ವಿಷಯಕ್ಕೆ ಹೋಗು

ಪುಟ:ಜಾಗರ.pdf/೭೩

ವಿಕಿಸೋರ್ಸ್ದಿಂದ
ಈ ಪುಟವನ್ನು ಪ್ರಕಟಿಸಲಾಗಿದೆ
ಪಾತ್ರ-ಚಿತ್ರಣ / ೬೫

ವಂತಹುದಾದುದರಿಂದ ಪಾತ್ರಚಿತ್ರಣವೂ ಅಷ್ಟರ ಮಟ್ಟಿಗೆ ಅದರಿಂದ ಪ್ರಭಾವಿತ ವಾಗಿರುತ್ತದೆ. ರಂಗದಲ್ಲಿಯೇ ಸಮಯ ಸ್ಫೂರ್ತಿಯಿಂದಲೇ ರೂಪಿಸಲ್ಪಡುವ ಮಾತು ಗಾರಿಕೆಗೆ, ಬರೆಯಲ್ಪಟ್ಟ ಸಾಹಿತ್ಯದಷ್ಟು ಯೋಚಿಸಿ ರೂಪಿಸುವಷ್ಟು ವಿರಾಮವಾ ಗಲೀ, ಪುನಃ ಪುನಃ ಓದಿ ತಿದ್ದುವುದಕ್ಕೆ ಅವಕಾಶವಾಗಲೀ ಇರುವುದಿಲ್ಲ. ಇದರಿಂದಾಗಿ ಪಾತ್ರಚಿತ್ರಣವನ್ನು ವಿವೇಚಿಸುವಲ್ಲಿ ಆಡಲ್ಪಡುವ ಗದ್ಯವು ಬರೆಯಲ್ಪಟ್ಟ ಗದ್ಯದಂತೆ ನಿಖರವಾಗಿರಬೇಕೆಂದು ಬಯಸುವುದು ಸರಿಯೆನಿಸದು. ಮಾತಿನ ರೀತಿ, ರಂಜಕತೆ ಗಳನ್ನು ಇಲ್ಲಿ ಗಮನಿಸಬೇಕು.
ನಾಲ್ಕನೆಯದು, ಪಾತ್ರವನ್ನು ರೂಪಿಸುವಾಗ ಒಬ್ಬ ಅರ್ಥಧಾರಿ ಸ್ವತಂತ್ರ ನಲ್ಲವೆಂಬುದು ಅತಿ ಮುಖ್ಯವಾದುದು. ಅವನು ಇತರ ಅರ್ಥಧಾರಿಗಳೊಂದಿಗೆ ಸಂವಾದ, ಪ್ರಶ್ನೋತ್ತರ, ವಾದ ನಡೆ ಸುತ್ತ ಪಾತ್ರಚಿತ್ರಣವನ್ನೂ ನಿಭಾಯಿಸಿ ಕೊಂಡು ಹೋಗಬೇಕು. ಪ್ರಸಂಗದ ಪದ್ಯಗಳ ಬಗ್ಗೆ ಪಾತ್ರಗಳ ಬೇರೆ ಬೇರೆ ಅರ್ಥ ಧಾರಿಗಳಿಗೆ ಬೇರೆ ಬೇರೆಯಾದ, ಕೆಲವೊಮ್ಮೆ ತೀರಾ ವಿರುದ್ಧವಾದ ಕಲ್ಪನೆ ಹಾಗೂ ಅಭಿಪ್ರಾಯಗಳಿರಲು ಸಾಧ್ಯವಷ್ಟೆ! ಆ ಬೇರೆ ಬೇರೆ ಅಭಿಪ್ರಾಯಗಳೂ ಸೂಕ್ತವಾ ಗಿಯೂ ಇರಬಹುದು. ಹೀಗೆ ಭಿನ್ನ ದೃಷ್ಟಿಯ ಪಾತ್ರಧಾರಿಗಳು ರಂಗದಲ್ಲಿ ಜತೆಯಾಗಿ ಕೆಲಸ ಮಾಡುವಾಗ ಉದಾರಮನೋಧರ್ಮವೂ ಸಮನ್ವಯ ದೃಷ್ಟಿಯೂ ಅಗತ್ಯ; ಇಲ್ಲವಾದರೆ, ಪಾತ್ರಗಳೆರಡೂ ಕೆಡುತ್ತವೆ. ಇದಿರುಪಾತ್ರ ಹಾಗೂ ಸಮವರ್ತೀ ಪಾತ್ರದ ಮಾತುಗಳನ್ನು ಆದರಿಸಿ ಸಂಭಾಷಣೆ ಮುಂದುವರಿಯುವಾಗ ಕ್ಷಣಕ್ಷಣಕ್ಕೂ ತಾವು ಮಾಡುವ ಪಾತ್ರಚಿತ್ರಣದ ಮೇಲೆ ಅವರ ಮಾತು ಧೋರಣೆಗಳ ಪ್ರಭಾವ ಅಷ್ಟಿಷ್ಟು ಬಿದ್ದೇ ಬೀಳುತ್ತದೆ. ಆದರೆ ಕಲಾಧರ್ಮವನ್ನು ಗಮನದಲ್ಲಿರಿಸಿ ಅರ್ಥ ಹೇಳುವವರಿಗೆ ಮಾತ್ರ; ಇತರರಿಗಲ್ಲ.
ಹಾಗೆಯೇ ಬೇರೆ ಬೇರೆ ಅರ್ಥಧಾರಿಗಳ ಪಾಂಡಿತ್ಯ ಪ್ರತಿಭೆ ಕಲ್ಪನೆಗಳ ಮಟ್ಟವೂ, ರೀತಿಯೂ ಬೇರೆ ಬೇರೆಯಾಗಿಯೇ ಇರುತ್ತವೆ. ಭಿನ್ನ ಭಿನ್ನ ಪ್ರತಿಭೆ ಹಾಗೂ ಕಲ್ಪನೆಯ ಅರ್ಥಧಾರಿಗಳೊಂದಿಗೆ ಹೊಂದಿಕೊಂಡು ತಾಳಮದ್ದಳೆಯ ಸೊಗಸನ್ನೂ, ಸಮಗ್ರತೆಯನ್ನೂ ಉಳಿಸಿಕೊಂಡು ಹೋಗಬೇಕಾದರೆ ನಾವು ವಹಿಸುವ ಪಾತ್ರದ, ಹಾಗೂ ಇತರ ಪಾತ್ರಗಳ ಬಗ್ಗೆ ನಮ್ಮ ನಿಲುಮೆಯಲ್ಲಿ, “ಹೀಗೆಯೇ ಸಾಗಬೇಕು”- ಎಂಬ ಬದಲು ಹೊಂದಾಣಿಕೆಯ ಮನೋಭಾವನೆ ಇರಬೇಕಾಗುತ್ತದೆ. ಉದಾಹರಣೆಗೆ; ಸಾಗುತ್ತಿರುವ ಒಂದು ಕಥೆ, ಒಂದು ಸಂವಾದ ದಲ್ಲಿ ಆ ಕಥೆಗೂ ಹಿಂದಿನ ಕಥೆಗೂ ಆಧಾರವಾಗಿ ಒಬ್ಬರು ಪ್ರಸಂಗಗಳನ್ನೇ ಆಶ್ರಯಿ ಸುತ್ತಾರೆ ಎಂದಾದರೆ, ಅವರ ಧಾಟಿಗೆ ಎದುರಾಗಿ ಬೇರೆ ಕಾವ್ಯವನ್ನು ತಂದು, ಪಾತ್ರಚಿತ್ರಣವನ್ನು ನಮ್ಮ ನೇರಕ್ಕೆ ತಿರುಗಿಸುವ ಪ್ರಯತ್ನ ಸಾಧುವೆನಿಸದು. ಒಬ್ಬ ಅರ್ಥಧಾರಿ, ಮೂಲ ಮಹಾಭಾರತದ ಪರಿಚಯ ಇರದವನು, ಆದರೂ ತನ್ನ