ಈ ಪುಟವನ್ನು ಪ್ರಕಟಿಸಲಾಗಿದೆ
ಸೇತುವೆ
519
ಜಯದೇವನ ವೈಯಕ್ತಿಕ ಜೀವನ, ನಾಡಿನ ಬದುಕಿನೊಡನೆ ಹಾಸುಹೊಕ್ಕಾಗಿ ಬೆರೆತು
ಮುಂದುವರಿಯುವ ಚಿತ್ರ ಅದರಲ್ಲಿದೆ. 'ದೂರದ ನಕ್ಷತ್ರ'ದ ಮುಂದಿನ ಭಾಗವೆಂದು,
ವಾಸ್ತವತೆಯ ಮೂಸೆಯಲ್ಲಿ ಆದರ್ಶವನ್ನು ಪುಟಕ್ಕಿಡುವ ಜಯದೇವನ ಕಥೆಯೆಂದು,
ಓದುಗರು 'ನವೋದಯ'ವನ್ನು ಬರಮಾಡಿಕೊಳ್ಳುವರೆಂಬ ನಂಬಿಕೆ ನನಗಿದೆ.
ಕವಿಕಾವ್ಯ ಪಕ್ಷಪಾತಿಯಾದ ಹೈದರಾಬಾದಿನ ಸನ್ಮಿತ್ರ ಜೆ. ಕೆ. ಪ್ರಾಣೇಶಾ
ಚಾರ್ಯರ ನೂತನ ಉದ್ಯಮವಾದ ಸಾಧನಾ ಪ್ರಕಾಶನದ ಮೂಲಕ 'ನವೋದಯ'
ಬೆಳಕು ಕಂಡಿದೆ. ಅದರ ಜೊತೆಯಲ್ಲೇ, ಮೊದಲ ಆವೃತ್ತಿ ಎಂದೋ ಮುಗಿದಿದ್ದ
'ದೂರದ ನಕ್ಷತ್ರ'ವನ್ನೂ ಓದುಗರ ಅನುಕೂಲಕ್ಕೆಂದು ಅವರು ಪುನಃ ಪ್ರಕಟಿಸು
ತ್ತಿದ್ದಾರೆ. ಹೀಗೆ, ಈ ಎರಡು ಕೃತಿಗಳೂ ಜತೆಯಲ್ಲೇ ಓದುಗರ ಕೈಸೇರುವಂತಾಗಿದೆ.
ನನ್ನ ಬರವಣಿಗೆಯ ವಿಷಯದಲ್ಲಿ ಆಸಕ್ತಿ ವ್ಯಕ್ತಪಡಿಸಿರುವ ಜೆ.ಕೆ. ಪ್ರಾಣೇಶಾ
ಚಾರ್ಯರಿಗೆ ಈ ಸಂದರ್ಭದಲ್ಲಿ ಕೃತಜ್ಞತೆ ಸಲ್ಲಿಸಬೇಕಾದುದು ನನ್ನ ಕರ್ತವ್ಯ.
ನಿರಂಜನ
ಸೆಪ್ಟೆಂಬರ್ 1956
ಗೋಕುಲ ವಿಸ್ತರಣ
ವಾಣಿವಿಲಾಸ ಮೊಹಲ್ಲಾ
ಮೈಸೂರು