ವಿಷಯಕ್ಕೆ ಹೋಗು

ಪುಟ:ಜಾಗರ.pdf/೮೫

ವಿಕಿಸೋರ್ಸ್ದಿಂದ
ಈ ಪುಟವನ್ನು ಪ್ರಕಟಿಸಲಾಗಿದೆ
ಅಭಿನಯ / ೭೭

ಇನ್ನೆರಡು ಸಂದರ್ಭ ನೋಡಿ : - ಸಂಧಾನದಲ್ಲಿ ಕೃಷ್ಣ ಕೌರವನ ಸಭೆಯಲ್ಲಿ ವಿದುರನ ಜತೆ “ನೋಡಿದೆಯ ವಿದುರ ಕೌರವ ಮಾಡಿದೋಲಗವ ಓಡಿಹೋಗಲಿ ಕೃಷ್ಣನೆನುತ' ಎನ್ನುತ್ತಾನೆ. ಇಲ್ಲಿನ ಅಭಿನಯದಲ್ಲಿ `ಓಡಿಹೋಗಲಿ' ಎಂಬುದು ಬರೇ ಕೈಯಲ್ಲಿ, ಮುಖದಲ್ಲಿ ಅದೂ ಕೌರವ ಕಾಣದಂತೆ ಇರಬೇಕಾದದ್ದು ಎಂದು ನನ್ನೆಣಿಕೆ. ಹಾಗೇ “ನೀನೇಕೆ ಭಯಗೊಂಡೆ' ಎಂಬಲ್ಲಿ ಹಾಗೆ ಕೇಳುವವನಿಗೆ ಭಯ ವಿಲ್ಲ. ಇನ್ನೊಬ್ಬನಲ್ಲಿ ಭಯವೇಕೆ ಎಂಬ ಪ್ರಶ್ನೆ ಅವನದು. ಅಲ್ಲಿ 'ಭಯ'ದ ಅಭಿ ನಯ ಕೇವಲ ಒಂದಿಷ್ಟು ಮಿಂಚಿ ಮಾಯವಾಗಬೇಕು. “ಭಳಿರೆ ಚಂದ್ರಾವಳಿ ನಿನ್ನನು ಕಾಣದೆ ಕಳವಳಗೊಳುತಿರ್ದೆನು” ಎಂದು ಕೃಷ್ಣ ಹೇಳುವಾಗ ಅದು ಯಾವ ಕಳವಳ? ಶೃಂಗಾರದ ಕಳವಳ ಅದು ಎಂಬ ಎಚ್ಚರ ನಟನಿಗೆ ಬೇಕು. ಇದಿರಿಗಿದ್ದ ಕೃಷ್ಣನನ್ನು ಸಂಬೋಧಿಸುವಾಗ, ಕೈ ಮುಂದೆ ಚಾಚಬೇಕೇ ಹೊರತು, ಕೃಷ್ಣನೆಂಬ ವ್ಯಕ್ತಿಯನ್ನು ಸಂಕೇತಿಸುವ ಭಂಗಿ ಅಗತ್ಯವಿಲ್ಲ.
ಒಂದು ಪದ ಅಥವಾ ಪದಪುಂಜವನ್ನು ಅಭಿನಯಿಸುವಾಗ, ಆ ಪಾತ್ರ, ಸನ್ನಿವೇಶಗಳಿಗೆ ಮತ್ತು ಅದಕ್ಕಿಂತಲೂ ಮುಖ್ಯವಾಗಿ, ಇಡಿಯ ಪದ್ಯದ ಒಟ್ಟು ಭಾವಕ್ಕೆ ಅಂಗವಾಗಿ, ಪೋಷಕವಾಗಿ ಅಭಿವ್ಯಕ್ತಿಸಬೇಕು. ಕರ್ಣನು ವೃಷಸೇನನ ಮರ ಣಕ್ಕಾಗಿ ಶೋಕಿಸುವ ಪದ್ಯಗಳಲ್ಲಿ, ವೃಷಸೇನನ ವಿಕ್ರಮದ ವರ್ಣನೆ ಇದೆಯಾ ದರೂ, ಅದನ್ನು ಅಬ್ಬರದಿಂದ ಅಭಿನಯಿಸುವಂತಿಲ್ಲ. ಏಕೆಂದರೆ ಆ ಸನ್ನಿವೇಶಕ್ಕೆ, ಪದ್ಯಕ್ಕೆ ಶೋಕವೇ ಸ್ಥಾಯೀಭಾವ.
ಪದ್ಯವನ್ನು ತೀರ ವಿಭಜಿಸಿ, ಭಾವಗಳನ್ನು ಬೇರೆ ಮಾಡಿ ಅಭಿನಯಿಸಿ ದರೆ, ಪದ್ಯದ ಒಟ್ಟು ಭಾವ ಕೆಡುತ್ತದೆ. ಬೆಲ್ಲ ಬೇರೆ, ಅಕ್ಕಿ ಬೇರೆ, ಏಲಕ್ಕಿ ಬೇರೆ, ಪಾಯಸ ಬೇರೆ - ಎಂಬಂತಾಗುತ್ತದೆ. ಏನು ಮುಖದಲಿ ಕಾಂತಿ ತಗ್ಗಿತು' - ಇಷ್ಟು ಪದಗಳಿಗೆ ಪ್ರಶ್ನಾರ್ಥಕ ಭಾವವೊಂದೇ ಅಭಿನಯ ಸೂಕ್ತ, 'ಕಂಡುದ ನುಡಿದರೆ ಖತಿಗೊಂಡು ಕುಣಿಯಲೇತಕಣ್ಣ' ಎಂಬಲ್ಲಿ 'ಕುಣಿಯಲೇತಕೆ' ಎಂಬುದಕ್ಕೆ ಅಭಿ ನಯ ಹದವಾಗಿ ಇರಬೇಕು. ಕುಡುವೆಯೊಂದರ ಪಾಲಿನಲಿ ಹಸಿವಡಗಿತಾ ಕ್ಷೀರಾ ಬಿಶಯನಗೆ | ದೃಢವ ತೋರಿಸಲಾಗಿ ಬಿಂದುವ ಕೆಡಹಿದನು ಕಟವಾಯದಿ' ಎಂಬ ಪದ್ಯಕ್ಕೆ, ಶಬ್ದ ಶಬ್ದವನ್ನೂ ಅಭಿನಯಿಸುತ್ತ ಹೋದರೆ, ವಿಚಿತ್ರವಾಗದೆ? ಅಲ್ಲಿ ಇಡಿ ಪದ್ಯ ನಡೆಯುವಾಗ, ಅದರ ಅರ್ಥ ಸಂಕೇತವಾಗುವಂತಹ ಘಟನೆ ಅಭಿನಯಿ ಸಲ್ಪಡಬೇಕು ಅಷ್ಟೆ. ಹಾಗೆಂದು 'ರಾಘವನರಪತೇ ಶೃಣಿಮಮ ವಚನಂ' 'ಸರಸಿ ಜಾಂಬಕಿ ನಾನು, ತರಣಿ ಪ್ರಕಾಶ ನೀನು.' ಇತ್ಯಾದಿ ಪದ್ಯಗಳಲ್ಲಿ ಪದಶ: ಅಭಿನಯ ಬೇಕು. ನರ್ತಕನೊಬ್ಬನು ನೃತ್ಯ ಕಾರಕ್ರಮವನ್ನು ಪ್ರದರ್ಶಿಸುವಾಗ (ಉದಾ: ಭರತನಾಟ್ಯದ ಒಂದು ಪ್ರದರ್ಶನ ) ಅಳವಡಿಸಬೇಕಾದ ಅಭಿನಯ ತಂತ್ರದಲ್ಲಿ ನರ್ತಕನು, ತಾನು ಯಾವುದೇ ಪಾತ್ರವಲ್ಲ. • ಅವನು ನರ್ತಕ ಅಷ್ಟೆ, ಅಥವಾ ಅವನೇ