ಪುಟ:ಪರಂತಪ ವಿಜಯ ೨.djvu/೪೪

ವಿಕಿಸೋರ್ಸ್ದಿಂದ
ಈ ಪುಟವನ್ನು ಪ್ರಕಟಿಸಲಾಗಿದೆ

೩೪

ಪರಂತಪ ವಿಜಯ


ನಲ್ಲಿ ನಾನು ಮಾಡಿದ ಔದಾಸೀನ್ಯಕ್ಕೆ ಈಗ ಅವನು ತಕ್ಕ ಪ್ರತೀಕಾರವನ್ನು ಮಾಡಿದನು. ಇನ್ನಾವುದಕ್ಕೂ ನಾನು ಅಷ್ಟು ಚಿಂತಿಸಿ ಸಂತಾಪಪಡುವುದಿಲ್ಲ. ಮಾಧವನು ತನ್ನ ಪ್ರಾಣೋತ್ಕ್ರಮಣ ಕಾಲದಲ್ಲಿಯೂ ಕೂಡ, ನಿರ್ಘಣಳಾಗಿಯೂ ಪಾಪಿನಿಯಾಗಿಯೂ ಇರುವ ನನ್ನನ್ನು ಸ್ಮರಿಸಿಕೊಂಡು, ನಾನು ಅವನಿಗೆ ಮಾಡಿದ ತಿರಸ್ಕಾರವನ್ನು ಮನಸ್ಸಿನಲ್ಲಿಡದೆ, ಈ ದ್ರವ್ಯವನ್ನು ನಿನ್ನ ಮೂಲಕ ಕಳುಹಿಸಿರುವುದೇ, ನನಗೆ ಮರ್ಮೋದ್ಘಾಟನೆ ಮಾಡಿದಂತೆ ದುಸ್ಸಹವಾದ ಸಂತಾಪವನ್ನುಂಟು ಮಾಡುತಿರುವುದು. ಅಯ್ಯಾ ! ಪರಂತಪ ! ನನಗೆ ದ್ರವ್ಯದ ಮೇಲೆ ಸ್ವಲ್ಪವೂ ಅಪೇಕ್ಷೆಯಿಲ್ಲ. ಯಾವ ಸಂಪತ್ತೂ ನನಗೆ ಬೇಕಾಗಿಲ್ಲ. ಆ ದುರಾತ್ಮನಾದ ಶಂಬರನಿಗೆ ಅಧೀನಳಾಗದ ಹಾಗಾದರೆ, ಅದೇ ಸಾಕು. ಸೇವಾವೃತ್ತಿಯಿಂದಲಾದರೂ ಜೀವಿಸುತ್ತ ಕಾಲವನ್ನು ಕಳೆಯುವೆನು. ನನ್ನ ಆಯಃಪರಿಮಾಣ ಮುಗಿಯುವವರೆಗೂ ಮಾಧವನಿಗೆ ದ್ರೋಹ ಮಾಡಿದೆನೆಂಬ ಅನುತಾಪವು ನನಗೆ ಹೋಗತಕ್ಕುದಲ್ಲ. ಮಾಧವನು ನನಗೋಸ್ಕರ ಕೊಟ್ಟಿರ ತಕ್ಕ ದ್ರವ್ಯವನ್ನು ನಿನ್ನ ಶ್ರಮಕ್ಕೆ ಪ್ರತಿಫಲವನ್ನಾಗಿ ಮಾಡಿಕೊಂಡು, ನನಗೆ ಈ ಬಂಧಮೋಚನವನ್ನು ಮಾಡಿದರೆ, ನಾನು ನಿನಗೆ ಮರಣಾಂತವಾಗಿ ಕೃತಜ್ಞಳಾಗಿರುವೆನು.
ಪರಂತಪ-ಪ್ರತಿಫಲವನ್ನಪೇಕ್ಷಿಸದೆ ಪರೋಪಕಾರವನ್ನು ಮಾಡುವುದೇ ಧರ್ಮವು. ಹೀಗಿರುವಲ್ಲಿ, ನಾನು ದೃವ್ಯಾರ್ಥಿಯಾಗಿ ಎಂದಿಗೂ ಉಪಕಾರ ಮಾಡತಕ್ಕವನಲ್ಲ. ಮಾಧವನು ಕೊಟ್ಟಿರುವ ದ್ರವ್ಯವು ನಿನ್ನದಾಗಿದೆ. ಈ ದ್ರವ್ಯ ಸಹಾಯದಿಂದಲೇ ಬಂಧಮೋಚನವನ್ನು ಮಾಡಿಕೊಳ್ಳಬೇಕೆಂಬ ಸಂಕಲ್ಪವು ನಿನಗಿದ್ದರೆ, ಅಂಥ ಧನಾಕಾಂಕ್ಷಿಗಳಾದ ಇತರರು ಯಾರನ್ನಾದರೂ ನೋಡಬಹುದು. ನನ್ನಿಂದಲೇ ಈ ಕಾರ್ಯವಾಗಬೇಕಾಗಿದ್ದರೆ, ನಾನು ಧರ್ಮಾರ್ಥವಾಗಿ ಮಾಡತಕ್ಕವನೇ ಹೊರತು, ಎಂದಿಗೂ ಪ್ರತಿ ಫಲವನ್ನಪೇಕ್ಷಿಸತಕ್ಕವನಲ್ಲ.
ಕಾಮಮೋಹಿನಿ-ಆರ್ಯನೇ! ನನ್ನ ಮಾತುಗಳಿಂದ ನಿನಗೆ ಕ್ರೋಧವುಂಟಾದಂತೆ ತೋರುವುದು. ನನ್ನ ಅಪರಾಧವನ್ನು ಕ್ಷಮಿಸು, ದುಃಖಾತಿಶಯದಿಂದ ನಾನು ಯುಕ್ತಾಯುಕ್ತ ವಿವೇಚನೆಯಿಲ್ಲದೆ ಆಡಿದ ಮಾತಿಗೆ ನೀನು ಕೋಪಿಸಿಕೊಂಡರೆ, ನಿನ್ನ ದಯಾಳುತ್ವವೇನಾಯಿತು ? ಅನಾಥಳಾಗಿ ಸಂಕ