ಪುಟ:ತೊಳೆದ ಮುತ್ತು.pdf/೧೪೯

ವಿಕಿಸೋರ್ಸ್ದಿಂದ
ಈ ಪುಟವನ್ನು ಪ್ರಕಟಿಸಲಾಗಿದೆ

ಕರಿಗಾಲಿನ ಗಿರಿರಾಯರು

೧೪೧

ನಲ್ಲಾ ಎಂಬ ವ್ಯಸನದಿಂದ ಗಿರಿರಾಯನ ಕಾಯಿಯು ಹೃದ್ರೋಗವನ್ನು ತಗೆಲಿಸಿಕೊಂಡು ಸತ್ತು ಹೋದಳು. ಗಿರಿರಾಯನಿಗೆ ಇದೊಂದು ಹಿತವ ಆಯಿತು. ಆದರೆ ಪಾಹ, ವಿಶಾಲಾಕ್ಷಿಗೆ ಕಟ್ಟಡವಿಯಲ್ಲಿ ಕಣ್ಣು ಕಟ್ಟಿ ಬಿಟ್ಟಂತಾಯಿತು ಡೊಂಬತಿಯು ಮನೆಯಲ್ಲಿಯೇ ಬಂದು ಕುಳಿತಳು. ಎಲ್ಲ ಕಾರಭಾರವೂ ಅವಳ ಕೈಸೇರಿಹೋಯಿತು.

ವಿಶಾಲಾಕ್ಷಿಗೆ ತೀವ್ರವಾದ ಮಾನಹಾನಿಯ ವೇದನೆಯ ಬಿತ್ತು ತನ್ನ ದೇವಶಿಯಾದ ಪತಿಯ ಕವಾರ್ಗಿಯಾಗಿ ಕೆಟ್ಟು ಹೋಗುತ್ತಿರುವದನ್ನು ಅವಳು ಕಣ್ಣಿಲಿ ನೋಡಲಾರಳು. ಸಂಸಾರದ ಸುಖವಂತ ಅವಳಿಗೆ ಚಿಕ್ಕದಿನಲ್ಲಿಯೇ ಇಲ್ಲದಂತಾಯಿತು, ಅಸ್ಸರೆಯರಿಗಿಂತಲೂ ಮಿಗಿಲಾಗಿರುವ ಆ ನವಪರಿಣಿಯು ವ್ಯಸನಾತಿರೇಕದಿಂದ ಸೊರಗಿ ಕಡ್ಡಿ ಯಾದಳು, ಶಶಿಬಿಂಬದಂತಿ ಮನೋಹರವಾಗಿರುವ ಅವಳ ಮುಖವು ಹುಚ್ಚಿಟ್ಟು ಸುರಿಯಿತು. ಪತಿವ್ರತೆಯ ಧರ್ಮಶೀಲರೂ ಆಗಿರುವ ಆ ಸತಿಯ ನಿತ್ಯದಲ್ಲಿಯೂ ಬೊಗಸೆ ಬೊಗಸೆ ಕಣ್ಣೀರು ಸುರಿಸಿ ದೇವರಿಗೆ ಎಷ್ಟು ಸರಿಯಾಗಿ ಪ್ರಾರ್ಥಿಸಿದರೂ ಆ ನಿರ್ಗುಣನಾದ ಪರಮಾತ್ಮನಿಗೆ ಕರುಣೆ ಬರಲಿಲ್ಲ ಅವರ ಈ ಕುಲಾಂಗನೆಯು ಪತಿಯ ಆಜ್ಞೆಯನ್ನು ಬೊಗಸೆಯೊಡ್ಡಿ ಅಂಗೀಕರಿಸಿ ಸಮಾಧಾನದಿಂದಲೂ, ವಿನಯದಿಂದಲೂ ಹೇಳಿದಷ್ಟು ಕೆಲಸ ಮಾಡಿಕೊಂಡು ಇದ್ದಳು. ಅಮ್ಮಾ, ವಿಶಾಲಾಕ್ಷಿ, ನಿನ್ನ ವಾರ್ತೆಯನ್ನು ಕೇಳಿಯೇ ದುಃಖದಿಂದ ನಮ್ಮ ಗಂಟಲು ಬಿಗಿದುಬರ ೬ರಲು, ನೀನು ನಿನ್ನ ಪುಣ್ಯದ ಬಲದಿಂದಲೇ ಅವನ್ನೆಲ್ಲ ಸಹಿಸುತ್ತಿರುವಿಯಲ್ಲವೆ ?

ಇರಲಿ. ಗಿರಿರಾಯನು ಕಡೆಗೆ ತನ್ನ ಉಂಬಳಿಯ ಚಿನ್ನೂರು ಗ್ರಾಮವನ್ನು ಮದರಾಸಿನಲ್ಲಿಯ ಓರ್ವ ವರ್ತಕನಿಗೆ ಮಾರಿಕೊಂಡು ಊರು ಬಿಟ್ಟು ಹೊರಟಿದ್ದು ನಡೆದನು, ಇಂದು ನಾಳೆ ಊರಿಗೆ ಮರಳಿ ಬರುವನೆಂದು ವಿಶಾಲಾಕ್ಷಿಗೆ ಸುಳ್ಳು ಹೇಳಿ ಹೋದ ಗಿರಿರಾಯನು ಮರಳಿ ಬರಲೇ ಇಲ್ಲ.

ವರುಷಾರು ತಿಂಗಳುಗಳಲ್ಲಿಯೇ ಮನೆ ಮಾರಿದ ಹಣವೆಲ್ಲ ಹಾರಿ ಹೋಯಿತು. ಸರಕಾರದಿಂದ ತಿಂಗಳು ಇನ್ನೂರು ರೂಪಾಯಿ ಬರುವದನ್ನು ಅವನು ಆ ಡೊಂಬತಿಯ ಸ್ವಾಧೀನ ಮಾಡುವನಹಿ, ಅವಳು ಅದರಲ್ಲಿ ಹತ್ತು ರೂಪಾಯಿಗಳನ್ನು ಓರ್ವ ಅಡುಗಲಜ್ಜಿಗೆ ಕೊಟ್ಟು ಗಿರಿರಾಯನಿಗೆ