ವಿಷಯಕ್ಕೆ ಹೋಗು

ಪುಟ:ಜಾಗರ.pdf/೮೩

ವಿಕಿಸೋರ್ಸ್ದಿಂದ
ಈ ಪುಟವನ್ನು ಪ್ರಕಟಿಸಲಾಗಿದೆ
ಅಭಿನಯ / ೭೫

ಮಾಡಲಾರದ ಕೆಲಸವನ್ನು ಅಭಿನಯವೂ ಮಾಡುವ ಕಾರಣ - ಅಭಿವ್ಯಕ್ತಿ ಸಮಗ್ರ ವಾಗುತ್ತದೆ. ಮತ್ತು ಸಮಷ್ಟಿ ಮಾಧ್ಯಮದ ಈ ಕಲೆಯಲ್ಲಿ ಒಂದು ಪುನರಾವೃತ್ತಿ ಈ ಕಲೆಯ ಸ್ವರೂಪದ ಅಂಶ ಎಂಬುದನ್ನು ಗಮನಿಸಬೇಕು.
ತೆಂಕುತಿಟ್ಟಿನಲ್ಲೂ, ಕುಂದಪುರೀ ಬಡಗುತಿಟ್ಟಿನಲ್ಲು ಅಭಿನಯದ ಪುನರು ದಯಕ್ಕೆ, ಉತ್ತರ ಕನ್ನಡ ಕಲಾವಿದರು (ವಿಶೇಷತಃ ಕೆರೆಮನೆ ಬಳಗ ಮತ್ತು ಚಿಟ್ಟಾಣಿ ರಾಮಚಂದ್ರ ಹೆಗ್ಡೆ, ಕಡತೋಕ ಮಂಜುನಾಥ) ಕಾರಣ. ಅವರು ತಮ್ಮ ಅಭಿನಯ ಪ್ರಧಾನ ಅಭಿವ್ಯಕ್ತಿಯಿಂದ ಹೊಸತೊಂದು ಲೋಕವನ್ನ ತೆರೆದಿಟ್ಟರು. ಇದರ ಪರಿಣಾಮ ಎಷ್ಟು ಗಾಢವಾಗಿದೆ ಎಂದರೆ, ಪದ್ಯವನ್ನು ಕುಣಿತದೊ೦ದಿಗೆ ಅಭಿನಯಿಸುವ ಪ್ರಯತ್ನ ಇಂದು ಹೆಚ್ಚಿನೆಲ್ಲ ಕಲಾವಿದರೂ ಮಾಡುತ್ತಿದ್ದಾರೆ. ಉತ್ತರ ಕನ್ನಡದ ವಿಖ್ಯಾತ ಭಾಗವತ ಕಡತೋಕರು ಸುಮಾರು ಹತ್ತಿಪ್ಪತ್ತು ವರ್ಷ ಗಳು ತೆಂಕುತಿಟ್ಟಿನ ಭಾಗವತರಾಗಿ ದುಡಿದುದರಿ೦ದ, ಅಲ್ಲಿನ ಅನೇಕ ಅಭಿನಯ ಸಂಪ್ರದಾಯಗಳು ಇಲ್ಲಿ ಕಾಣಿಸಿ ನೆಲೆಗೊಳ್ಳಲು ಕಾರಣವಾಯಿತು.
ಪ್ರಸಂಗದ ಪದ್ಯವನ್ನು ವಿವರವಾಗಿ ಅಭಿನಯಿಸುವ ಪದ್ಧತಿ ಇದ್ದಾಗ, ಭಾಗವತ, ವಾದ್ಯವಾದಕರು, ಮತ್ತು ವೇಷಧಾರಿ - ಇವರೆಲ್ಲರ ಜವಾಬ್ದಾರಿ ಹೆಚ್ಚು. ಕಟ್ಟುನಿಟ್ಟಾದ ಲಯ, ಸೂಕ್ಷ್ಮವಾದ ಸಾಹಿತ್ಯ ಜ್ಞಾನ. ಪದ್ಯಕ್ಕೆ ಬೇಕಾದ ಕಡೆ ಬೇಕಾದ ಒತ್ತುಕೊಡುವ ರೀತಿ - ಇವೆಲ್ಲ ಆಳವಾದ ಪರಿಶ್ರಮವನ್ನು ಒದಗಿಸುತ್ತವೆ. ವೇಷಧಾರಿಯ ಕಲ್ಪನಾವಿಲಾಸವನ್ನು ಭಾಗವತನೂ ಹಿಮ್ಮೇಳವೂ ನಾಜೂಕಾಗಿ ಅನುಸರಿಸಬೇಕು, ಇಲ್ಲಿ ಭಾಗವತನ್ನೂ ವೇಷಧಾರಿಯೂ ಪ್ರಸಂಗದ ಪದ್ಯಗಳಿಗೆ ಹೊಸವ್ಯಾಖ್ಯೆಯನ್ನೆ ನೀಡುತ್ತಾರೆ. ಪದ್ಯ, ಅದನ್ನು ಹಾಡುವ ಕ್ರಮ, ಅದರ ಅಭಿನಯ - ಇವು ಸೇರಿ ಕಲಾಕೃತಿಯಾಗುತ್ತವೆ. ಹಿಮ್ಮೇಳ - ಮುಮ್ಮೇಳಗಳ ಸಂವಾದಿತ್ವ ಅವಿರತವಾಗಿ ಇರಬೇಕಾಗುತ್ತದೆ. ಕುಣಿತವೆಂಬುದು ಪದ್ಯ ನಡೆಯು ವಷ್ಟು ವೇಳೆ ಹೊತ್ತು ಕಳೆಯುವ ಸಾಧನವಾಗದೆ, ಅಭಿವ್ಯಕ್ತಿಗೆ ವಾಹಕವಾಗಿರು ವುದು ಉತ್ತರ ಕನ್ನಡದ ತಿಟ್ಟಿನಲ್ಲಿ, ಅಭಿನಯ ಕಡಿಮೆ ಇರುವ ತೆಂಕು - ಬಡಗು ತಿಟ್ಟುಗಳಲ್ಲಿ ಹಿಮ್ಮೇಳ - ಮುಮ್ಮೇಳಗಳ ಸಂಬಂಧ, ಗತಾನುಗತಿಕವೂ ಯಾಂತ್ರಿ ಕವೂ ಆಗಿದೆ. ಯಕ್ಷಗಾನದ ವೇಷಗಳಿಗೆ ಹೊಂದಿಕೆ ಆಗುವ ಸಾಕಷ್ಟು ಸಮೃದ್ದ ವಾದ ಅಭಿನಯ ಸಂಪ್ರದಾಯವನ್ನು ಉತ್ತರ ಕನ್ನಡದ ಕಲಾವಿದರು ಬೆಳೆಸಿದ್ದಾರೆ. ಹಾಗೆಯೇ ಡಾ| ಕಾರಂತರೂ ತಮ್ಮ ಯಕ್ಷಗಾನ ನೃತ್ಯನಾಟಕಗಳಲ್ಲಿ ಅಭಿನಯದ 'ಸ್ವತಂತ್ರ ಪ್ರಯೋಗಗಳನ್ನು ನಡೆಸಿದ್ದಾರೆ. ಅಲ್ಲಿನ ಅಭಿನಯ ಬೇರೆಯೇ ಒಂದು ಪ್ರಕಾರದ್ದಾಗಿದ್ದು, ಅದು ಪ್ರಯೋಗಾತ್ಮಕ ರಂಗಭೂಮಿ ಆದುದರಿಂದ, ನಾನು ಈ ಪ್ರಬಂಧದ ವ್ಯಾಪ್ತಿಯಲ್ಲಿ ಅದನ್ನು ಸೇರಿಸಿಲ್ಲ.
ಅಭಿನಯಕ್ಕೆ ಸಂಬಂಧಿಸಿ ಕೆಲವೊಂದು ಔಚಿತ್ಯದ ಶಿಸ್ತುಗಳನ್ನು ವೇಷಧಾರಿ