ವಿಷಯಕ್ಕೆ ಹೋಗು

ಪುಟ:ಜಾಗರ.pdf/೭೫

ವಿಕಿಸೋರ್ಸ್ದಿಂದ
ಈ ಪುಟವನ್ನು ಪ್ರಕಟಿಸಲಾಗಿದೆ
ಪಾತ್ರ - ಚಿತ್ರಣ / ೬೭

ಶಿಷ್ಟ ಪಾತ್ರಗಳಿಗೂ, ಒಂದು ಖಳಪಾತ್ರ ಎತ್ತಿದ ಎಲ್ಲ ಪ್ರಶ್ನೆಗಳಿಗೂ ರಾಮನೆ, ಕೃಷ್ಣನೋ ಅಥವಾ ಧರ್ಮರಾಜನೋ ಉತ್ತರಿಸುತ್ತಾ ಹೋಗ ಬೇಕಾಗಿಲ್ಲ. ಅಸಂಗತ ಪ್ರಶ್ನೆ, ಕ್ಷುಲ್ಲಕ ಪ್ರಶ್ನೆ, ವಿಷಯಾಂತರ ಇವು ಖಳಪಾತ್ರ ಮಾಡಬೇಕಾ ದದ್ದೇ, ಆದರೆ ಅವಕ್ಕೆಲ್ಲ ಬಿಡಿಸಿ ಉತ್ತರಿಸುವುದರಿಂದ ಉದಾತ್ತ ಪಾತ್ರಗಳ ಚಿತ್ರಣಕ್ಕೆ ಭಂಗ ಬರುತ್ತದೆ.
ಕೆಲವು ಪಾತ್ರಗಳ ಕುರಿತಾಗಿ ಕಲಾವಿದರು ಹಾಗೂ ಪ್ರೇಕ್ಷಕರಲ್ಲಿ ಕೆಲವೊಂದು ಪೂರ್ವಗ್ರಹಿತ ಭಾವಗಳಿರುತ್ತವೆ. ಅದು ತಪ್ಪೇನೂ ಅಲ್ಲ, ಅದು ಒಟ್ಟಾರೆ ಸಂಪ್ರದಾಯದ ಪ್ರಭಾವ, ಬಲರಾಮನೆಂದರೆ ಭೋಳೆ, ಧರ್ಮರಾಜ ನೆಂದರೆ ಅತಿಸಾತ್ವಿಕ, ಸತ್ಯಭಾಮೆಯೆಂದರೆ ಬಿಂಕ ಸ್ವಭಾವದ ವಾಚಾಳಿ ಹೆಣ್ಣು, ಹಾಗೆಯೇ ಕರ್ಣನ ದುರಂತ, ಪಾಂಡವರ ಬಗೆಗಿನ ದ್ವಂದ್ವಭಾವ - ಇವುಗಳ ಬಗೆಗೆ ಸಿದ್ಧ ಕಲ್ಪನೆಗಳಿವೆ. ಆದರೆ ಇಂತಹವುಗಳಿಗೆ ಪ್ರಸಂಗಗಳಲ್ಲಿ ಸದಾ ಪುರಾವೆ, ಪುಷ್ಟಿ ಇದೆಯೆಂದಲ್ಲ. ಬಲರಾಮನು ಭೋಳೆ ಎಂಬುದಕ್ಕೆ ಪ್ರಸಂಗದಲ್ಲಿ ಸ್ಪಷ್ಟ ಸಾಕ್ಷಿ ಇಲ್ಲ. ಅವನು ಕೊನೆಗಂತೂ ಕೃಷ್ಣನ ಯೋಜನೆಗೆ ಒಪ್ಪಲೇಬೇಕಾಗುತ್ತದೆ ಎಂಬುದು ನಿಜ ಕೃಷ್ಣ ಪಾತ್ರದ ಚಾತುರ್ಯ, ಮತ್ತು ಒಟ್ಟು ಕಥೆಯ ಪರಿಣಾಮಕ್ಕೆ ಬಲರಾಮನನ್ನು ಒಂದಿಷ್ಟು ಗಡಿಬಿಡಿಯ ಹಾಗೂ ತೀರಾ ಸರಳ ಸ್ವಭಾವದವನನ್ನಾಗಿ ಚಿತ್ರಿಸುವುದು ಅಗತ್ಯವಾಯಿ ತೆನ್ನ ಬಹುದು. ಹಾಗೆಯೇ ಕರ್ಣಪರ್ವದ “ಶಿವಶಿವಾ ಸಮರ ದೊಳು......”