ಪುಟ:ಪರಂತಪ ವಿಜಯ ೨.djvu/೧೦೧

ವಿಕಿಸೋರ್ಸ್ದಿಂದ
ಈ ಪುಟವನ್ನು ಪ್ರಕಟಿಸಲಾಗಿದೆ

ಅಧ್ಯಾಯ ೧೨

೯೧




ಪಾಪಿ ನಿನ್ನಲ್ಲಿ ಸ್ವಲ್ಪವೂ ಅನುರಾಗವಿಲ್ಲದಿರತಕ್ಕ ಪರಸ್ತ್ರೀಯಾದ ಕಾಮಮೋಹಿನಿಯ ಗಂಡನನ್ನು ಸಂಹರಿಸಿ ಅವಳನ್ನು ಕೆಡಿಸಬೇಕೆಂಬ ಉದ್ಯೋಗದಲ್ಲಿ ಇರುತ್ತಿಯೆ. ಇದು ಘೋರವಾದ ಪಾಪಕೃತ್ಯವು, ಕಾಮಮೋಹಿನಿಯು ಪ್ರಾಣವನ್ನಾದರೂ ಬಿಡುವಳೆ ಹೊರತು, ನಿನ್ನಂಥ ದುರಾತ್ಮನನ್ನು ದೃಷ್ಟಿಸಿ ಕೂಡ ನೋಡಳು. ನಿನ್ನಂಥ ಚಂಡಾಲನಿಗೆ, ಪರಿಶುದ್ಧಳಾಗಿಯೂ ಪತಿವ್ರತಾ ಶಿರೋಮಣಿಯಾಗಿಯೂ ಇರುವ ಕಾಮಮೋಹಿನಿಯು ಹೆಂಡತಿಯಾಗುವಳೆ ? ಅತ್ಯುತ್ಕಟವಾದ ಪಾಪಗಳಿಗೆ ಪ್ರತೀಕಾರವು ಈ ಜನ್ಮದಲ್ಲಿ ಬಹಳ ಶೀಘ್ರದಲ್ಲಿಯೇ ಸಂಭವಿಸಬಹುದೆಂದು ಮಹಾಪುರುಷರು ಹೇಳುತ್ತಾರೆ. ನಿನ್ನ ಪಾಪಕರ್ಮಗಳ ಫಲವನ್ನು ನೀನು ಅನುಭವಿಸದಿರು ವುದಕ್ಕಾಗುವುದಿಲ್ಲ. ನಿನ್ನಂಥ ದುರಾತ್ಮನನ್ನು ಕೊಲ್ಲುವುದು ಪುಣ್ಯಕರವಾದುದು. ಕಾಮಮೋಹಿನಿಯನ್ನು ಕೆಡಿಸುವುದಕ್ಕೆ ನಿನಗೆ ಅವಕಾಶವಿಲ್ಲದಂತೆ, ಇಲ್ಲಿಯೆ ನಿನ್ನನ್ನು ಯಮಪುರಿಗೆ ಕಳುಹಿಸುವೆನು.
ಅವಳು ಪಿಸ್ತೂಲಿನಿಂದ ಅವನನ್ನು ಹೊಡೆಯಬೇಕೆಂದು ಪ್ರಯತ್ನ ಮಾಡುವುದರೊಳಗಾಗಿಯೇ, ಶಂಬರನು ಏಟು ತಿಂದ ಹುಲಿಯಂತೆ ನುಗ್ಗಿ, ಅವಳನ್ನು ಕೆಡವಿ, ಪಿಸ್ತೂಲನ್ನು ಅವಳ ಕೈಯಿಂದ ಕಿತ್ತುಕೊಂಡು, ಅವಳ ಕತ್ತನ್ನು ಕಿವಿಚಿದನು. ಅವಳು ಉಸಿರು ಸಿಕ್ಕಿಕೊಂಡು ಸತ್ತಂತೆ ಬಿದ್ದಳು. ಅಲ್ಲಿಂದ ಕಾಗದ ಪತ್ರಗಳನ್ನು ತೆಗೆದುಕೊಂಡು ಶಂಬರನು ಹೊರಟು ಹೋದನು.


ಅಧ್ಯಾಯ ೧೨

ರಂತಪನು ರತ್ನಾಕರಕ್ಕೆ ಹೊರಟುಹೋದ ರಾತ್ರಿ ಕಾಮಮೋಹಿನಿಯು, ತನ್ನ ಗಂಡನಿಗೆ ಏನು ಅನರ್ಥಗಳುಂಟಾಗುವುವೋ ಎಂದು, ಅಸಾಧಾರಣವಾದ ಭಯದಿಂದ ಪೀಡಿತಳಾಗಿದ್ದಳು. ಬೆಳಗಾಗುತ್ತಲೂ ನನ್ನ ಗಂಡನು ಬರುವನೆಂದು, ಅವನ ಆಗಮನವನ್ನು ನಿರೀಕ್ಷಿಸುತ್ತ ಇದ್ದಳು. ಸೂರ್ಯೋದಯವಾಯಿತು. ಸೂರ್ಯನು ನೆತ್ತಿಯ ಮೇಲಕ್ಕೆ ಬಂದನು. ಪರಂತಪನು ಮಾತ್ರ