ಪುಟ:ಪರಂತಪ ವಿಜಯ ೨.djvu/೬೨

ವಿಕಿಸೋರ್ಸ್ದಿಂದ
ಈ ಪುಟವನ್ನು ಪ್ರಕಟಿಸಲಾಗಿದೆ

೫೨

ಪರಂತಪ ವಿಜಯ


ಈಗ ಈ ಸರ್ವಗುಣಗಳಿಗೂ ನಿಧಿಯಾಗಿರುವ ನಿನ್ನನ್ನು ನೋಡಿ, ನಮಗೆ ಅತ್ಯಂತ ಸಂತೋಷವಾಯಿತು. ಈ ಕಾಮಮೋಹಿಸಿಯು ಅನಾಥಳು. ಇದುವರೆಗೂ ಸುಮಿತ್ರನು ಈಕೆಗೆ ಪಿತೃಪ್ರಾಯನಾಗಿದ್ದನು ದುಷ್ಟನಾದ ಶಂಬರನಿಗೆ ಈಕೆಯನ್ನು ಕೊಟ್ಟು ವಿವಾಹಮಾಡಬೇಕೆಂದು ಆತನು ಮಾಡಿದ ನಿಶ್ಚಿತಾರ್ಥ ಮಹೋತ್ಸವ ಪ್ರಯತ್ನ ಕಾಲದಲ್ಲಿ, ಮಾಧವನ ಮರಣ ಸಮಾಚಾರವು ವಿಘ್ನವಾಗಿ ಪರಿಣಮಿಸಿತು. ಇದಕ್ಕೂ ಲಕ್ಷ್ಯ ಮಾಡದೆ ಪುನಃ ಈ ಪ್ರಯತ್ನ ಮಾಡಲು, ಆತನಿಗೆ ಈ ಸ್ತ್ರೀರತ್ನದ ಅಧೀನತೆ ತಪ್ಪಿಹೋದುದು ಮಾತ್ರವಲ್ಲದೆ, ಆತನು ಜನಾಪವಾದಕ್ಕೂ ಗುರಿಯಾದನು.

ಪರಂತಪ- ಅಯ್ಯಾ! ಸತ್ಯಶರ್ಮನೆ! ನಿನ್ನ ಸೌಜನ್ಯಕ್ಕೆ ನಾನು ಕೃತಜ್ಞನಾಗಿರುವೆನು. ದೈವವ್ಯಾಪಾರವು ವಿಚಿತ್ರವಾದುದು. ಈಕೆಯನ್ನು ಶಂಬರನಿಗೆ ವಿವಾಹಮಾಡಬೇಕೆಂದು ಸುಮಿತ್ರನು ನಿಷ್ಕರ್ಷೆ ಮಾಡಿ, ಈ ಕಾರ್ಯಕ್ಕೆ ಸಹಾಯ ಮಾಡಬೇಕೆಂದು ನನಗೆ ಪ್ರೇರಣೆಮಾಡಿದನು. ಅದೇ ರೀತಿಯಲ್ಲಿ, ನಾನು ಸಹಾಯಮಾಡುವುದರಲ್ಲಿ ಉದ್ಯುಕ್ತನಾಗಿದ್ದೆನು. ಶಂಬರನ ದುಷ್ಟಸ್ವಭಾವಗಳನ್ನೂ ದುರ್ಗುಣಗಳನ್ನೂ ಈಕೆಯ ಮಾತುಗಳಿಂದ ನಾನು ಕೇಳಿದಾರಭ್ಯ, ಸುಮಿತ್ರನ ಪ್ರಯತ್ನಕ್ಕೆ ಸಹಾಯಮಾಡುವುದು ಧರ್ಮವಲ್ಲವೆಂದು ನನ್ನ ಮನಸ್ಸಿಗೆ ತೋರಿತು. ಸುಮಿತ್ರನು ಇವಳನ್ನು ನಾನೇ ಅಪಹರಿಸಿದ್ದೇನೆಂದು ನನ್ನ ಮೇಲೆ ಅನೇಕ ತಪ್ಪುಗಳನ್ನು ಆರೋಪಿಸಿದ್ದರಿಂದ, ನಾನು ಆತನ ಮನೆಯನ್ನು ಬಿಟ್ಟು ಕಲ್ಪತರುವಿನಲ್ಲಿ ವಾಸವಾಗಿರುವೆನು. ಈಗ ಈಕೆಯ ಅವಸ್ಥೆಯು ಬಹಳ ಶೋಚನೀಯವಾಗಿದೆ. ನೀನು ಈಕೆ ಯನ್ನು ಈಗ ಸನ್ನಿಹಿತವಾಗಿರುವ ವಿಪತ್ತು ಕಳೆಯುವವರೆಗೂ ಯಾರಿಗೂ ತಿಳಿಯದಂತೆ ಇಟ್ಟು ಕೊಂಡಿದ್ದರೆ, ದೇವರು ನಿನಗೆ ಒಳ್ಳೆಯದನ್ನು ಮಾಡುವನು; ನನ್ನ ಕೈಲಾದ ಉಪಕಾರವನ್ನು ನಾನೂ ಮಾಡುವೆನು.

ಸತ್ಯಶರ್ಮ- ಬಹುಕಾಲದಿಂದ ನಾವುಗಳು ಆಕೆಯ ಉಪಕಾರಗಳನ್ನು ಆಗಾಗ್ಗೆ ಹೊಂದುತ್ತಲಿದ್ದೇವೆ. ಈಕೆಯ ಈ ಕಷ್ಟ ಕಾಲದಲ್ಲಿ ನಮ್ಮ ಕೈಲಾದ ಉಪಕಾರವನ್ನು ಮಾಡುವುದು ನಮಗೆ ಕರ್ತವ್ಯವಾಗಿದೆ. ಈಕೆಯು, ರೂಪಯಯೌವನಗಳಲ್ಲಿಯೂ ವಿದ್ಯಾವೈದುಷ್ಯಗಳಲ್ಲಿಯ ಸೌಶೀಲ್ಯಾದಿ ಗುಣಗಳಲ್ಲಿಯೂ ಅಸಾಧಾರಣಳಾಗಿರುತ್ತಾಳೆ. ಇಂಥ ಅಮೂಲ್ಯ