ಪುಟ:ಪರಂತಪ ವಿಜಯ ೨.djvu/೭೦

ವಿಕಿಸೋರ್ಸ್ದಿಂದ
ಈ ಪುಟವನ್ನು ಪ್ರಕಟಿಸಲಾಗಿದೆ

೬೦

ಪರಂತಪ ವಿಜಯ


ಕಾಲಕ್ಕೆ ತಕ್ಕುವುಗಳಾಗಿರುವುವು. ನನಗೆ ತೋರಿದ ರೀತಿಯಲ್ಲಿ ನಾನು ನಡೆಸುತೇನೆ. ಈ ವಿಷಯದಲ್ಲಿ ನಿನ್ನ ಧರ್ಮೋಪದೇಶಗಳನ್ನು ಕೇಳತಕ್ಕವನಲ್ಲ.
ಸುಮಿತ್ರ- ಯಾವ ಕೆಲಸವನ್ನು ಮಾಡಬೇಕಾದರೂ, ಪೂರ್ವಭಾವಿಯಾಗಿಯೇ ಪರಿಣಾಮವನ್ನು ಯೋಚಿಸಬೇಕು. ಹಾಗಿಲ್ಲದಿದ್ದರೆ, ಅನರ್ಥ ವುಂಟಾಗುವುದೇ ನಿಜ. ಅದು ಹಾಗಿರಲಿ ; ಈ ಪರಂತಪನು ಸಾಮಾನ್ಯನಲ್ಲ. ದುಷ್ಟರನ್ನು ಹೇಗಾದರೂ ಅಡಗಿಸುವನು. ಮಾಧವನು, ಈತನಲ್ಲಿ ಪುತ್ರವಾತ್ಸಲ್ಯದಿಂದ ತನ್ನ ಸರ್ವಸ್ವವನ್ನೂ ಈತನಿಗೇ ಕೊಟ್ಟರುವನು. ಅವನು ಬರೆದ ಉಯಿಲಿನಂತೆ, ಈ ಆಸ್ತಿಯನ್ನೆಲ್ಲ ಸ್ವಾಧೀನ ಪಡಿಸಿಕೊಳ್ಳುವುದಕ್ಕಾಗಿ ಈತನು ಇಲ್ಲಿಗೆ ಬಂದಿರುವನು. ನಿನಗೂ ಕಾಮಮೋಹಿನಿಗೂ ವಿವಾಹವಾದ ಮೇಲೆ ಈ ಸಂಗತಿಯನ್ನು ತಿಳಿಯಿಸಬೇಕೆಂದು ನಿಶ್ಚಯಿಸಿದ್ದೆನು; ಇದಕ್ಕೆ ಅವನೂ ಒಪ್ಪಿದ್ದನು. ಇದಲ್ಲದೆ, ಇನ್ನೊಂದು ರಹಸ್ಯವುಂಟು. ಇವನು ಕೈಪೆಟ್ಟಿಗೆಯನ್ನು ತೆಗೆದಾಗ, ದೊಡ್ಡ ಮೊಹರುಳ್ಳ ಒಂದು ಕಾಗದವು ಕಾಣಬಂದಿತು. ಅದನ್ನು ಮಾತ್ರ ಮರೆಸಿ, ಉಯಿಲು ಮೊದಲಾದುವುಗಳನ್ನೆಲ್ಲ ತೋರಿಸಿದನು. ಆದಿನ ರಾತ್ರಿಯೇ ಈತನು ನಿದ್ದೆ ಮಾಡುವ ಕಾಲದಲ್ಲಿ ಬೇರೆ ಬೀಗದ ಕೈಯನ್ನು ತಂದು ಆ ಕಾಗದವನ್ನು ಪರೀಕ್ಷಿಸಿದೆನು. ಇವನು ದುಷ್ಟನಿಗ್ರಹದ ವಿಷಯದಲ್ಲಿ ಸರಕಾರದಿಂದ ಸರ್ವಾಧಿಕಾರವನ್ನು ಹೊಂದಿರುವನೆಂದು ಆ ಕಾಗದದಿಂದ ಗೊತ್ತಾಯಿತು. ಇಂಥವನ ಮೇಲೆ ಪ್ರತಿಭಟಿಸುವುದು ಉಚಿತವಲ್ಲ.
  ಈ ಮಾತನ್ನು ಕೇಳಿದಕೂಡಲೆ, ಶಂಬರನು ಚಿಂತಾಪರವಶನಾಗಿ ಮೂರ್ಛೆಬಿದ್ದು, ಶೈತ್ಯೋಪಚಾರಗಳಿಂದ ಪ್ರಜ್ಞೆಯನ್ನು ಹೊಂದಿ, ಸುಮಿತ್ರ ತನನ್ನು ಕುರಿತು 'ಅಯ್ಯೋ ! ಸರ್ವಪ್ರಕಾರದಿಂದಲೂ ನಾನು ಕೆಟ್ಟೆನು. ಮಾಧವನಿಗೆ ಹಕ್ಕುದಾರನೆಂದೂ, ಅವನ ಐಶ್ವರ್ಯವೆಲ್ಲ ನನ್ನದೆಂದೂ ತಿಳಿದಿದ್ದೆನು. ಅದೆಲ್ಲವೂ ಪರಾಧೀನವಾಯಿತು. ಕಾಮಮೋಹಿನಿಯಾದರೂ ದೊರಕಬಹುದೆಂದಿದ್ದನು. ಇವಳೂ ಪರಾಧೀನಳಾದಳು. ನಾನು ಬಹು ನಿರ್ಭಾಗ್ಯನು. ಇನ್ನು ನಾನು ಜೀವಿಸಿರಬಾರದು. ಈ ಕ್ಷಣವೇ ಪರಂತಪನನ್ನು ಯಾವ ವಿಧದಿಂದಲಾದರೂ ಕೊಂದು, ಮಾಧವನ ಐಶ್ವರ್ಯವನ್ನೂ ಕಾಮಮೋಹಿನಿಯನ್ನೂ ಹೊಂದುವ ಪ್ರಯತ್ನವನ್ನು ಮಾಡುವೆನು ;