ಪುಟ:ಪರಂತಪ ವಿಜಯ ೨.djvu/೧೦೪

ವಿಕಿಸೋರ್ಸ್ದಿಂದ
ಈ ಪುಟವನ್ನು ಪ್ರಕಟಿಸಲಾಗಿದೆ

೯೪

ಪರಂತಪ ವಿಜಯ


ಪೂರ್ವಾಪರಗಳನ್ನು ಭೇದಿಸಲಸಾಧ್ಯವಾದುದರಿಂದ, ರತ್ನಾಕರದಿಂದ ಹಿಂದಕ್ಕೆ ಬಂದನು. ಆಗ ಅವನ ಹೆಂಡತಿಯು, ಆ ಕಾಗದದ ವೃತ್ತಾಂತವನ್ನು ತಿಳಿಯಿಸಿದಳು. ಆಗ ಸತ್ಯಶರ್ಮನು ಆ ಕಾಗದವನ್ನು ತೆಗೆದು ನೋಡಿ “ ಇದು ಅರ್ಥಪರನ ಅಕ್ಷರವೂ ಅಲ್ಲ; ಅವನ ರುಜುವೂ ಅಲ್ಲ. ಯಾರೋ ದುರಾತ್ಮರು ಇವಳನ್ನು ಕ್ಲೇಶಪಡಿಸುವುದಕ್ಕೆ ಹೀಗೆ ಬರೆದಿರಬಹುದು. ” ಎಂದು ಗೊತ್ತುಮಾಡಿ, ಈ ಅಂಶವನ್ನು, ಪ್ರಜ್ಞೆ ಬಂದಾಗ ಕಾಮಮೋಹಿನಿಗೆ ತಿಳಿಸಿದನು. ಅದರಿಂದ ಪ್ರಯೋಜನವಾಗಲಿಲ್ಲ. ಆಗ ಸತ್ಯಶರ್ಮನು ಒಬ್ಬ ವೈದ್ಯನನ್ನು ಕರೆತಂದು ತೋರಿಸಿದನು. ಅವನು ಇವಳ ದೇಹಸ್ಥಿತಿಯನ್ನು ಪರೀಕ್ಷಿಸಿ, ಸದ್ಯಕ್ಕೆ ನಿದ್ದೆ ಬರುವ ಔಷಧಿಯನ್ನು ಕೊಟ್ಟು, ಬೆಳಗ್ಗೆ ನೋಡಿ ಚಿಕಿತ್ಸೆ ಮಾಡುವಂತೆ ಹೇಳಿ, ಹೊರಟುಹೋದನು.
ಅಷ್ಟರಲ್ಲೇ ಬಾಗಿಲು ಬಲವಾಗಿ ತಟ್ಟಲ್ಪಟ್ಟಿತು. ಸರಂತಸನು ಬಂದನೆಂದು, ಸತ್ಯಶರ್ಮನು ಜಾಗ್ರತೆಯಾಗಿ ಹೋಗಿ ಬಾಗಿಲು ತೆಗೆದನು. ವೇಷ ಧಾರಿಗಳಾದ ಹನ್ನೆರಡು ಜನಗಳೊಡನೆ ಶಂಬರನು ಒಳಕ್ಕೆ ಪ್ರವೇಶಿಸಿದನು.
ಸತ್ಯಶರ್ಮ-ಅಯ್ಯಾ! ನೀನಾರು ? ಇಲ್ಲಿಗೆ ಇಷ್ಟು ಅವೇಳೆಯಲ್ಲಿ ಏಕೆ ಬಂದೆ ? ನಿನಗೇನು ಬೇಕು?
ಶಂಬರ-ಕಳ್ಳ! ನನ್ನನ್ನು ನೀನು ಕಾಣೆಯೋ? ನಾನು ಶಂಬರ; ಕಾಮಮೋಹಿನಿಯ ಪೋಷಕ, ನೀನು ಅವಳನ್ನು ಕಳ್ಳತನದಿಂದ ತಂದು ಇಲ್ಲಿಟ್ಟು ಕೊಂಡಿರುವುದು ನನಗೆ ಗೊತ್ತಾಯಿತು. ನಿನ್ನ ಅಪರಾಧಕ್ಕೆ ತಕ್ಕ ಶಿಕ್ಷೆಯನ್ನು ಶೀಘ್ರದಲ್ಲೇ ಹೊಂದುವೆ.
ಸತ್ಯಶರ್ಮ-ಓಹೋ! ಶಂಬರನೆ ? ಈಗ ಗೊತ್ತಾಯಿತು. ದ್ರವ್ಯಾರ್ಥವಾಗಿ ದೊಡ್ಡಪ್ಪನನ್ನು ಕೊಂದ ಪುತ್ರಾಧಮನು ನೀನಲ್ಲವೆ! ಕಲಾವತಿಯ ಕತ್ತು ಮಿಸುಕಿ ಸುಮಿತ್ರನ ಉಯಿಲನ್ನು ಅಪಹರಿಸಿದ ಚಂಡಾಲನು ನೀನಲ್ಲವೆ! ಕಲಾವತಿಯನ್ನು ವಿವಾಹಮಾಡಿಕೊಳ್ಳುವುದಾಗಿ ಮಾತು ಕೊಟ್ಟು ಅದಕ್ಕೆ ತಪ್ಪಿ ಪರಸ್ತ್ರೀಯಾದ ಕಾಮಮೋಹಿನಿಯನ್ನು ಅಪಹರಿಸ ಬೇಕೆಂದು ಈ ಕಾಗದವನ್ನು ಬರೆದು ಕಿಟಕಿಯಿಂದ ಹಾಕಿ ಅವಳು ವ್ಯಾಕುಲಳಾಗಿ ಮೂರ್ಛಿತಳಾಗುವಂತೆ ಮಾಡಿರುವ ದುರಾತ್ಮನು ನೀನಲ್ಲವೆ! ನೀನೇ ಪರಂತಪನನ್ನು ಕೊಂದು, ಅರ್ಥಪರ ಬರೆದಂತೆ ಈ ಕಾಗದವನ್ನು ಬರೆದಿರ