ಎಂದು ಆರಂಭವಾಗುವ ಪದ್ಯವನ್ನು ಬಿಟ್ಟರೆ ಕರ್ಣನ ಪಾತ್ರಕ್ಕೆ ಪಾಂಡವರ ಬಗೆಗಿನ ದ್ವೇಷ, ಕೃಷ್ಣನ ಬಗೆಗೆ ಗೌರವ, ಹಾಗೂ ಕೌರವರ ಬಗೆಗಿನ ಗಾಢಸ್ನೇಹ - ಇದ್ದುದಕ್ಕೆ ಒಂದಿಷ್ಟೂ ಸೂಚನೆ ಕರ್ಣಪರ್ವದ' ಪದ್ಯಗಳಲ್ಲಿಲ್ಲ. ಆದರೂ ಆ ಭಾವಗಳನ್ನೆಲ್ಲ ಪ್ರಕಟಿಸುವ ಸ್ವಾತಂತ್ರ್ಯ ಕರ್ಣನ ಪಾತ್ರಕ್ಕೆ ಇದೆ: ಅದರ ಅಗತ್ಯವೂ ಇದೆ. ನಾನು ಮೊದಲು ಪ್ರಸ್ತಾಪಿಸಿದಂತೆ ಪ್ರಸಂಗವನ್ನು ಮೀರಿ ಬೆಳೆಯುವ ಸ್ವಾತಂತ್ರ್ಯವು ಇದೇ ಆಗಿದೆ. ಸಂಪ್ರದಾಯ ರೂಢಿಗಳನ್ನ ನುಸರಿಸಿದ ಪಾತ್ರ ಚಿತ್ರಣ (ಉದಾ : ಬಲರಾಮ, ಸತ್ಯಭಾಮೆ ಇತ್ಯಾದಿ) ಮಾಡುವುದು ಕೆಲವೊಮ್ಮೆ ಅನಿವಾರ್ಯವಾದರೂ ಅದಕ್ಕಿಂತ ಭಿನ್ನವಾದ ರೀತಿಯಲ್ಲಿ ಆ ಪಾತ್ರಗಳನ್ನು ಚಿತ್ರಿಸುವ ಪ್ರಯೋಗವನ್ನು ಸೃಷ್ಟಿಶೀಲಕಲಾವಿದನು ಮಾಡಲೇಬೇಕು. ಹೀಗೆ ಮಾಡುವಲ್ಲಿ ದೊಡ್ಡ ಜವಾಬ್ದಾರಿ ಕೆಯನ್ನು ವಹಿಸಿಕೊಳ್ಳಬೇಕಾಗುತ್ತದೆ. ಅಂತಹ ಜವಾಬ್ದಾರಿಕೆಯಿ೦ದಲೇ ಸೃಷ್ಟಿಶೀಲತೆ ಸಾಧ್ಯ.
ತಾಳಮದ್ದಳೆಯ ಪಾತ್ರ ಸೃಷ್ಟಿಯಲ್ಲಿ ಗಮನಿಸಬೇಕಾದ ಇನ್ನೊಂದು ಮುಖ್ಯ ಹಾಗೂ ಮಹತ್ವದ ಅಂಶ ಮಾತಿನಿಂದ ಸೃಷ್ಟಿಯಾಗುವ ಭಾವ, ಏರಿಳಿತ, ಸ್ವರ - ವ್ಯತಾಸಗಳಿಂದ ಪಾತ್ರ - ಸ್ವಭಾವವನ್ನು ಹೊರಹೊಮ್ಮಿಸುವಂತಹುದು. L