ವಿಷಯಕ್ಕೆ ಹೋಗು

ಪುಟ:ಜಾಗರ.pdf/೫೫

ವಿಕಿಸೋರ್ಸ್ದಿಂದ
ಈ ಪುಟವನ್ನು ಪ್ರಕಟಿಸಲಾಗಿದೆ
ಯಕ್ಷಗಾನ ಮೇಳಗಳು

ದೇಶ, ಸುದರ್ಶನೋಪಾಖ್ಯಾನ, ಮಹಾರಥಿ ಕರ್ಣ, ಭೀಷ್ಮ, ಗುರುದಕ್ಷಿಣೆ, ರಾಮ ಲೀಲೆ ಇತ್ಯಾದಿ-ಇವು ಪೌರಾಣಿಕ ಪ್ರಸಂಗಗಳ ಹೊಸ ಸಂಯೋಜನೆಗಳು. ಇವು ಸ್ವಾಗತಾರ್ಹ ಯತ್ನಗಳು.
ಹಳೆಯ ಪ್ರಸಂಗ ಗಳು, ಹೊಸ ಹೆಸರು ಹೊತ್ತು ಬಂದುದೂ ಇದೆ. ಉದಾ:- ಸತ್ವ ಪರೀಕ್ಷೆ (ಕೃಷ್ಣಾರ್ಜುನ) ಕನ್ಯಾಪಹರಣ (ಸುಭದ್ರಾರ್ಜುನ ಗಂಧರ್ವಕನ್ಯ (ವಿದ್ಯುನ್ಮತಿ ಕಲ್ಯಾಣ) ಇತ್ಯಾದಿ. ಇದು ಆಕರ್ಷಣೆಗಾಗಿ ಮಾಡಿದ ಬದಲಾವಣೆಗಳು.ಇದು ವ್ಯಾವಹಾರಿಕ ಅವಶ್ಯಕತೆ. ಅದರಿಂದ ಕಲೆಗೆ ಯಾವ ಹೊಸ ಬಾಧಕವೂ ಇಲ್ಲ,

17 ಹೊಸ ಪ್ರಸಂಗಗಳ ಬಳಕೆಯಲ್ಲಿ ಒಂದು ಗಮನಾರ್ಹ ಅಂಶ ಅಂದರೆ, ಬಡಗುತಿಟ್ಟಿನ ಮೇಳಗಳು ಹೊಸ ಪ್ರಸಂಗಗಳ ಸಂಯೋಜನೆಯಲ್ಲಿ ಹೆಚ್ಚು ಜಾಣತನ ತೋರಿಸಿವೆ. ಹೊಸ ಪ್ರಸಂಗಗಳನ್ನು ಯಕ್ಷಗಾನದ ಸ್ವಭಾವಕ್ಕೆ ಬಾಧಕವಾಗದಂತೆ ರಂಗಕ್ಕೆ ತಂದಿವೆ. ಆದರೆ ದುರದೃಷ್ಟವಶಾತ್ ತೆಂಕುತಿಟ್ಟಿನ ಹೊಸ ಪ್ರ೦ಸಗಗಳ ಪ್ರಯೋಗದಲ್ಲಿ ಇಂತಹ ಎಚ್ಚರ ತೋರಿಸಿಲ್ಲ. ಈಗಂತೂ ಹಳಸಿದ ಕಂಪೆನಿ ನಾಟಕಗಳೂ ನಮ್ಮಲ್ಲಿ ನೂತನ ಪ್ರಯೋಗ' ಗಳಾಗಿ ಮಾರಾಟಕ್ಕೆ ಬಂದಿವೆ.

18 ಇಡಗುಂಜಿ ಮೇಳದವರ ಹೊಸ ಮಾದರಿಯ ರಂಗಸ್ಥಳ ರಂಗ ಕ್ರಿಯೆಯನ್ನು ಸ್ಪಷ್ಟಗೊಳಿಸುತ್ತದೆ. ನಟನ ಹೆಜ್ಜೆ ಚೆನ್ನಾಗಿ ಕಾಣಿಸುತ್ತದೆ. ಅವರ ಗುಂಡು ತೆರೆ ಒಳ್ಳೆಯ ಕಲ್ಪನೆ ಹೊಂದಿದೆ. ಈ ಯತ್ನ ಅನುಕರಣೀಯ. ಯಕ್ಷಗಾನ ಸಂಪ್ರ ದಾಯವನ್ನು ಉಳಿಸಿ, ಪ್ರಯೋಗಶೀಲತೆಯನ್ನು ಅಳವಡಿಸಿ. ಒಳ್ಳೆಯ ಮಟ್ಟವನ್ನು ಕಾದುಕೊಂಡ ಕೀರ್ತಿ ಇಡಗುಂಜಿ ಮೇಳದ್ದು. ಸಂಚಾಲಕ ಶಂಭುಹೆಗಡೆ - ಇದು ಯಕ್ಷಗಾನ ಸಂಪ್ರದಾಯದ ಒಂದು ದೊಡ್ಡ ಆಶಾಸ್ಥಾನ.

19 ಯಕ್ಷಗಾನ ಕಲಾವಿದರ ಆರ್ಥಿಕ ಸ್ಥಿತಿ, ಈಚೆಗಿನ ವರ್ಷಗಳಲ್ಲಿ ತುಂಬ ಸುಧಾರಿಸಿದೆ. ಸಂಪಾದನೆ, ಸೌಲಭ್ಯ ಗಳು ಸಿಕ್ಕಿವೆ. (ಧರ್ಮಸ್ಥಳ ಮೇಳ ಕಲಾವಿದರಿಗೆ ಇನ್ಸೂರೆನ್ಸ್ ಸೌಲಭ್ಯ, ನಿವೃತ್ತಿ ವೇತನಗಳನ್ನೂ ನೀಡಿದೆ.)

20 ಯಕ್ಷಗಾನದ ಮಾತುಗಾರಿಕೆ ತುಂಬ ಸುಧಾರಿಸಿದೆ. ಕನ್ನಡಿಗರು ಹೆಮ್ಮೆ ಪಡಬಹುದಾದ ಸಾಹಿತ್ಯಗುಣ, ನಾಟಕೀಯತೆ - ಯಕ್ಷಗಾನದ ಮಾತುಗಾರರಲ್ಲಿದೆ. ಹಳೆ ಪದ್ಧತಿಯ ಅಸಂಬದ್ಧ ನೀರಸ ಮಾತುಗಾರಿಕೆ, ರಂಗದಲ್ಲಿದ್ದ ಅನೇಕ ಅಸಂಬದ್ಧತೆಗಳು ಮಾಯವಾಗಿವೆ. ಕೆಲವು ಅಂಶಗಳಲ್ಲಿ ಯಕ್ಷಗಾನದ ಹಾಸ್ಯವೂ ಸುಧಾರಿಸಿದೆ.