ವಿಷಯಕ್ಕೆ ಹೋಗು

ಪುಟ:ಜಾಗರ.pdf/೫೬

ವಿಕಿಸೋರ್ಸ್ದಿಂದ
ಈ ಪುಟವನ್ನು ಪ್ರಕಟಿಸಲಾಗಿದೆ

೪೮ / ಜಾಗರ

ಆರ್ಥಿಕ ವ್ಯವಹಾರ - ವ್ಯವಸ್ಥಾಪಕತ್ವ


ಒಂದು ವ್ಯವಸ್ಥಿತ ಮೇಳದ ಭಂಡವಾಳ ಈಗ ಸುಮಾರು ಒಂದು ಒಂದೂವರೆ ಲಕ್ಷ. ಇಷ್ಟೊಂದು ಹಣವನ್ನು ತೊಡಗಿಸಿದರೂ ಈ ಉದ್ಯಮಕ್ಕೆ ಯಾವ ಭದ್ರತೆಯೂ ಇಲ್ಲ. ಟೆಂಟು ಹಾಕಿ ಜನಕ್ಕಾಗಿ ಕಾಯಬೇಕು.

ದಿನಕ್ಕೊಂದು ಸ್ಥಳಕ್ಕೆ ಹೋಗುವ ಧಾವಂತದ ಉದ್ಯಮ ಇದು. ಟೆಂಟು ವಿದ್ಯುತ್ ಯಂತ್ರಗಳ ವ್ಯವಸ್ಥೆ, ಸಾಗಾಟ, ಜವಾಬ್ದಾರಿಯ ಕೆಲಸ.

ಹಲವು ಪ್ರವೃತ್ತಿಯ ಕಲಾವಿದರು, ಅವರೂ ಅಷ್ಟು ಶಿಕ್ಷಿತರೆನ್ನುವಂತಿಲ್ಲ. ಕಲಾವಿದರಲ್ಲಿ ಬರುವ ಒಳ ಜಗಳಗಳಿಗೆ ಲೆಕ್ಕವಿಲ್ಲ. ಅಲ್ಲಲ್ಲಿ ಕೆಲವು ಬಾರಿ ಸ್ಥಳೀಯ ರಾಜಕೀಯಗಳೂ ಇರುತ್ತವೆ. ಇತರ ಮೇಳಗಳ ಸ್ಪರ್ಧೆಯನ್ನು ಎದುರಿಸಬೇಕು. ಕೆಲವು ಕಡೆ ಲೈಸೆನ್ಸ್ ಬಗ್ಗೆ ಜಟಿಲವಾದ ನಿಯಮಗಳಿವೆ. ' ಈ ಎಲ್ಲಾ ಸಮಸ್ಯೆಗಳ ನ್ನೆದುರಿಸಿ ಮೇಳದ ಮಾಲಕತ್ವವನ್ನು ನಿಭಾಯಿಸುವುದು ಸುಲಭದ ಕೆಲಸ ಅಲ್ಲ. ಕಲಾವಿದನೇ ವ್ಯವಸ್ಥಾಪಕನಾದರಂತೂ ಇನ್ನೂ ಕಷ್ಟ. ತನ್ನ ಕಲಾವ್ಯವಸಾಯವನ್ನು, ವ್ಯವಸ್ಥಾಪಕತ್ವವನ್ನೂ ತೂಗಿಸಿಕೊಂಡು ಹೋಗುವುದು, ನಿಜಕ್ಕೂ ಒಂದು ಸಾಧನೆ.

ಕಲಾವಿದರ, ಸಾರ್ವಜನಿಕರ ಸಹಕಾರ ದೊರೆತರೆ ಮಾತ್ರ ಮೇಳದ ಯಜಮಾನನ ಕೆಲಸ ಹಗುರವಾಗುತ್ತದೆ. ಮೇಳಗಳ ಸಂಘಟನೆಯಲ್ಲಿ ಆಡಳಿತದಲ್ಲಿ ಹಲವು ಸಮರ್ಥರು ಈ ಕ್ಷೇತ್ರದಲ್ಲಿದ್ದಾರೆ.

ಮೇಳಗಳ ಸಂಘಟನೆ, ವ್ಯವಸ್ಥೆಗಳಲ್ಲಿ ಮಾಲಕರಿಗೆ ತುಂಬ ಸಹಕಾರ ನೀಡಿದ ಇಬ್ಬರನ್ನು ಇಲ್ಲಿ ಉಲ್ಲೇಖಿಸಬೇಕು. ಅವರು ದಿ। ಬಲಿಪ ನಾರಾಯಣ ಭಾಗವತರು ಮತ್ತು ಅಗರಿ ಶ್ರೀನಿವಾಸ ಭಾಗವತರು. ತೆಂಕುತಿಟ್ಟಿನ ಮೇಳಗಳ ಇತಿಹಾಸದಲ್ಲಿ ಇವರಿಬ್ಬರು ವ್ಯಕ್ತಿಗಳಲ್ಲ ಶಕ್ತಿಗಳು.

ಎಲ್ಲ ಮೇಳಗಳೂ ಸೇರಿದಂತೆ ಕಲಾವಿದರು, ಆಡಳಿತದವರು, ಇತರ ನೌಕರರು ಸೇರಿ ಸುಮಾರು 500-600 ಮಂದಿ ಇದ್ದಾರೆ. ಇವರಲ್ಲಿ ನೌಕರರ ಸಂಬಳ ದಿನಗೂಲಿ ಪದ್ಧತಿಯದು. ಉಳಿದವರಿಗೆಲ್ಲ ಇಡೀ ತಿರುಗಾಟದ ಸೀಸನ್ನಿಗೆ ಕಂಟ್ರಾಕ್ಟ್ ಪದ್ಧತಿಯ ಸಂಬಳ,

ಹೆಚ್ಚಿನ ಕಲಾವಿದರು. ತಿರುಗಾಟದ ಆರಂಭದಲ್ಲೇ ಮುಂಗಡ ಹಣ ಪಡೆದಿರುತ್ತಾರೆ. ಸಾಮಾನ್ಯವಾಗಿ ಮೂರು ದಿನಕ್ಕೊಮ್ಮೆ ಕಲಾವಿದರಿಗೆ ಸಂಬಳದ