ವಿಷಯಕ್ಕೆ ಹೋಗು

ಪುಟ:ಜಾಗರ.pdf/೭೦

ವಿಕಿಸೋರ್ಸ್ದಿಂದ
ಈ ಪುಟವನ್ನು ಪ್ರಕಟಿಸಲಾಗಿದೆ

೨ | ಜಾಗರ
ಕಾವ್ಯ ನಾಟಕಗಳಿಗೆ ಸರಿದೊರೆಯಾಗಿದೆ.ಆದರೆ ಪ್ರಸಂಗಕರ್ತನಾಗಲಿ, ಅರ್ಥ ಗಾರನಾಗಲಿ 'ಸಾಹಿತಿ” ಎಂಬ ಗಣನೆಗೆ ಪಾತ್ರನಾಗಿಲ್ಲ. ಯಕ್ಷಗಾನವು ಒಟ್ಟು ಶಿಷ್ಟ ಅದು ಬೆಳೆದು ಸಾಹಿತ್ಯ ಪ್ರಪಂಚದಿಂದ ಬೇರೆಯಾಗಿ ಇದ್ದುದು ಮತ್ತು ಬಂದ ಐತಿಹಾಸಿಕ, ಸಾಮಾಜಿಕ ಸನ್ನಿವೇಶ ಈ ಕಾರಣಗಳಿಂದ ಹೀಗಾಗಿದೆ. ಆದುದರಿಂದಲೇ ಪ್ರಸಂಗಗಳ ಮತ್ತು ಮಾತುಗಾರಿಕೆಯ ಸಾಹಿತ್ಯಕ ಅಭ್ಯಾಸ ವಾಗಲಿ, ವಿಮರ್ಶೆಯಾಗಲಿ ತಕ್ಕಷ್ಟು ನಡೆದಿಲ್ಲ. ಈ ಬಗೆಗೆ ಸಮರ್ಥ ವಿಮರ್ಶಕರು ಆಸಕ್ತಿ ಹರಿಸಿ ಶ್ರಮವಹಿಸಿದಾಗ ಯಕ್ಷಗಾನದ ಶ್ರೇಷ್ಠ ಅರ್ಥಧಾರಿ, ಕನ್ನಡದ ಉತ್ಕೃಷ್ಟ ಕವಿಗಳ, ಸೃಷ್ಟಿಶೀಲ ಬರಹಗಾರರ ಮಟ್ಟದ ಮಾನ್ಯತೆ ಗಳಿಸಬಲ್ಲ, ಗಳಿಸು ವಂತಾಗಬೇಕು. ಶ್ರೇಷ್ಠ ಮಟ್ಟದ ವಿಶ್ಲೇಷಕ ಮನಸ್ಸುಗಳು ಈ ರಂಗದತ್ತ ಪ್ರವೃತ್ತವಾಗಿವೆ.
ತೀರ ಸರಳವಾಗಿ ತೋರುವ ಶಬ್ದಗಳ ಆಧಾರದಿಂದ ಎಂತಹ ಅದ್ಭುತ ವಾದ ನಾಟಕಗಳನ್ನು ಕಟ್ಟಲು, ಧ್ವನಿಯನ್ನು ಹೊರಡಿಸಲು ಸಾಧ್ಯ ಎಂಬುದನ್ನು ಅರ್ಥಧಾರಿಗಳು ತೋರಿಸಿ ಕೊಟ್ಟಿದ್ದಾರೆ. ಪೌರಾಣಿಕ ಘಟನೆಗಳಿಗೆ ಅರ್ಥ ಹಚ್ಚುತ್ತ, ಅವನ್ನು ಇಂದಿನ ಕೇಳುಗನಿಗೆ ಪ್ರಸ್ತುತವಾಗಿಸುತ್ತ ಎಲ್ಲಿಂದೆಲ್ಲಿಗೆ ಸಂಬಂಧ ತೋರಿಸಿ, ಘಟನೆಗಳ ಸಮನ್ವಯ ಮಾಡುತ್ತ ಅನುಭವ ಪ್ರಪಂಚವನ್ನು ತೆರೆದಿದ್ದಾರೆ. ಆಧುನಿಕ ಮನಸ್ಸಿನ ಸಂಶಯ, ವಿಮರ್ಶೆಗಳನ್ನು ಕಲೆಯ ತತ್ವಕ್ಕೆ ಚ್ಯುತಿಬಾರದ ಹಾಗೆ, ಮಂಡಿಸಲು ಸಾಧ್ಯ ಎಂಬುದನ್ನು ಚಿತ್ರಿಸಿ ತೋರಿದ್ದಾರೆ. ಒಂದೇ ಪ್ರಸಂಗದ ಒಂದೊಂದು ಪ್ರದರ್ಶನವು ವಿಭಿನ್ನ ವಿನ್ಯಾಸ ಸೌಂದರ್ಯಗಳುಳ್ಳ ಕಲಾಕೃತಿಗಳಾಗಿ ಅರಳುವ ಪವಾಡ, ಈ ಮಾಧ್ಯಮದ ವೈಶಿಷ್ಟ್ಯ ಈ ರಂಗದ 'ಮಹಾವಾಗ್ಮಿ' [ಮಹಾಕವಿ ಎಂಬ ಹಾಗೆ ಶೇಣಿ ಸಾವಿರಾರು ಸಲ ಹೇಳಿದ ಕೌರವ, ವಾಲಿ, ಭೀಷ್ಮನಂತಹ ಪಾತ್ರಗಳಲ್ಲಿ ಇಂದೂ ಹಿಂದೆ ಹೇಳದ ಹೊಸ ಹೊಸ ವಿಷಯವನ್ನು ಹೇಳಿ ಆ ಪಾತ್ರದ ವ್ಯಕ್ತಿಯಲ್ಲಿ ಪ್ರತಿಭೆ ಇದ್ದರೆ, ಆಳ, ಅಗಲಗಳಿಗೆ ಮಿತಿ ಇಲ್ಲವೆಂಬುದನ್ನೂ ಕಾಣಿಸಿದುದನ್ನು ಕೇಳಿ ಈ ಮಾಧ್ಯಮದ ಬಗೆಗೆ ನಾವು ಹೆಮ್ಮೆ ಪಡುವಂತಾಗಿದೆ. ಪುರಾಣ, ಶಾಸ್ತ್ರ ಪ್ರಸಂಗ ಸಾಹಿತ್ಯಗಳ ಜತೆ ಜೀವ ನಾನುಭವವನ್ನು ಯಕ್ಷಗಾನದ ಮಾತುಗಾರಿಕೆ ಒಳಗೊಳ್ಳುವ ಬಗೆ, ಇದು ಬರಿಯ ಪುರಾಣ ಚಿತ್ರಣದ ಮ್ಯೂಸಿಯಂ ಕಲೆಯಾಗಲಿ, ಸವೆದು ಹೋದ ಮಾಧ್ಯಮ ವಾಗಲಿ ಅಲ್ಲ ಎಂಬುದನ್ನು ತೋರಿಸುತ್ತಾರೆ. ಶೇಣಿ, ಸಾಮಗ, ದೇರಾಜೆ, ತೆಕ್ಕಟ್ಟೆ ಆನಂದ ಮಾಸ್ತರ್, ಪೆರ್ಲರಂತಹ ಮಾತುಗಾರರೂ, ಯಕ್ಷಗಾನದ ಹಾಸ್ಯಗಾರರೂ, ಬೇರೆ ಬೇರೆ ಮಟ್ಟಗಳಲ್ಲಿ ಜೀವನದ ಅನುಭವವನ್ನು ಈ ಕಲೆಯಲ್ಲಿ ಎಷ್ಟು ಸುಂದರ ವಾಗಿ ತರಬಹುದು ಎಂಬುದನ್ನು ತೋರಿದ್ದಾರೆ.
ಲಿಖಿತ ಸಾಹಿತ್ಯಕ್ಕಿಲ್ಲದ ಸೌಲಭ್ಯಗಳು ಈ ಮಾಧ್ಯಮಕ್ಕಿವೆ. ಜೀವಂತ ಕಂಠಧ್ವನಿ ನಿರ್ಮಿಸುವ ನಾದಪ್ರಪಂಚ, ಸಾಹಿತ್ಯಕ ಗುಣವನ್ನು ಮೀರಿ, ಭಾವವನ್ನು