

ಪುಟ:ಜಾಗರ.pdf/೩೯

ವಿಕಿಸೋರ್ಸ್ದಿಂದ
ಈ ಪುಟವನ್ನು ಪ್ರಕಟಿಸಲಾಗಿದೆ
ಯಕ್ಷಗಾನ ಮೇಳಗಳು / ೩೧


6. ಕಥಕ್ಕಳಿಯ ರಾಮಾಯಣದ ಪದ್ಯಗಳಿಗೂ, ಯಕ್ಷಗಾನ ರಾಮಾಯಣ ಪ್ರಸಂಗಗಳಿಗೂ ಇರುವ ಸ್ಪಷ್ಟ ಸಾಮ್ಯ.
ರಾಮಾಯಣ ಪ್ರಸಂಗಗಳ ಕರ್ತೃ ಪಾರ್ತಿ ಸುಬ್ಬನೆನ್ನುವವರು ಅವನ ಕಾಲ 1750 - 1850 ಎಂದು ಅಭಿಪ್ರಾಯಪಡುತ್ತಿರುವಾಗ, ಡಾ ಕಾರಂತರು ಪಾರ್ತಿ ಸುಬ್ಬನ ಕರ್ತೃತ್ವವನ್ನು ಪ್ರಶ್ನಿಸುವ ಇತರ ಅನೇಕ ಪುರಾವೆಗಳನ್ನು ಮಂಡಿಸಿದರು.
ಆದರೆ ಇದೀಗ ಶ್ರೀ ಕುಕ್ಕಿಲ ಕೃಷ್ಣ ಭಟ್ಟರು ಹೊಸ ವಾದವೊಂದನ್ನು ಮಂಡಿಸಿರುವುದರಿಂದ, ಈ ಸಮಸ್ಯೆಯ ಸಂಶೋಧನೆಗೆ ಪುನಃ ಜೀವ ಬಂದಂತಾಗಿದೆ, ಭಾಗವತನಾಗಿದ್ದು, ರಾಮಾಯಣ ಪ್ರಸಂಗಗಳ ಕರ್ತತ್ವದ ವಾದದಲ್ಲಿ ಕೇಂದ್ರ ಬಿಂದು ವಾಗಿದ್ದ 18, 19ನೇ ಶತಮಾನಗಳಲ್ಲಿ ಬದುಕಿದ್ದ ಪಾರ್ತಿಸುಬ್ಬ ಈ ಪ್ರಸಂಗಗಳ ಕರ್ತೃ ಅಲ್ಲವೆಂದು ಶ್ರೀ ಕುಕ್ಕಿಲರು ಹೇಳುತ್ತಾರೆ. ಅವನಿಗಿಂತ ಶತಮಾನಗಳಷ್ಟು ಹಿಂದೆ ಜನಿಸಿದ್ದ ಪಾರ್ತಿ ಸುಬ್ಬ ಪ್ರಸಂಗಗಳ ಕರ್ತೃ ಅನ್ನುತ್ತಾರೆ ಅವರು.
ಕೇರಳದ ಕಥಕ್ಕಳಿ ರಾಮಾಯಣದ ಕರ್ತೃವೆನ್ನಲಾದ ಕೊಟ್ಟಾರಕರ ಮಹಾರಾಜನ ಕಾಲ ಇಲ್ಲಿ ಮಹತ್ವದ್ದು. ಅವನ ಪದ್ಯಗಳೂ ನಮ್ಮ ಪ್ರಸಂಗಗಳ ಅನೇಕ ಪದ್ಯಗಳೂ ಒಂದು ಇನ್ನೊಂದರ ಅನುವಾದ ಎಂಬುದು ಸ್ಪಷ್ಟವಾಗುತ್ತದೆ.
ಕೊಟ್ಟಾರಕರ ರಾಜನ ಕಾಲ ಸುಮಾರು 17ನೆಯ ಶತಮಾನದ ಮಧ್ಯ ಭಾಗ ಎಂಬುದಾಗಿ ತಿಳಿದಿತ್ತು. ಆದರೆ ಈಗ 'ಹಳೆ' ಪಾರ್ತಿಸುಬ್ಬ ಹಾಗೂ ಕೊಟ್ಟಾರಕರ ರಾಜ - ಇಬ್ಬರ ಕಾಲವನ್ನೂ ಹಿಂದೆ ಒಯ್ದಿರುವ ಶ್ರೀ ಕುಕ್ಕಿಲರ ವಾದ ಮೇಳಗಳ ಇತಿಹಾಸಕ್ಕೆ ಮಹತ್ವದ್ದು. ಏಕೆಂದರೆ ಯಕ್ಷಗಾನದ ಎಲ್ಲ ತಿಟ್ಟು ಗಳಲ್ಲಿ ಬಹುಕಾಲದಿಂದ ರಾಮಾಯಣದ ಎಂಟು ಪ್ರಸಂಗಗಳು ಸಾರ್ವತ್ರಿಕ ಬಳಕೆ ಯಲ್ಲಿ ಇವೆ.
(ಪಾರ್ತಿ ಸುಬ್ಬನ ಯಕ್ಷಗಾನಗಳು: ಕುಕ್ಕಿಲ ಕೃಷ್ಣ ಭಟ್ ಮೈಸೂರು ವಿ ವಿ)
7. ಕ್ರಿ.ಶ. 1564ರ ವಿರಾಟ ಪರ್ವ ಪ್ರಸಂಗ - ಕರ್ತೃ ವಿಷ್ಣು
(ಇದು ಡಾ| ಕಾರಂತರ ಕಾಲ ನಿರ್ಣಯ)
ಸಂಗೀತಾಚಾರ್ಯ ಶಾರ್ಙ್ಗದೇವನ ಕಾಲ ಕ್ರಿ.ಶ. 13ನೇ ಶತಮಾನ ಅಂದರೆ 13ನೇ ಶತಮಾನದಲ್ಲೇ ಸಂಗೀತ ಪದ್ಧತಿಯಾಗಿಯಾದರೂ ಯಕ್ಷಗಾನವಿತ್ತು ಎಂಬುದು ಖಚಿತ. ಕ್ರಿ.ಶ. 15ನೇ ಶತಮಾನದ ಕಾಲಕ್ಕೆ ಯಕ್ಷಗಾನ ನಾಟಕ ಪ್ರಕಾರ ವಾಗಿ ಬಳಕೆಯಲ್ಲಿತ್ತೆಂದು ಊಹಿಸಬಹುದು. ಶ್ರೀ ಕುಕ್ಕಿಲರ ಹೊಸವಾದವೂ ಇದನ್ನೇ ಸಮರ್ಥಿಸುತ್ತದೆ. ಕುರುಗೋಡು ಶಾಸನವನ್ನು ಮೇಳದ ಅಸ್ತಿತ್ವಕ್ಕೆ